ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದೆ.ಕಾವೇರಿ, ಲಕ್ಷ್ಮಣತೀರ್ಥ ನದಿಗಳೂ ಸೇರಿದಂತೆ ಹಳ್ಳ– ಕೊಳ್ಳಗಳು ಮತ್ತಷ್ಟು ಅಪಾಯಕಾರಿಯಾಗಿ ಹರಿಯುತ್ತಿವೆ. ಭಾಗಮಂಡಲದಲ್ಲಿ ನೀರಿನಮಟ್ಟ ಏರಿಕೆ ಆಗುತ್ತಲೇ ಇದ್ದು, ಭಗಂಡೇಶ್ವರನಿಗೆ ಜಲದಿಗ್ಬಂಧನವಾಗಿದೆ. ದೇಗುಲದ ಒಳಕ್ಕೂ ಪ್ರವಾಹದ ನೀರು ನುಗ್ಗಿದೆ.