<p><strong>ನಾಪೋಕ್ಲು:</strong> ಕೂವಲೆ ಪುಟ್ಟ್, ಮದ್ದ್ ಪುಟ್ಟ್, ಬಾಳೆನುರ್ಕ್, ಬಡವಕಜ್ಜಾಯ, ಕೇಂಬು ಕರಿ, ಕಾಡು ಮಾಂಗೆ ಕರಿ, ಕುರುಕರಿ, ಚಕ್ಕೆಕುರು ಪಜ್ಜಿ… ಒಂದೇ ಎರಡೇ ಹತ್ತು ಹಲವು ಕೊಡವ ಸಮುದಾಯದ ತಿಂಡಿ ತಿನಿಸುಗಳು ನೆರೆದಿದ್ದವರ ಬಾಯಲ್ಲಿ ನೀರೂರಿಸಿದವು.</p>.<p>ಕೈಲ್ ಪೋಳ್ದ್ ತೀನಿ ನಮ್ಮೆಯ ವೈವಿಧ್ಯಮಯ ಕಾರ್ಯಕ್ರಮಗಳಿಗೆ ನಾಪೋಕ್ಲು ಕೊಡವ ಸಮಾಜ ಸಾಕ್ಷಿಯಾಯಿತು.</p>.<p>ನಾಪೋಕ್ಲು ಕೊಡವ ಸಮಾಜದ ಪೊಮ್ಮಕ್ಕಡ ಪರಿಷತ್ ವತಿಯಿಂದ ಇಲ್ಲಿನ ಕೊಡವ ಸಮಾಜದಲ್ಲಿ ಗುರುವಾರ ನಡೆದ ಕೈಲ್ ಪೋಳ್ದ್ ತೀನಿ ನಮ್ಮೆ ಕಾರ್ಯಕ್ರಮವನ್ನು ಸಮಾಜಸೇವಕಿ ಕೇಟೋಳಿರ ಜಾಜಿ ಕುಟ್ಟಪ್ಪ ಮತ್ತು ತಿನಿಸುಗಳ ಪ್ರದರ್ಶನವನ್ನು ಸಮಾಜಸೇವಕಿ ಮಂಡೀರ ಸರೋಜ ದೇವಯ್ಯ ಉದ್ಘಾಟಿಸಿದರು.</p>.<p>ನಾಪೋಕ್ಲು ಕೆಪಿಎಸ್ ಶಾಲೆಯ ಪ್ರಾಂಶುಪಾಲರಾದ ಮೇದುರ ವಿಶಾಲ ಕುಶಾಲಪ್ಪ ಮಾತನಾಡಿ, ‘ಕೊಡವ ಜನಾಂಗ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಆಗಷ್ಟೇ ಜನಾಂಗದ ಅಭಿವೃದ್ಧಿ ಸಾಧ್ಯ. ಸಂಸ್ಕೃತಿ, ಆಚಾರ, ವಿಚಾರಗಳನ್ನು ಯುವ ಜನಾಂಗ ರೂಢಿಸಿಕೊಳ್ಳಬೇಕು’ ಎಂದರು.</p>.<p>‘ಸಮಾಜದ ಮಕ್ಕಳಿಗೆ ಪಾರಂಪರಿಕ ಸಂಪ್ರದಾಯಗಳನ್ನು ತಿಳಿಸುವ ಕೆಲಸ ಆಗಬೇಕಿದೆ. ಮಕ್ಕಳ ಪೋಷಣೆಯಲ್ಲಿ ತಾಯಂದಿರ ಪಾತ್ರ ಮಹತ್ವದ್ದು. ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವಂಥದ್ದು ಪೋಷಕರ ಜವಾಬ್ದಾರಿ.ಮಹಿಳೆಯರು ಸ್ವಾವಲಂಬಿಗಳಾಗಲು ಉತ್ತಮ ಹವ್ಯಾಸಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.</p>.<p>ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ ಮಾತನಾಡಿ, ‘ಹಬ್ಬ, ಹರಿದಿನ, ಆಚಾರ, ವಿಚಾರಗಳಲ್ಲಿ ಕೊಡವ ಭಾಷೆಯ ಬಳಕೆ ಹೆಚ್ಚು ಹೆಚ್ಚು ಆಗಬೇಕು. ಭಾಷೆ ಉಳಿಸುವ ಜವಾಬ್ದಾರಿ ತಾಯಂದಿರ ಮೇಲಿದೆ. ತೀನಿ ನಮ್ಮೆ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ದಿರಿಸಿನಲ್ಲಿ ಕೊಡವ ಮಹಿಳೆಯರು ಪಾಲ್ಗೊಳ್ಳಬೇಕು. ಈ ಕೂಟದಲ್ಲಿ ಪುರುಷರು ಸಹ ತಿಂಡಿ ತಿನಿಸು ತಯಾರಿಸಿ ಪಾಲ್ಗೊಳ್ಳುವಂತಾಗಲಿ’ ಎಂದರು.</p>.<p>ಕೊಡವ ಸಂಸ್ಕೃತಿಯನ್ನು ಬೆಳೆಸುವಲ್ಲಿ ಕೊಡವ ಮಹಿಳೆಯರ ಪಾತ್ರ ವಿಷಯದ ಕುರಿತು ಕದ್ದಣಿಯಂಡ ವಂದನಾ ಚಿಣ್ಣಪ್ಪ ವಿಚಾರ ಮಂಡಿಸಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮೊಮ್ಮಕ್ಕಡ ಪರಿಷತ್ ಅಧ್ಯಕ್ಷೆ ಬಾಳೆಯಡ ನಿಶಾ ಮೇದಪ್ಪ ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ಬಲ್ಲಮಾವಟಿ ಗ್ರಾಮದ ಲೇಖಕಿ ಅಪ್ಪಚೆಟ್ಟೋಳಂಡ ವನು ವಸಂತ, ಮಡಿಕೇರಿಯ ಕೆಎಸ್ಒಯು ಪ್ರಾದೇಶಿಕ ಕೇಂದ್ರದ ನಿರ್ದೇಶಕಿ ಮುಕ್ಕಾಟಿರ ಸ್ಮಿತಾ ಸುಬ್ಬಯ್ಯ ಅವರನ್ನು ಸನ್ಮಾನಿಸಲಾಯಿತು.</p>.<p>ಬಾಯಲ್ಲಿ ನೀರೂರಿಸುವ ಮಳೆಗಾಲದ ಖಾದ್ಯಗಳಾದ ಸಾರು, ಸಾಂಬಾರು, ಚಟ್ನಿ, ಪಲ್ಯ ಸೇರಿದಂತೆ ನೂರಾರು ತಿನಿಸು ಹಾಗೂ ವಿವಿಧ ಕ್ರೀಡಾ ಕೂಟ ಸ್ಪರ್ಧೆ ಆಯೋಜಿಸಿದ ಬಳಿಕ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಕೊಡವ ಸಮಾಜದ ಉಪ ಅಧ್ಯಕ್ಷ ಕರವಂಡ ಲವ ನಾಣಯ್ಯ, ಕೊಡವ ಸಮಾಜದ ಮತ್ತು ಮೊಮ್ಮಕ್ಕಡ ಪರಿಷತ್ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಪೋಕ್ಲು:</strong> ಕೂವಲೆ ಪುಟ್ಟ್, ಮದ್ದ್ ಪುಟ್ಟ್, ಬಾಳೆನುರ್ಕ್, ಬಡವಕಜ್ಜಾಯ, ಕೇಂಬು ಕರಿ, ಕಾಡು ಮಾಂಗೆ ಕರಿ, ಕುರುಕರಿ, ಚಕ್ಕೆಕುರು ಪಜ್ಜಿ… ಒಂದೇ ಎರಡೇ ಹತ್ತು ಹಲವು ಕೊಡವ ಸಮುದಾಯದ ತಿಂಡಿ ತಿನಿಸುಗಳು ನೆರೆದಿದ್ದವರ ಬಾಯಲ್ಲಿ ನೀರೂರಿಸಿದವು.</p>.<p>ಕೈಲ್ ಪೋಳ್ದ್ ತೀನಿ ನಮ್ಮೆಯ ವೈವಿಧ್ಯಮಯ ಕಾರ್ಯಕ್ರಮಗಳಿಗೆ ನಾಪೋಕ್ಲು ಕೊಡವ ಸಮಾಜ ಸಾಕ್ಷಿಯಾಯಿತು.</p>.<p>ನಾಪೋಕ್ಲು ಕೊಡವ ಸಮಾಜದ ಪೊಮ್ಮಕ್ಕಡ ಪರಿಷತ್ ವತಿಯಿಂದ ಇಲ್ಲಿನ ಕೊಡವ ಸಮಾಜದಲ್ಲಿ ಗುರುವಾರ ನಡೆದ ಕೈಲ್ ಪೋಳ್ದ್ ತೀನಿ ನಮ್ಮೆ ಕಾರ್ಯಕ್ರಮವನ್ನು ಸಮಾಜಸೇವಕಿ ಕೇಟೋಳಿರ ಜಾಜಿ ಕುಟ್ಟಪ್ಪ ಮತ್ತು ತಿನಿಸುಗಳ ಪ್ರದರ್ಶನವನ್ನು ಸಮಾಜಸೇವಕಿ ಮಂಡೀರ ಸರೋಜ ದೇವಯ್ಯ ಉದ್ಘಾಟಿಸಿದರು.</p>.<p>ನಾಪೋಕ್ಲು ಕೆಪಿಎಸ್ ಶಾಲೆಯ ಪ್ರಾಂಶುಪಾಲರಾದ ಮೇದುರ ವಿಶಾಲ ಕುಶಾಲಪ್ಪ ಮಾತನಾಡಿ, ‘ಕೊಡವ ಜನಾಂಗ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಆಗಷ್ಟೇ ಜನಾಂಗದ ಅಭಿವೃದ್ಧಿ ಸಾಧ್ಯ. ಸಂಸ್ಕೃತಿ, ಆಚಾರ, ವಿಚಾರಗಳನ್ನು ಯುವ ಜನಾಂಗ ರೂಢಿಸಿಕೊಳ್ಳಬೇಕು’ ಎಂದರು.</p>.<p>‘ಸಮಾಜದ ಮಕ್ಕಳಿಗೆ ಪಾರಂಪರಿಕ ಸಂಪ್ರದಾಯಗಳನ್ನು ತಿಳಿಸುವ ಕೆಲಸ ಆಗಬೇಕಿದೆ. ಮಕ್ಕಳ ಪೋಷಣೆಯಲ್ಲಿ ತಾಯಂದಿರ ಪಾತ್ರ ಮಹತ್ವದ್ದು. ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವಂಥದ್ದು ಪೋಷಕರ ಜವಾಬ್ದಾರಿ.ಮಹಿಳೆಯರು ಸ್ವಾವಲಂಬಿಗಳಾಗಲು ಉತ್ತಮ ಹವ್ಯಾಸಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.</p>.<p>ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ ಮಾತನಾಡಿ, ‘ಹಬ್ಬ, ಹರಿದಿನ, ಆಚಾರ, ವಿಚಾರಗಳಲ್ಲಿ ಕೊಡವ ಭಾಷೆಯ ಬಳಕೆ ಹೆಚ್ಚು ಹೆಚ್ಚು ಆಗಬೇಕು. ಭಾಷೆ ಉಳಿಸುವ ಜವಾಬ್ದಾರಿ ತಾಯಂದಿರ ಮೇಲಿದೆ. ತೀನಿ ನಮ್ಮೆ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ದಿರಿಸಿನಲ್ಲಿ ಕೊಡವ ಮಹಿಳೆಯರು ಪಾಲ್ಗೊಳ್ಳಬೇಕು. ಈ ಕೂಟದಲ್ಲಿ ಪುರುಷರು ಸಹ ತಿಂಡಿ ತಿನಿಸು ತಯಾರಿಸಿ ಪಾಲ್ಗೊಳ್ಳುವಂತಾಗಲಿ’ ಎಂದರು.</p>.<p>ಕೊಡವ ಸಂಸ್ಕೃತಿಯನ್ನು ಬೆಳೆಸುವಲ್ಲಿ ಕೊಡವ ಮಹಿಳೆಯರ ಪಾತ್ರ ವಿಷಯದ ಕುರಿತು ಕದ್ದಣಿಯಂಡ ವಂದನಾ ಚಿಣ್ಣಪ್ಪ ವಿಚಾರ ಮಂಡಿಸಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮೊಮ್ಮಕ್ಕಡ ಪರಿಷತ್ ಅಧ್ಯಕ್ಷೆ ಬಾಳೆಯಡ ನಿಶಾ ಮೇದಪ್ಪ ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ಬಲ್ಲಮಾವಟಿ ಗ್ರಾಮದ ಲೇಖಕಿ ಅಪ್ಪಚೆಟ್ಟೋಳಂಡ ವನು ವಸಂತ, ಮಡಿಕೇರಿಯ ಕೆಎಸ್ಒಯು ಪ್ರಾದೇಶಿಕ ಕೇಂದ್ರದ ನಿರ್ದೇಶಕಿ ಮುಕ್ಕಾಟಿರ ಸ್ಮಿತಾ ಸುಬ್ಬಯ್ಯ ಅವರನ್ನು ಸನ್ಮಾನಿಸಲಾಯಿತು.</p>.<p>ಬಾಯಲ್ಲಿ ನೀರೂರಿಸುವ ಮಳೆಗಾಲದ ಖಾದ್ಯಗಳಾದ ಸಾರು, ಸಾಂಬಾರು, ಚಟ್ನಿ, ಪಲ್ಯ ಸೇರಿದಂತೆ ನೂರಾರು ತಿನಿಸು ಹಾಗೂ ವಿವಿಧ ಕ್ರೀಡಾ ಕೂಟ ಸ್ಪರ್ಧೆ ಆಯೋಜಿಸಿದ ಬಳಿಕ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಕೊಡವ ಸಮಾಜದ ಉಪ ಅಧ್ಯಕ್ಷ ಕರವಂಡ ಲವ ನಾಣಯ್ಯ, ಕೊಡವ ಸಮಾಜದ ಮತ್ತು ಮೊಮ್ಮಕ್ಕಡ ಪರಿಷತ್ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>