<p><strong>ಸಿದ್ದಾಪುರ</strong>: ಕರಡಿಗೋಡುದಲ್ಲಿ ಭಾನುವಾರ ಹುಲಿ ಕಾಣಿಸಿಗೊಂಡಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<p>ಕರಡಿಗೋಡುವಿನಿಂದ ಇವಾಲ್ವ ಬ್ಯಾಕ್ ರೆಸಾರ್ಟ್ ಮುಖಾಂತರ ಸಿದ್ದಾಪುರಕ್ಕೆ ತೆರಳುವ ರಸ್ತೆಯ ಕಂಬೀರಂಡ ಎಸ್ಟೇಟ್ ಸಮೀಪದ ಮುಖ್ಯ ರಸ್ತೆಯಲ್ಲಿ ಹುಲಿ ಕಾಣಿಸಿಗೊಂಡಿದ್ದು, ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರೊಬ್ಬರು ವಿಡಿಯೊ ಚಿತ್ರೀಕರಣ ಮಾಡಿದ್ದರು. ಸ್ಥಳೀಯ ವಾಟ್ಸಪ್ ಗುಂಪುಗಳಲ್ಲಿ ವಿಡಿಯೊ ಹರಿದಾಡುತ್ತಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ.</p>.<p>ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಶಿವರಾಂ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಕರಡಿಗೋಡಿನ ಕಾಫಿ ತೋಟಗಳಲ್ಲಿ ಕಾರ್ಯಾಚರಣೆ ನಡೆಸಿದರು.</p>.<p>ಬಳಿಕ ಮಾತನಾಡಿದ ಅವರು, ಹುಲಿ ಸಂಚರಿಸಿರುವ ಹೆಜ್ಜೆ ಗುರುತು ಪತ್ತೆ ಹಚ್ಚಿದ್ದು, ಹುಲಿಯು ಮತ್ತೆ ಅರಣ್ಯದ ಕಡೆಗೆ ತೆರಳಿದೆ ಎಂದು ಮಾಹಿತಿ ನೀಡಿದರು.</p>.<p>ಉಪ ವಲಯ ಅರಣ್ಯಾಧಿಕಾರಿ ಸಂಜಿತ್ ಸೋಮಯ್ಯ, ಆನೆ ಕಾರ್ಯಪಡೆ ಹಾಗೂ ಆರ್.ಆರ್.ಟಿ ಸಿಬ್ಬಂದಿಗಳು ಹಾಜರಿದ್ದರು.</p>.<p>ಕಾಡಾನೆ, ಕಾಡುಕೋಣಗಳ ಉಪಟಳದಿಂದ ಬೇಸತ್ತಿರುವ ಗ್ರಾಮಸ್ಥರು ಇದೀಗ ಹುಲಿ ಓಡಾಟದಿಂದ ಮತ್ತಷ್ಟು ಭಯಭೀತರಾಗಿದ್ದಾರೆ. ಕಾಡಾನೆಗಳು ಕಾಫಿ ತೋಟದಲ್ಲೇ ಬೀಡು ಬಿಡುತ್ತಿದ್ದು, ಕಾಫಿ ಸೇರಿದಂತೆ ಕೃಷಿ ಫಸಲನ್ನು ನಾಶ ಮಾಡುತ್ತಿದೆ. ಹುಲಿ ಓಡಾಟದಿಂದಾಗಿ ಕಾರ್ಮಿಕರು ಕೂಡ ಕೆಲಸಕ್ಕೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ</strong>: ಕರಡಿಗೋಡುದಲ್ಲಿ ಭಾನುವಾರ ಹುಲಿ ಕಾಣಿಸಿಗೊಂಡಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<p>ಕರಡಿಗೋಡುವಿನಿಂದ ಇವಾಲ್ವ ಬ್ಯಾಕ್ ರೆಸಾರ್ಟ್ ಮುಖಾಂತರ ಸಿದ್ದಾಪುರಕ್ಕೆ ತೆರಳುವ ರಸ್ತೆಯ ಕಂಬೀರಂಡ ಎಸ್ಟೇಟ್ ಸಮೀಪದ ಮುಖ್ಯ ರಸ್ತೆಯಲ್ಲಿ ಹುಲಿ ಕಾಣಿಸಿಗೊಂಡಿದ್ದು, ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರೊಬ್ಬರು ವಿಡಿಯೊ ಚಿತ್ರೀಕರಣ ಮಾಡಿದ್ದರು. ಸ್ಥಳೀಯ ವಾಟ್ಸಪ್ ಗುಂಪುಗಳಲ್ಲಿ ವಿಡಿಯೊ ಹರಿದಾಡುತ್ತಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ.</p>.<p>ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಶಿವರಾಂ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಕರಡಿಗೋಡಿನ ಕಾಫಿ ತೋಟಗಳಲ್ಲಿ ಕಾರ್ಯಾಚರಣೆ ನಡೆಸಿದರು.</p>.<p>ಬಳಿಕ ಮಾತನಾಡಿದ ಅವರು, ಹುಲಿ ಸಂಚರಿಸಿರುವ ಹೆಜ್ಜೆ ಗುರುತು ಪತ್ತೆ ಹಚ್ಚಿದ್ದು, ಹುಲಿಯು ಮತ್ತೆ ಅರಣ್ಯದ ಕಡೆಗೆ ತೆರಳಿದೆ ಎಂದು ಮಾಹಿತಿ ನೀಡಿದರು.</p>.<p>ಉಪ ವಲಯ ಅರಣ್ಯಾಧಿಕಾರಿ ಸಂಜಿತ್ ಸೋಮಯ್ಯ, ಆನೆ ಕಾರ್ಯಪಡೆ ಹಾಗೂ ಆರ್.ಆರ್.ಟಿ ಸಿಬ್ಬಂದಿಗಳು ಹಾಜರಿದ್ದರು.</p>.<p>ಕಾಡಾನೆ, ಕಾಡುಕೋಣಗಳ ಉಪಟಳದಿಂದ ಬೇಸತ್ತಿರುವ ಗ್ರಾಮಸ್ಥರು ಇದೀಗ ಹುಲಿ ಓಡಾಟದಿಂದ ಮತ್ತಷ್ಟು ಭಯಭೀತರಾಗಿದ್ದಾರೆ. ಕಾಡಾನೆಗಳು ಕಾಫಿ ತೋಟದಲ್ಲೇ ಬೀಡು ಬಿಡುತ್ತಿದ್ದು, ಕಾಫಿ ಸೇರಿದಂತೆ ಕೃಷಿ ಫಸಲನ್ನು ನಾಶ ಮಾಡುತ್ತಿದೆ. ಹುಲಿ ಓಡಾಟದಿಂದಾಗಿ ಕಾರ್ಮಿಕರು ಕೂಡ ಕೆಲಸಕ್ಕೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>