ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು: ಸಾಕಾನೆಗಳ ಸಹಾಯದಿಂದ ಕಾರ್ಯಾಚರಣೆ, ಹುಲಿ ಸೆರೆ

Last Updated 20 ಸೆಪ್ಟೆಂಬರ್ 2022, 16:27 IST
ಅಕ್ಷರ ಗಾತ್ರ

ಸಿದ್ದಾಪುರ (ಕೊಡಗು ಜಿಲ್ಲೆ): ಇಲ್ಲಿನ ಮಾಲ್ದಾರೆ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಜಾನುವಾರುಗಳನ್ನು ಕೊಂದು ಹಾಕುತ್ತಿದ್ದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಮಂಗಳವಾರ ಸೆರೆ ಹಿಡಿದಿದ್ದಾರೆ.

ಸುಮಾರು 13 ವರ್ಷ ವಯಸ್ಸಿನ ಗಂಡು ಹುಲಿ ಇದಾಗಿದ್ದು, ಎರಡು ಬಾರಿ ಅರಿವಳಿಕೆ ಚುಚ್ಚುಮದ್ದು ನೀಡಿದ ನಂತರ ಸೆರೆ ಹಿಡಿಯಲಾಯಿತು.

4 ಸಾಕಾನೆಗಳ ಸಹಾಯದಿಂದ ಕಾರ್ಯಾಚರಣೆ ನಡೆಸಲಾಗತ್ತಿತ್ತು. ಒಮ್ಮೆ ಅರಿವಳಿಕೆ ಚುಚ್ಚುಮದ್ದು ನೀಡಿದ ನಂತರವೂ ಹುಲಿ ತಪ್ಪಿಸಿಕೊಂಡಿತ್ತು. ಸದ್ಯ, ಸಿಕ್ಕಿರುವ ಹುಲಿಯ ಕಾಲಿಗೆ ಗಾಯವಾಗಿದ್ದು, ಮೈಸೂರಿನ ಚಾಮರಾಜೇಂದ್ರ ಮೃಗಾಲಯಕ್ಕೆ ಚಿಕಿತ್ಸೆಗಾಗಿ ಕಳುಹಿಸಲು ಅರಣ್ಯ ಇಲಾಖೆ ಅಧಿಕಾರಿಗಳು ನಿರ್ಧರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT