ಶನಿವಾರ ಸಂಜೆ ಸೌದೆ ತರಲು ತೋಟಕ್ಕೆ ತೆರಳಿದ್ದ ಕುಮಟೂರು ಗ್ರಾಮದ ಪಣಿ ಯರವರ ಅಯ್ಯಪ್ಪ (14) ಎಂಬ ಬಾಲಕನ ಮೇಲೆ ಹುಲಿ ದಾಳಿ ನಡೆಸಿ ಸಾಯಿಸಿತ್ತು. ಇದೇ ಹುಲಿ ಭಾನುವಾರ ಬೆಳಿಗ್ಗೆ ಟಿ.ಶೆಟ್ಟಿಗೇರಿ ಗ್ರಾಮದಲ್ಲಿ ಕಾರ್ಮಿಕ ಮಹಿಳೆ ಚಿಣ್ಣಿ (60) ಅವರ ಮೇಲೆ ದಾಳಿ ನಡೆಸಿ, ಬಲಿ ಪಡೆದಿತ್ತು. ರಸ್ತೆ ಬದಿಯಲ್ಲಿ ಅಣಬೆ ಹುಡುಕಲು ಹೋಗಿದ್ದ ವೇಳೆ ಕಾರ್ಮಿಕ ಮಹಿಳೆ ಮೇಲೆ ದಾಳಿ ಮಾಡಿ, ದೇಹವನ್ನು ಎಳೆದೊಯ್ಯುತ್ತಿದ್ದ ದೃಶ್ಯ ಕಂಡು ಕಾರ್ಮಿಕರು ಕಿರುಚಿಕೊಂಡಾಗ ಹುಲಿ ಓಡಿಹೋಗಿತ್ತು.