‘ಕಾಡಾನೆಗಳ ನಿರಂತರ ಉಪದ್ರವದಿಂದ ಮರಂದೋಡ, ಕೋಕೇರಿ, ನರಿಯಂದಡ, ಚೇಲಾವರ ಗ್ರಾಮಸ್ಥರು ಚೆಯ್ಯಂಡಾಣೆಯಲ್ಲಿ ರಸ್ತೆ ತಡೆ ಈಚೆಗೆ ನಡೆಸಿದರು. ನೆಲಜಿ, ಪೇರೂರು ಗ್ರಾಮ ವ್ಯಾಪ್ತಿಗಳಲ್ಲೂ ಕಾಡಾನೆಗಳ ಉಪಟಳದಿಂದ ಗ್ರಾಮಸ್ಥರು ಬೇಸತ್ತಿದ್ದಾರೆ. ಹತ್ತಾರು ಕಾರಣಗಳಿಂದ ಭತ್ತದ ಕೃಷಿಯಿಂದ ವಿಮುಖರಾಗುತ್ತಿರುವ ರೈತರಿಗೆ ಕಾಡಾನೆಗಳ ಉಪಟಳ ನುಂಗಲಾರದ ತುತ್ತಾಗಿದೆ. ಇದೀಗ ನಾಟಿ ಮಾಡುವ ಅವಧಿಯಾಗಿದ್ದು ಪೈರುಗಳು ನಾಶವಾದರೆ ರೈತರು ಭತ್ತದ ಕೃಷಿಯನ್ನೇ ಕೈಬಿಡುವ ಪರಿಸ್ಥಿತಿ ಎದುರಾಗಲಿದೆ’ ಎಂದು ಚಂಡೀರ ಈರಪ್ಪ ಹೇಳಿದರು.