<p><strong>ಮಡಿಕೇರಿ:</strong> ಇಲ್ಲಿನ ಬಾಲಭವನದಲ್ಲಿ ಬುಧವಾರ ನಡೆದ ವಿಶ್ವ ಹಿಂದೂ ಪರಿಷತ್ತಿನ ಸ್ಥಾಪನಾ ದಿನದಲ್ಲಿ ಮಾತನಾಡಿದ ಎಲ್ಲರೂ ಹಿಂದೂ ಧರ್ಮಿಯರೆಲ್ಲರು ಬೇಧಭಾವ ಮರೆತು ಒಂದಾಗಬೇಕು ಎಂಬ ಕರೆಯನ್ನು ನೀಡಿದರು.</p>.<p>ವಿಶ್ವ ಹಿಂದೂ ಪರಿಷತ್ತಿನ ಸ್ಥಾಪನಾ ದಿನ ಮತ್ತು ಷಷ್ಠಿಪೂರ್ತಿ ಸಮಾರೋಪ ಸಂಭ್ರಮದ ಪ್ರಯುಕ್ತ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಎಲ್ಲರೂ ಸಂಘಟನಾತ್ಮಕವಾಗಿ ಒಂದುಗೂಡುವ ಕುರಿತೇ ಮಾತನಾಡಿದರು.</p>.<p>ಉಕ್ಕುಡದ ರಾಜರಾಜೇಶ್ವರಿ ದೇವಸ್ಥಾನದ ಧರ್ಮದರ್ಶಿ ಎಚ್.ಎನ್.ಗೋವಿಂದಸ್ವಾಮಿ ಮಾತನಾಡಿ, ‘ಹಲವು ಸಂಘಟನೆಗಳು ಹಿಂದೂತ್ವದ ರಕ್ಷಣೆಗಾಗಿ ಹೋರಾಡುತ್ತಿವೆ. ಇವುಗಳೊಂದಿಗೆ ಎಲ್ಲ ಹಿಂದೂಗಳೂ ಒಗ್ಗಟ್ಟಾಗಬೇಕು’ ಎಂದು ಹೇಳಿದರು.</p>.<p>ಪತ್ರಿಕೋದ್ಯಮಿ ಜಿ.ರಾಜೇಂದ್ರ ಮಾತನಾಡಿ, ‘ಸಂಘಟನಾತ್ಮಕ ಶಾಂತಿಯುತ ಹೋರಾಟದಿಂದ ಮಾತ್ರ ಸನಾತನ ಧರ್ಮ ಉಳಿಯಲು ಸಾಧ್ಯ’ ಎಂದು ಪ್ರತಿಪಾದಿಸಿದರು.</p>.<p>ಭಗವದ್ಗೀತೆಯ ಶ್ಲೋಕಗಳನ್ನು ಉಲ್ಲೇಖಿಸಿ ಮಾತನಾಡಿದ ಅವರು, ಸನಾತನ ಧರ್ಮ ಹಾಗೂ ಕೃಷ್ಣನ ಮೌಲ್ಯಗಳನ್ನು ಇಂದಿನ ತಲೆಮಾರಿಗೆ ಪರಿಚಯಿಸುವ ಕೆಲಸ ಮಾಡಬೇಕು ಎಂದರು.</p>.<p>ವಿಶ್ವ ಹಿಂದೂ ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ಉಪಾಧ್ಯಕ್ಷ ನರಸಿಂಹ ಮಾತನಾಡಿ, ‘ನಮ್ಮ ಹೆಣ್ಣುಮಕ್ಕಳ ಮೇಲೆ ಅನ್ಯಾಯವಾದಾಗ ನಾವೆಲ್ಲರೂ ಸಂಘಟಿತರಾಗಿ ಹೋರಾಡಬೇಕು’ ಎಂದು ಕರೆ ನೀಡಿದರು.</p>.<p>‘ನಾವೆಲ್ಲರೂ ಸಂಘಟಿತರಾಗಬೇಕು. ಸಂಘಟಿತರಾದರೆ ಮಾತ್ರ ನಮ್ಮ ಮುಂದಿನ ತಲೆಮಾರು ಉಳಿಯುತ್ತದೆ’ ಎಂದು ಹೇಳಿದರು.</p>.<p>ಪರಿಷತ್ತಿನ ಮಡಿಕೇರಿ ನಗರ ಪ್ರಖಂಡದ ಅಧ್ಯಕ್ಷ ಕೆ.ಎಸ್.ಗುರುಪ್ರಸಾದ್ ಮಾತನಾಡಿ, ‘ಎಲ್ಲರೂ ಒಗ್ಗಟ್ಟಾಗಿ ಸಾಗೋಣ’ ಎಂದು ತಿಳಿಸಿದರು.</p>.<p>ಆರ್ಥಿಕ ಸಲಹೆಗಾರರಾದ ಗೀತಾ ಗಿರೀಶ್ ಅವರು, ‘ಪಾಶ್ಚಾತೀಕರಣದಿಂದ ನಮ್ಮ ಸಂಸ್ಕೃತಿಯನ್ನು ಬಿಡುತ್ತಿದ್ದೇವೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಯಾವುದೇ ವಿಚಾರದಲ್ಲಾದರೂ ಸರಿ ವೈಭವಿಕರಣ ಬೇಡ ಸರಳೀಕರಣ ಇರಬೇಕು. ಪ್ಲಾಸ್ಟಿಕ್ ಬಿಟ್ಟು ಪರಿಸರ ಉಳಿಸಬೇಕು. ಗೋಪೂಜೆ, ಅಶ್ವತ್ಥ ವೃಕ್ಷದ ಆರಾಧನೆ, ದೇವರ ನಾಮಸ್ಮರಣೆ ನಿತ್ಯದ ರೂಢಿಯಾಗಬೇಕು ಎಂದು ಹೇಳಿದರು.</p>.<p>ಹಿರಿಯ ಪತ್ರಕರ್ತ ಚಿ.ನಾ.ಸೋಮೇಶ್ ಮಾತನಾಡಿ, ‘ಕೊಡಗಿನಲ್ಲಿ ಶೈಕ್ಷಣಿಕವಾಗಿ, ವೈದ್ಯಕೀಯವಾಗಿ ವಿವಿಧ ಸೇವಾ ಚಟುವಟಿಕೆಗಳನ್ನು ನಿರ್ವಹಿಸಿಕೊಂಡು ಬಂದು 60 ವರ್ಷಗಳನ್ನು ಪೂರೈಸಿರುವ ಸಂಘಟನೆ ಭವಿಷ್ಯದಲ್ಲಿ ಇನ್ನಷ್ಟು ಪ್ರವರ್ಧಮಾನಕ್ಕೆ ಬೆಳೆಯಲಿ’ ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಚಿ.ನಾ.ಸೋಮೇಶ್ ಅವರ ‘ಭಗವಂತನ ಬೆಳಕು ಭಾರತ’ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ರಮೇಶ್ ಸ್ವಾಗತ ಕೋರಿದರೆ, ಸಹ ಕಾರ್ಯದರ್ಶಿ ಸಂತೋಷ್ ಸರ್ವರಿಗೂ ವಂದಿಸಿದರು.</p>.<blockquote>ಎಲ್ಲ ಹಿಂದೂಗಳೂ ಒಗ್ಗಟ್ಟಾಗಬೇಕು ಸನಾತನ ಧರ್ಮ, ಕೃಷ್ಣನ ಮೌಲ್ಯ ಪರಿಚಯಿಸಿ ಸಂಘಟಿತರಾದರೆ ನಮ್ಮ ಮುಂದಿನ ತಲೆಮಾರು ಉಳಿಯಲಿದೆ</blockquote>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಇಲ್ಲಿನ ಬಾಲಭವನದಲ್ಲಿ ಬುಧವಾರ ನಡೆದ ವಿಶ್ವ ಹಿಂದೂ ಪರಿಷತ್ತಿನ ಸ್ಥಾಪನಾ ದಿನದಲ್ಲಿ ಮಾತನಾಡಿದ ಎಲ್ಲರೂ ಹಿಂದೂ ಧರ್ಮಿಯರೆಲ್ಲರು ಬೇಧಭಾವ ಮರೆತು ಒಂದಾಗಬೇಕು ಎಂಬ ಕರೆಯನ್ನು ನೀಡಿದರು.</p>.<p>ವಿಶ್ವ ಹಿಂದೂ ಪರಿಷತ್ತಿನ ಸ್ಥಾಪನಾ ದಿನ ಮತ್ತು ಷಷ್ಠಿಪೂರ್ತಿ ಸಮಾರೋಪ ಸಂಭ್ರಮದ ಪ್ರಯುಕ್ತ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಎಲ್ಲರೂ ಸಂಘಟನಾತ್ಮಕವಾಗಿ ಒಂದುಗೂಡುವ ಕುರಿತೇ ಮಾತನಾಡಿದರು.</p>.<p>ಉಕ್ಕುಡದ ರಾಜರಾಜೇಶ್ವರಿ ದೇವಸ್ಥಾನದ ಧರ್ಮದರ್ಶಿ ಎಚ್.ಎನ್.ಗೋವಿಂದಸ್ವಾಮಿ ಮಾತನಾಡಿ, ‘ಹಲವು ಸಂಘಟನೆಗಳು ಹಿಂದೂತ್ವದ ರಕ್ಷಣೆಗಾಗಿ ಹೋರಾಡುತ್ತಿವೆ. ಇವುಗಳೊಂದಿಗೆ ಎಲ್ಲ ಹಿಂದೂಗಳೂ ಒಗ್ಗಟ್ಟಾಗಬೇಕು’ ಎಂದು ಹೇಳಿದರು.</p>.<p>ಪತ್ರಿಕೋದ್ಯಮಿ ಜಿ.ರಾಜೇಂದ್ರ ಮಾತನಾಡಿ, ‘ಸಂಘಟನಾತ್ಮಕ ಶಾಂತಿಯುತ ಹೋರಾಟದಿಂದ ಮಾತ್ರ ಸನಾತನ ಧರ್ಮ ಉಳಿಯಲು ಸಾಧ್ಯ’ ಎಂದು ಪ್ರತಿಪಾದಿಸಿದರು.</p>.<p>ಭಗವದ್ಗೀತೆಯ ಶ್ಲೋಕಗಳನ್ನು ಉಲ್ಲೇಖಿಸಿ ಮಾತನಾಡಿದ ಅವರು, ಸನಾತನ ಧರ್ಮ ಹಾಗೂ ಕೃಷ್ಣನ ಮೌಲ್ಯಗಳನ್ನು ಇಂದಿನ ತಲೆಮಾರಿಗೆ ಪರಿಚಯಿಸುವ ಕೆಲಸ ಮಾಡಬೇಕು ಎಂದರು.</p>.<p>ವಿಶ್ವ ಹಿಂದೂ ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ಉಪಾಧ್ಯಕ್ಷ ನರಸಿಂಹ ಮಾತನಾಡಿ, ‘ನಮ್ಮ ಹೆಣ್ಣುಮಕ್ಕಳ ಮೇಲೆ ಅನ್ಯಾಯವಾದಾಗ ನಾವೆಲ್ಲರೂ ಸಂಘಟಿತರಾಗಿ ಹೋರಾಡಬೇಕು’ ಎಂದು ಕರೆ ನೀಡಿದರು.</p>.<p>‘ನಾವೆಲ್ಲರೂ ಸಂಘಟಿತರಾಗಬೇಕು. ಸಂಘಟಿತರಾದರೆ ಮಾತ್ರ ನಮ್ಮ ಮುಂದಿನ ತಲೆಮಾರು ಉಳಿಯುತ್ತದೆ’ ಎಂದು ಹೇಳಿದರು.</p>.<p>ಪರಿಷತ್ತಿನ ಮಡಿಕೇರಿ ನಗರ ಪ್ರಖಂಡದ ಅಧ್ಯಕ್ಷ ಕೆ.ಎಸ್.ಗುರುಪ್ರಸಾದ್ ಮಾತನಾಡಿ, ‘ಎಲ್ಲರೂ ಒಗ್ಗಟ್ಟಾಗಿ ಸಾಗೋಣ’ ಎಂದು ತಿಳಿಸಿದರು.</p>.<p>ಆರ್ಥಿಕ ಸಲಹೆಗಾರರಾದ ಗೀತಾ ಗಿರೀಶ್ ಅವರು, ‘ಪಾಶ್ಚಾತೀಕರಣದಿಂದ ನಮ್ಮ ಸಂಸ್ಕೃತಿಯನ್ನು ಬಿಡುತ್ತಿದ್ದೇವೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಯಾವುದೇ ವಿಚಾರದಲ್ಲಾದರೂ ಸರಿ ವೈಭವಿಕರಣ ಬೇಡ ಸರಳೀಕರಣ ಇರಬೇಕು. ಪ್ಲಾಸ್ಟಿಕ್ ಬಿಟ್ಟು ಪರಿಸರ ಉಳಿಸಬೇಕು. ಗೋಪೂಜೆ, ಅಶ್ವತ್ಥ ವೃಕ್ಷದ ಆರಾಧನೆ, ದೇವರ ನಾಮಸ್ಮರಣೆ ನಿತ್ಯದ ರೂಢಿಯಾಗಬೇಕು ಎಂದು ಹೇಳಿದರು.</p>.<p>ಹಿರಿಯ ಪತ್ರಕರ್ತ ಚಿ.ನಾ.ಸೋಮೇಶ್ ಮಾತನಾಡಿ, ‘ಕೊಡಗಿನಲ್ಲಿ ಶೈಕ್ಷಣಿಕವಾಗಿ, ವೈದ್ಯಕೀಯವಾಗಿ ವಿವಿಧ ಸೇವಾ ಚಟುವಟಿಕೆಗಳನ್ನು ನಿರ್ವಹಿಸಿಕೊಂಡು ಬಂದು 60 ವರ್ಷಗಳನ್ನು ಪೂರೈಸಿರುವ ಸಂಘಟನೆ ಭವಿಷ್ಯದಲ್ಲಿ ಇನ್ನಷ್ಟು ಪ್ರವರ್ಧಮಾನಕ್ಕೆ ಬೆಳೆಯಲಿ’ ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಚಿ.ನಾ.ಸೋಮೇಶ್ ಅವರ ‘ಭಗವಂತನ ಬೆಳಕು ಭಾರತ’ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ರಮೇಶ್ ಸ್ವಾಗತ ಕೋರಿದರೆ, ಸಹ ಕಾರ್ಯದರ್ಶಿ ಸಂತೋಷ್ ಸರ್ವರಿಗೂ ವಂದಿಸಿದರು.</p>.<blockquote>ಎಲ್ಲ ಹಿಂದೂಗಳೂ ಒಗ್ಗಟ್ಟಾಗಬೇಕು ಸನಾತನ ಧರ್ಮ, ಕೃಷ್ಣನ ಮೌಲ್ಯ ಪರಿಚಯಿಸಿ ಸಂಘಟಿತರಾದರೆ ನಮ್ಮ ಮುಂದಿನ ತಲೆಮಾರು ಉಳಿಯಲಿದೆ</blockquote>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>