'ಮೈಸೂರಿನ ಕೆಸರೆ ನಿವಾಸಿಗಳಾದ ಒಂದೇ ಕುಟುಂಬಕ್ಕೆ ಸೇರಿದ ಅಮ್ಜದ್ ಅಹಮ್ಮದ್ (37), ಸಮೀವುಲ್ಲಾ (22), ಜುಲ್ಫಿಕರ್ (36) ಹಾಗೂ ಹೈದರ್ (36) ಅವರನ್ನು ಬಂಧಿಸಲಾಗಿದೆ. ಆರೋಪಿಗಳು ಕೊಡಗು, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಜನವಸತಿಯಿಂದ ದೂರ ಇರುವ ದೇಗುಲಗಳ ಗಂಟೆಗಳನ್ನು ಕಳವು ಮಾಡುತ್ತಿದ್ದರು' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.