<p>ಪ್ರಜಾವಾಣಿ ವಾರ್ತೆ</p>.<p>ಮಡಿಕೇರಿ: ‘ಗಂಡ– ಹೆಂಡತಿ ಜಗಳವಾಡಿದರೆ, ಆಸ್ತಿಗಾಗಿ ವೈಯಕ್ತಿಕ ಜಗಳಗಳಾದರೆ ನಾನೇನು ಮಾಡಬೇಕು, ಪೊಲೀಸರೇನು ಮಾಡಬೇಕು?’ ಎಂದು ಗೃಹಸಚಿವ ಜಿ.ಪರಮೇಶ್ವರ್ ಕೇಳಿದರು. </p>.<p>ಸಮೀಪದ ಸುಂಟಿಕೊಪ್ಪದಲ್ಲಿ ಭಾನುವಾರ ಪೊಲೀಸ್ ವಸತಿಗೃಹಗಳನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಸಾರ್ವಜನಿಕರು ಉತ್ತಮವಾಗಿ ಕಾರ್ಯಕ್ರಮ, ಜಾತ್ರೆ ಮಾಡಲೆಂದು ಮಳೆ, ಬಿಸಿಲೆನ್ನದೇ, ನಿದ್ದೆ ಇಲ್ಲದೇ ಕೆಲಸ ಮಾಡುವ ಪೊಲೀಸರ ನೈತಿಕ ಸ್ಥೈರ್ಯ ಕುಸಿಯುವಂತಹ ಮಾತುಗಳನ್ನು ವಿರೋಧ ಪಕ್ಷದವರು ಆಡಬಾರದು. ಪೊಲೀಸರೇ ಸರಿ ಇಲ್ಲ ಎನ್ನುವುದು, ಕಾನೂನು–ಸುವ್ಯವಸ್ಥೆ ಕುಸಿದಿದೆ ಎಂಬುದು ಸರಿಯಲ್ಲ’ ಎಂದರು.</p>.<p>‘ದೇಶದಲ್ಲಿಯೇ ಕರ್ನಾಟಕ ಪೊಲೀಸ್ ಮೊದಲ ಸ್ಥಾನದಲ್ಲಿದೆ. ಮಹಿಳೆಯರಿಗೆ ಸುರಕ್ಷಿತ ನಗರಗಳಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ. ಅದಕ್ಕಾಗಿಯೇ ಬೆಂಗಳೂರಿಗೆ ಹೂಡಿಕೆದಾರರು ಬರುತ್ತಿದ್ದಾರೆ’ ಎಂದು ಪ್ರತಿಪಾದಿಸಿದರು.</p>.<p>‘ಪೊಲೀಸ್ ವಸತಿ ಗೃಹ ಯೋಜನೆಯನ್ನು 2030ರವರೆಗೂ ಮುಂದುವರಿಸಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಮಡಿಕೇರಿ: ‘ಗಂಡ– ಹೆಂಡತಿ ಜಗಳವಾಡಿದರೆ, ಆಸ್ತಿಗಾಗಿ ವೈಯಕ್ತಿಕ ಜಗಳಗಳಾದರೆ ನಾನೇನು ಮಾಡಬೇಕು, ಪೊಲೀಸರೇನು ಮಾಡಬೇಕು?’ ಎಂದು ಗೃಹಸಚಿವ ಜಿ.ಪರಮೇಶ್ವರ್ ಕೇಳಿದರು. </p>.<p>ಸಮೀಪದ ಸುಂಟಿಕೊಪ್ಪದಲ್ಲಿ ಭಾನುವಾರ ಪೊಲೀಸ್ ವಸತಿಗೃಹಗಳನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಸಾರ್ವಜನಿಕರು ಉತ್ತಮವಾಗಿ ಕಾರ್ಯಕ್ರಮ, ಜಾತ್ರೆ ಮಾಡಲೆಂದು ಮಳೆ, ಬಿಸಿಲೆನ್ನದೇ, ನಿದ್ದೆ ಇಲ್ಲದೇ ಕೆಲಸ ಮಾಡುವ ಪೊಲೀಸರ ನೈತಿಕ ಸ್ಥೈರ್ಯ ಕುಸಿಯುವಂತಹ ಮಾತುಗಳನ್ನು ವಿರೋಧ ಪಕ್ಷದವರು ಆಡಬಾರದು. ಪೊಲೀಸರೇ ಸರಿ ಇಲ್ಲ ಎನ್ನುವುದು, ಕಾನೂನು–ಸುವ್ಯವಸ್ಥೆ ಕುಸಿದಿದೆ ಎಂಬುದು ಸರಿಯಲ್ಲ’ ಎಂದರು.</p>.<p>‘ದೇಶದಲ್ಲಿಯೇ ಕರ್ನಾಟಕ ಪೊಲೀಸ್ ಮೊದಲ ಸ್ಥಾನದಲ್ಲಿದೆ. ಮಹಿಳೆಯರಿಗೆ ಸುರಕ್ಷಿತ ನಗರಗಳಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ. ಅದಕ್ಕಾಗಿಯೇ ಬೆಂಗಳೂರಿಗೆ ಹೂಡಿಕೆದಾರರು ಬರುತ್ತಿದ್ದಾರೆ’ ಎಂದು ಪ್ರತಿಪಾದಿಸಿದರು.</p>.<p>‘ಪೊಲೀಸ್ ವಸತಿ ಗೃಹ ಯೋಜನೆಯನ್ನು 2030ರವರೆಗೂ ಮುಂದುವರಿಸಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>