ಕುಶಾಲನಗರ ವಲಯ ಅರಣ್ಯಾಧಿಕಾರಿ ಸಿ.ಆರ್.ಅರುಣ್ ಮಾತನಾಡಿ, ‘ಮೊದಲ ಹಂತದಲ್ಲಿ ಮೂರು ಆನೆಗಳನ್ನು ಹುಣಸೂರು ತಾಲ್ಲೂಕಿನ ನಾಗಪುರ ಹತ್ತಿರದ ವೀರನಹೊಸಳ್ಳಿ ಆನೆ ಶಿಬಿರಕ್ಕೆ ಕಳುಹಿಸಿ ಕೊಡಲಾಗುತ್ತಿದೆ. ವಿಜಯ, ಈಶ್ವರ, ಧನಂಜಯ ಆನೆಗಳು ಮತ್ತು ಅದರ ಮಾವುತರು ಹಾಗೂ ಕಾವಾಡಿಗರು, ಅವರ ಕುಟುಂಬದ ಸದಸ್ಯರು ಕೂಡ ಮೈಸೂರಿಗೆ ತೆರಳುತ್ತಿದ್ದಾರೆ. 2ನೇ ಹಂತದಲ್ಲಿ ಹರ್ಷ, ವಿಕ್ರಂ, ಗೋಪಿ ಆನೆಗಳನ್ನು ಕಳುಹಿಸಿಕೊಡಲಾಗುವುದು’ ಎಂದರು.