<p>ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬುಧವಾರ ವಿಜೃಂಭಣೆಯಿಂದ ಗಣಪತಿ ಹಬ್ಬ ಆಚರಿಸಲಾಯಿತು. ನೂರಕ್ಕೂ ಅಧಿಕ ಕಡೆ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಆರಾಧಿಸಲಾಯಿತು.</p>.<p>ಐತಿಹಾಸಿಕ ಕೋಟೆಯಲ್ಲಿರುವ ಮಹಾಗಣಪತಿ ದೇವಾಲಯದಲ್ಲಿ ವಿಶೇಷ ಹೋಮ, ಹವನಗಳು ನಡೆದವು. ವಿವಿಧ ಬಗೆಯ ಅಭಿಷೇಕಗಳ ನಂತರ ಹಲವು ಬಗೆಯಲ್ಲಿ ಮೂರ್ತಿಯನ್ನು ಅಲಂಕರಿಸಲಾಗಿತ್ತು. ನೂರಾರು ಮಂದಿ ಭಕ್ತರು ಇಲ್ಲಿ ಈಡುಗಾಯಿ ಒಡೆದು ಹರಕೆ ಸಲ್ಲಿಸಿದರು.</p>.<p>ಮಹದೇವಪೇಟೆಯಲ್ಲಿ ವಿನಾಯಕ ಯುವಕ ಮಿತ್ರ ಮಂಡಲಿಯು 43ನೇ ವರ್ಷದ ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಿತು. ಭವ್ಯವಾಗಿ ಅಲಂಕರಿಸಿದ್ದ ಮಂಟಪದಲ್ಲಿ ಗಣೇಶಮೂರ್ತಿಯನ್ನು ಇಟ್ಟು ವಿಜೃಂಭಣೆಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು.</p>.<p>ಶಾಂತಿನಿಕೇತನ, ಕೆಎಸ್ಆರ್ಟಿಸಿ ಬಸ್ ಡಿಪೊ, ಚೈನ್ ಗೇಟ್, ಕಾನ್ವೆಂಟ್ ಜಂಕ್ಷನ್, ಎ.ವಿ.ಶಾಲೆ ಸಮೀಪದ ಸ್ವಸ್ಥಿಕ್ ಸಮಿತಿ, ಬಸ್ ನಿಲ್ದಾಣ, ನಗರಸಭೆ, ಸೆಸ್ಕ್ ಹೀಗೆ ಅನೇಕ ಕಡೆ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದು ಗಮನ ಸೆಳೆಯಿತು. ಹಲವು ಗಣೇಶೋತ್ಸವ ಸಮಿತಿಯವರು ತಾವು ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಗಳನ್ನು ಬುಧವಾರ ರಾತ್ರಿ ಮೆರವಣಿಗೆಯ ಮೂಲಕ ವಿಸರ್ಜಿಸಿದರು.</p>.<p>ಹಲವೆಡೆ ಅನ್ನದಾನಗಳು ನಡೆದರೆ, ಮತ್ತೆ ಕೆಲವೆಡೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಓಂಕಾರೇಶ್ವರ ದೇಗುಲ, ಚೌಡೇಶ್ವರಿ ದೇವಸ್ಥಾನ ಸೇರಿದಂತೆ ನಗರದ ಎಲ್ಲ ದೇಗುಲಗಳಲ್ಲೂ ವಿಶೇಷ ಪೂಜಾ ಕೈಂಕರ್ಯಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬುಧವಾರ ವಿಜೃಂಭಣೆಯಿಂದ ಗಣಪತಿ ಹಬ್ಬ ಆಚರಿಸಲಾಯಿತು. ನೂರಕ್ಕೂ ಅಧಿಕ ಕಡೆ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಆರಾಧಿಸಲಾಯಿತು.</p>.<p>ಐತಿಹಾಸಿಕ ಕೋಟೆಯಲ್ಲಿರುವ ಮಹಾಗಣಪತಿ ದೇವಾಲಯದಲ್ಲಿ ವಿಶೇಷ ಹೋಮ, ಹವನಗಳು ನಡೆದವು. ವಿವಿಧ ಬಗೆಯ ಅಭಿಷೇಕಗಳ ನಂತರ ಹಲವು ಬಗೆಯಲ್ಲಿ ಮೂರ್ತಿಯನ್ನು ಅಲಂಕರಿಸಲಾಗಿತ್ತು. ನೂರಾರು ಮಂದಿ ಭಕ್ತರು ಇಲ್ಲಿ ಈಡುಗಾಯಿ ಒಡೆದು ಹರಕೆ ಸಲ್ಲಿಸಿದರು.</p>.<p>ಮಹದೇವಪೇಟೆಯಲ್ಲಿ ವಿನಾಯಕ ಯುವಕ ಮಿತ್ರ ಮಂಡಲಿಯು 43ನೇ ವರ್ಷದ ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಿತು. ಭವ್ಯವಾಗಿ ಅಲಂಕರಿಸಿದ್ದ ಮಂಟಪದಲ್ಲಿ ಗಣೇಶಮೂರ್ತಿಯನ್ನು ಇಟ್ಟು ವಿಜೃಂಭಣೆಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು.</p>.<p>ಶಾಂತಿನಿಕೇತನ, ಕೆಎಸ್ಆರ್ಟಿಸಿ ಬಸ್ ಡಿಪೊ, ಚೈನ್ ಗೇಟ್, ಕಾನ್ವೆಂಟ್ ಜಂಕ್ಷನ್, ಎ.ವಿ.ಶಾಲೆ ಸಮೀಪದ ಸ್ವಸ್ಥಿಕ್ ಸಮಿತಿ, ಬಸ್ ನಿಲ್ದಾಣ, ನಗರಸಭೆ, ಸೆಸ್ಕ್ ಹೀಗೆ ಅನೇಕ ಕಡೆ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದು ಗಮನ ಸೆಳೆಯಿತು. ಹಲವು ಗಣೇಶೋತ್ಸವ ಸಮಿತಿಯವರು ತಾವು ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಗಳನ್ನು ಬುಧವಾರ ರಾತ್ರಿ ಮೆರವಣಿಗೆಯ ಮೂಲಕ ವಿಸರ್ಜಿಸಿದರು.</p>.<p>ಹಲವೆಡೆ ಅನ್ನದಾನಗಳು ನಡೆದರೆ, ಮತ್ತೆ ಕೆಲವೆಡೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಓಂಕಾರೇಶ್ವರ ದೇಗುಲ, ಚೌಡೇಶ್ವರಿ ದೇವಸ್ಥಾನ ಸೇರಿದಂತೆ ನಗರದ ಎಲ್ಲ ದೇಗುಲಗಳಲ್ಲೂ ವಿಶೇಷ ಪೂಜಾ ಕೈಂಕರ್ಯಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>