<p><strong>ಮಡಿಕೇರಿ</strong>: ನಗರದ ಗಾಂಧಿ ಮಂಟಪದಲ್ಲಿ ಮಹಾತ್ಮ ಗಾಂಧೀಜಿ ಅವರ ‘ಸ್ಮಾರಕ ಉದ್ಯಾನ’ ನಿರ್ಮಾಣಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅ.17ರಂದು ಭೂಮಿಪೂಜೆ ನೆರವೇರಿಸಲಿದ್ದಾರೆ.</p>.<p>ಈ ಕುರಿತು ಶುಕ್ರವಾರ ಇಲ್ಲಿನ ಸುದರ್ಶನ ಅತಿಥಿ ಗೃಹದಲ್ಲಿ ಶಾಸಕ ಡಾ.ಮಂತರ್ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು.</p>.<p>ಈಗಾಗಲೇ ಸರ್ಕಾರದಿಂದ ಗಾಂಧಿ ಸ್ಮಾರಕ ಉದ್ಯಾನ ನಿರ್ಮಾಣಕ್ಕೆ ₹ 50 ಲಕ್ಷ ಬಿಡುಗಡೆಯಾಗಿದ್ದು, ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮವಿಟ್ಟು ಶಾಶ್ವತವಾದ ಸ್ಮಾರಕ ಉದ್ಯಾನ ನಿರ್ಮಾಣ ಮಾಡಬೇಕು. ಹೊಸ ತಂತ್ರಜ್ಞಾನದಂತೆ ಸ್ಮಾರಕ ನಿರ್ಮಾಣಕ್ಕೆ ಅಗತ್ಯ ಕ್ರಮ ವಹಿಸಬೇಕು. ಜೊತೆಗೆ, 6 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸಂಬಂಧಪಟ್ಟ ಎಂಜಿನಿಯರ್ಗಳಿಗೆ ಶಾಸಕ ಡಾ.ಮಂತರ್ಗೌಡ ಅವರು ಸೂಚಿಸಿದರು.</p>.<p>ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸ್ಮಾರಕ ಉದ್ಯಾನದ ಕಾಮಗಾರಿಯನ್ನು ಯೋಜನೆಯಂತೆ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್ ಮಾತನಾಡಿ, ‘ಈಗಾಗಲೇ ₹ 50 ಲಕ್ಷ ಬಿಡುಗಡೆಯಾಗಿದ್ದು, ಗಾಂಧಿ ಸ್ಮಾರಕ ಉದ್ಯಾನ ಯೋಜನೆಯಂತೆ ಕಾಮಗಾರಿ ಪೂರ್ಣಗೊಳಿಸಲಾಗುವುದು’ ಎಂದು ಮಾಹಿತಿ ನೀಡಿದರು.</p>.<p>ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ, ನಿಕಟಪೂರ್ವ ಅಧ್ಯಕ್ಷ ಟಿ.ಪಿ.ರಮೇಶ್, ಸದಸ್ಯರಾದ ಮುನೀರ್ ಅಹ್ಮದ್, ಲಿಯಾಕತ್ ಅಲಿ, ಅಂಬೆಕಲ್ಲು ನವೀನ್, ಕೆ.ಟಿ.ಬೇಬಿ ಮ್ಯಾಥ್ಯೂ ಅವರು ಹಲವು ಮಾಹಿತಿ ನೀಡಿದರು.</p>.<p><strong>ಯೋಜನೆಯ ಹೆಜ್ಜೆಗುರುತುಗಳು</strong></p><p>ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮವನ್ನು ದೆಹಲಿಯ ರಾಜಘಾಟ್ನಲ್ಲಿ ಇರುವಂತೆ ಇಲ್ಲಿನ ಗಾಂಧಿ ಮೈದಾನದ ಬಳಿ ಇರುವ ಗಾಂಧಿಮಂಟಪದ ಸ್ಥಳದಲ್ಲೇ ಶಾಶ್ವತವಾದ ಸ್ಮಾರಕ ಉದ್ಯಾನವನ್ನು ನಿರ್ಮಿಸುವ ಸಲುವಾಗಿ ಸರ್ವೋದಯ ಸಮಿತಿಯವರು ಈ ಹಿಂದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ₹ 1 ಕೋಟಿ ಪ್ರಸ್ತಾವ ಸಲ್ಲಿಸಿದ್ದರು. ಅದರಂತೆ ಸರ್ಕಾರ 2023ರ ಮಾರ್ಚ್ ತಿಂಗಳಲ್ಲಿ ₹ 50 ಲಕ್ಷ ಹಣ ಬಿಡುಗಡೆ ಮಾಡಿತ್ತು.</p>.<p>ಆ ನಿಟ್ಟಿನಲ್ಲಿ ಗಾಂಧಿ ಮಂಟಪ ಸರ್ವೇ ಸಂಖ್ಯೆ 471/1 ರಲ್ಲಿ 12 ಸೆಂಟ್ ಹಾಗೂ ಸರ್ವೆ ಸಂಖ್ಯೆ 471/4 ರಲ್ಲಿ 0.20 ಸೆಂಟ್ ಒಟ್ಟು 0.32 ಸೆಂಟ್ ಜಾಗವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಹಸ್ತಾಂತರಿಸಿದ್ದರೂ ಕಾಮಗಾರಿ ಆರಂಭವೇ ಆಗಿರಲಿಲ್ಲ. ಈ ಕುರಿತು ‘ಪ್ರಜಾವಾಣಿ’ ವಿಶೇಷ ವರದಿ ಪ್ರಕಟಿಸಿ ಗಮನ ಸೆಳೆದಿತ್ತು.</p>.<p><strong>ಗಮನ ಸೆಳೆದಿದ್ದ ‘ಪ್ರಜಾವಾಣಿ’ </strong></p><p>ಅ. 2ರಂದು ‘ಪ್ರಜಾವಾಣಿ’ಯು ‘ನಮ್ಮ ನಗರ ನಮ್ಮ ಧ್ವನಿ’ ಅಂಕಣದಲ್ಲಿ ‘ಉಳಿಯಲಿ ಕೊಡಗಿನಲಿ ಗಾಂಧಿ ಸ್ಮೃತಿ’ ಶೀರ್ಷಿಕೆಯಡಿ ಕಳೆದ ವರ್ಷವೇ ಹಣ ಬಿಡುಗಡೆಯಾಗಿದ್ದರೂ ಗಾಂಧಿ ಸ್ಮಾರಕ ಉದ್ಯಾನದ ಕಾಮಗಾರಿ ಇನ್ನೂ ಆರಂಭವಾಗಿಲ್ಲ ಎಂಬ ವಿಶೇಷ ವರದಿ ಪ್ರಕಟಿಸಿ ಜನಪ್ರತಿನಿಧಿಗಳ ಗಮನ ಸೆಳೆದಿತ್ತು. ಈ ವೇಳೆ ಪ್ರತಿಕ್ರಿಯಿಸಿದ್ದ ಶಾಸಕ ಡಾ.ಮಂತರ್ಗೌಡ ಶೀಘ್ರದಲ್ಲಿ ಕಾಮಗಾರಿ ಆರಂಭಿಸುವ ಭರವಸೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ನಗರದ ಗಾಂಧಿ ಮಂಟಪದಲ್ಲಿ ಮಹಾತ್ಮ ಗಾಂಧೀಜಿ ಅವರ ‘ಸ್ಮಾರಕ ಉದ್ಯಾನ’ ನಿರ್ಮಾಣಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅ.17ರಂದು ಭೂಮಿಪೂಜೆ ನೆರವೇರಿಸಲಿದ್ದಾರೆ.</p>.<p>ಈ ಕುರಿತು ಶುಕ್ರವಾರ ಇಲ್ಲಿನ ಸುದರ್ಶನ ಅತಿಥಿ ಗೃಹದಲ್ಲಿ ಶಾಸಕ ಡಾ.ಮಂತರ್ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು.</p>.<p>ಈಗಾಗಲೇ ಸರ್ಕಾರದಿಂದ ಗಾಂಧಿ ಸ್ಮಾರಕ ಉದ್ಯಾನ ನಿರ್ಮಾಣಕ್ಕೆ ₹ 50 ಲಕ್ಷ ಬಿಡುಗಡೆಯಾಗಿದ್ದು, ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮವಿಟ್ಟು ಶಾಶ್ವತವಾದ ಸ್ಮಾರಕ ಉದ್ಯಾನ ನಿರ್ಮಾಣ ಮಾಡಬೇಕು. ಹೊಸ ತಂತ್ರಜ್ಞಾನದಂತೆ ಸ್ಮಾರಕ ನಿರ್ಮಾಣಕ್ಕೆ ಅಗತ್ಯ ಕ್ರಮ ವಹಿಸಬೇಕು. ಜೊತೆಗೆ, 6 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸಂಬಂಧಪಟ್ಟ ಎಂಜಿನಿಯರ್ಗಳಿಗೆ ಶಾಸಕ ಡಾ.ಮಂತರ್ಗೌಡ ಅವರು ಸೂಚಿಸಿದರು.</p>.<p>ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸ್ಮಾರಕ ಉದ್ಯಾನದ ಕಾಮಗಾರಿಯನ್ನು ಯೋಜನೆಯಂತೆ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್ ಮಾತನಾಡಿ, ‘ಈಗಾಗಲೇ ₹ 50 ಲಕ್ಷ ಬಿಡುಗಡೆಯಾಗಿದ್ದು, ಗಾಂಧಿ ಸ್ಮಾರಕ ಉದ್ಯಾನ ಯೋಜನೆಯಂತೆ ಕಾಮಗಾರಿ ಪೂರ್ಣಗೊಳಿಸಲಾಗುವುದು’ ಎಂದು ಮಾಹಿತಿ ನೀಡಿದರು.</p>.<p>ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ, ನಿಕಟಪೂರ್ವ ಅಧ್ಯಕ್ಷ ಟಿ.ಪಿ.ರಮೇಶ್, ಸದಸ್ಯರಾದ ಮುನೀರ್ ಅಹ್ಮದ್, ಲಿಯಾಕತ್ ಅಲಿ, ಅಂಬೆಕಲ್ಲು ನವೀನ್, ಕೆ.ಟಿ.ಬೇಬಿ ಮ್ಯಾಥ್ಯೂ ಅವರು ಹಲವು ಮಾಹಿತಿ ನೀಡಿದರು.</p>.<p><strong>ಯೋಜನೆಯ ಹೆಜ್ಜೆಗುರುತುಗಳು</strong></p><p>ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮವನ್ನು ದೆಹಲಿಯ ರಾಜಘಾಟ್ನಲ್ಲಿ ಇರುವಂತೆ ಇಲ್ಲಿನ ಗಾಂಧಿ ಮೈದಾನದ ಬಳಿ ಇರುವ ಗಾಂಧಿಮಂಟಪದ ಸ್ಥಳದಲ್ಲೇ ಶಾಶ್ವತವಾದ ಸ್ಮಾರಕ ಉದ್ಯಾನವನ್ನು ನಿರ್ಮಿಸುವ ಸಲುವಾಗಿ ಸರ್ವೋದಯ ಸಮಿತಿಯವರು ಈ ಹಿಂದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ₹ 1 ಕೋಟಿ ಪ್ರಸ್ತಾವ ಸಲ್ಲಿಸಿದ್ದರು. ಅದರಂತೆ ಸರ್ಕಾರ 2023ರ ಮಾರ್ಚ್ ತಿಂಗಳಲ್ಲಿ ₹ 50 ಲಕ್ಷ ಹಣ ಬಿಡುಗಡೆ ಮಾಡಿತ್ತು.</p>.<p>ಆ ನಿಟ್ಟಿನಲ್ಲಿ ಗಾಂಧಿ ಮಂಟಪ ಸರ್ವೇ ಸಂಖ್ಯೆ 471/1 ರಲ್ಲಿ 12 ಸೆಂಟ್ ಹಾಗೂ ಸರ್ವೆ ಸಂಖ್ಯೆ 471/4 ರಲ್ಲಿ 0.20 ಸೆಂಟ್ ಒಟ್ಟು 0.32 ಸೆಂಟ್ ಜಾಗವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಹಸ್ತಾಂತರಿಸಿದ್ದರೂ ಕಾಮಗಾರಿ ಆರಂಭವೇ ಆಗಿರಲಿಲ್ಲ. ಈ ಕುರಿತು ‘ಪ್ರಜಾವಾಣಿ’ ವಿಶೇಷ ವರದಿ ಪ್ರಕಟಿಸಿ ಗಮನ ಸೆಳೆದಿತ್ತು.</p>.<p><strong>ಗಮನ ಸೆಳೆದಿದ್ದ ‘ಪ್ರಜಾವಾಣಿ’ </strong></p><p>ಅ. 2ರಂದು ‘ಪ್ರಜಾವಾಣಿ’ಯು ‘ನಮ್ಮ ನಗರ ನಮ್ಮ ಧ್ವನಿ’ ಅಂಕಣದಲ್ಲಿ ‘ಉಳಿಯಲಿ ಕೊಡಗಿನಲಿ ಗಾಂಧಿ ಸ್ಮೃತಿ’ ಶೀರ್ಷಿಕೆಯಡಿ ಕಳೆದ ವರ್ಷವೇ ಹಣ ಬಿಡುಗಡೆಯಾಗಿದ್ದರೂ ಗಾಂಧಿ ಸ್ಮಾರಕ ಉದ್ಯಾನದ ಕಾಮಗಾರಿ ಇನ್ನೂ ಆರಂಭವಾಗಿಲ್ಲ ಎಂಬ ವಿಶೇಷ ವರದಿ ಪ್ರಕಟಿಸಿ ಜನಪ್ರತಿನಿಧಿಗಳ ಗಮನ ಸೆಳೆದಿತ್ತು. ಈ ವೇಳೆ ಪ್ರತಿಕ್ರಿಯಿಸಿದ್ದ ಶಾಸಕ ಡಾ.ಮಂತರ್ಗೌಡ ಶೀಘ್ರದಲ್ಲಿ ಕಾಮಗಾರಿ ಆರಂಭಿಸುವ ಭರವಸೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>