<p><strong>ಮಡಿಕೇರಿ</strong>: ಇಲ್ಲಿನ ಅಶೋಕಪುರದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗೌರಿ, ಗಣೇಶ ಮೂರ್ತಿಗಳ ವಿಸರ್ಜನೋತ್ಸವದ ಮೆರವಣಿಗೆಯು ಅದ್ದೂರಿಯಾಗಿ ಭಾನುವಾರ ರಾತ್ರಿ ನಗರದಲ್ಲಿ ನಡೆಯಿತು.</p>.<p>ಅಶೋಕಪುರ ಗಣೇಶ ಉತ್ಸವ ಸಮಿತಿ ವತಿಯಿಂದ ನಡೆದ ಭವ್ಯ ಮೆರವಣಿಗೆಯಲ್ಲಿ ಅಪಾರ ಸಂಖ್ಯೆಯ ಭಾರಿ ಜನಸ್ತೋಮ ಸೇರಿತ್ತು. ನಗರದಲ್ಲಿ ಸಂಭ್ರಮ ಉಂಟು ಮಾಡಿತು. ಚಲನವಲನಗಳಿಂದ ಕೂಡಿದ್ದ ವೈಭವೋಪೇತ ಮಂಟಪದ ಅದ್ಭುತ ಪ್ರದರ್ಶನವನ್ನು ನಗರದ ಅಲ್ಲಲ್ಲಿ ಜನರು ಕಣ್ತುಂಬಿ ಕೊಂಡರು.</p>.<p>ಈ ಬಾರಿ ಪ್ರದರ್ಶನಕ್ಕೆ ‘ಗಣಪತಿಯಿಂದ ಸಿಂಧೂರಾಸುರ ವಧೆ’ ಪ್ರಸಂಗವನ್ನು ಆಯ್ದುಕೊಳ್ಳಲಾಗಿತ್ತು. ಗಣಪತಿಯ ಶೌರ್ಯ ಪ್ರದರ್ಶನ ಕಣ್ಣಿಗೆ ಕಟ್ಟುವಂತೆ ಮೂಡಿಬಂತು. ಒಟ್ಟು 14 ಕಲಾಕೃತಿಗಳು ಪ್ರದರ್ಶನದಲ್ಲಿದ್ದವು. ಈ ಎಲ್ಲ ಕಲಾಕೃತಿಗಳ ಪ್ರದರ್ಶನಗಳು ಜನಮನವನ್ನು ಸೂರೆಗೊಂಡವು.</p>.<p>ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತ (ಸುದರ್ಶನ ವೃತ್ತ), ಕೆಎಸ್ಆರ್ಟಿಸಿ ಬಸ್ಡಿಪೊ, ಜನರಲ್ ತಿಮ್ಮಯ್ಯ ವೃತ್ತ, ಹಳೆಯ ಖಾಸಗಿ ಬಸ್ನಿಲ್ದಾಣ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಮಂಟಪದ ಮೆರವಣಿಗೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಇಲ್ಲಿನ ಅಶೋಕಪುರದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗೌರಿ, ಗಣೇಶ ಮೂರ್ತಿಗಳ ವಿಸರ್ಜನೋತ್ಸವದ ಮೆರವಣಿಗೆಯು ಅದ್ದೂರಿಯಾಗಿ ಭಾನುವಾರ ರಾತ್ರಿ ನಗರದಲ್ಲಿ ನಡೆಯಿತು.</p>.<p>ಅಶೋಕಪುರ ಗಣೇಶ ಉತ್ಸವ ಸಮಿತಿ ವತಿಯಿಂದ ನಡೆದ ಭವ್ಯ ಮೆರವಣಿಗೆಯಲ್ಲಿ ಅಪಾರ ಸಂಖ್ಯೆಯ ಭಾರಿ ಜನಸ್ತೋಮ ಸೇರಿತ್ತು. ನಗರದಲ್ಲಿ ಸಂಭ್ರಮ ಉಂಟು ಮಾಡಿತು. ಚಲನವಲನಗಳಿಂದ ಕೂಡಿದ್ದ ವೈಭವೋಪೇತ ಮಂಟಪದ ಅದ್ಭುತ ಪ್ರದರ್ಶನವನ್ನು ನಗರದ ಅಲ್ಲಲ್ಲಿ ಜನರು ಕಣ್ತುಂಬಿ ಕೊಂಡರು.</p>.<p>ಈ ಬಾರಿ ಪ್ರದರ್ಶನಕ್ಕೆ ‘ಗಣಪತಿಯಿಂದ ಸಿಂಧೂರಾಸುರ ವಧೆ’ ಪ್ರಸಂಗವನ್ನು ಆಯ್ದುಕೊಳ್ಳಲಾಗಿತ್ತು. ಗಣಪತಿಯ ಶೌರ್ಯ ಪ್ರದರ್ಶನ ಕಣ್ಣಿಗೆ ಕಟ್ಟುವಂತೆ ಮೂಡಿಬಂತು. ಒಟ್ಟು 14 ಕಲಾಕೃತಿಗಳು ಪ್ರದರ್ಶನದಲ್ಲಿದ್ದವು. ಈ ಎಲ್ಲ ಕಲಾಕೃತಿಗಳ ಪ್ರದರ್ಶನಗಳು ಜನಮನವನ್ನು ಸೂರೆಗೊಂಡವು.</p>.<p>ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತ (ಸುದರ್ಶನ ವೃತ್ತ), ಕೆಎಸ್ಆರ್ಟಿಸಿ ಬಸ್ಡಿಪೊ, ಜನರಲ್ ತಿಮ್ಮಯ್ಯ ವೃತ್ತ, ಹಳೆಯ ಖಾಸಗಿ ಬಸ್ನಿಲ್ದಾಣ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಮಂಟಪದ ಮೆರವಣಿಗೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>