ಬಳ್ಳಾರಿ ತೋರಣಗಲ್ಲು ನಿವಾಸಿ ವಿಘ್ನೇಶ್ವರಿ (24) ಮೃತಪಟ್ಟವರು. ಇವರು, ಮುಂಬೈನಲ್ಲಿ ಉದ್ಯೋಗದಲ್ಲಿದ್ದರು. ತಮ್ಮ ನಾಲ್ವರು ಸ್ನೇಹಿತೆಯರೊಂದಿಗೆ ಎರಡು ದಿನಗಳ ಹಿಂದೆ ಮಡಿಕೇರಿಗೆ ಬಂದಿದ್ದರು. ಭಾನುವಾರ ರಾತ್ರಿ ಸ್ನಾನಕ್ಕೆ ತೆರಳಿದ್ದ ಅವರು, ಕೊಠಡಿಯಿಂದ ಹೊರಬಾರದಿದ್ದಾಗ ಅನುಮಾನಗೊಂಡ ಸ್ನೇಹಿತೆಯರು ಬಾಗಿಲು ತೆರೆದು ನೋಡಿದಾಗ ವಿಘ್ನೇಶ್ವರಿ ಕುಸಿದು ಬಿದಿದ್ದರು. ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಮೃತಪಟ್ಟಿದ್ದರು. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.