ಕುಶಾಲನಗರ: ಕೊಪ್ಪ ಕಾವೇರಿ ನದಿ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯೊಬ್ಬಳನ್ನು ಪೊಲೀಸರು ರಕ್ಷಿಸಿದ್ದಾರೆ.
ಕೊಪ್ಪ ಗೇಟ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅರುಣ್ ಕುಮಾರ್ ಮತ್ತು ಉಮೇಶ್, ಮೈಸೂರು ಹೆದ್ದಾರಿಯಲ್ಲಿ ಬಿರುನಡಿಗೆಯಲ್ಲಿ ಸಾಗುತ್ತಿದ್ದ ಬಾಲಕಿಯನ್ನು ಗಮನಿಸಿದ್ದರು. ಇದ್ದಕ್ಕಿದ್ದಂತೆ ಬಾಲಕಿ ಸೇತುವೆ ಮೇಲಿನಿಂದ ನದಿಗೆ ಹಾರಿದ್ದಾಳೆ.
ಪೊಲೀಸ್ ಸಿಬ್ಬಂದಿ ಬಾಲಕಿಯನ್ನು ರಕ್ಷಿಸಿದ್ದು, ಪೋಷಕರ ವಶಕ್ಕೆ ಒಪ್ಪಿಸಿದ್ದಾರೆ. ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಆಕೆ ಪಾರಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.