<p><strong>ಗೋಣಿಕೊಪ್ಪಲು</strong>: ಇಲ್ಲಿನ ಯುನೈಟೆಡ್ ಜಮಾಅತ್ ನಿಂದ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗಾಗಿ ಮಾದಕ ವಸ್ತು ವಿರೋಧಿ ಜಾಗೃತಿ, ವೃತ್ತಿ ಜೀವನ ಮಾರ್ಗದರ್ಶ ಶಿಬಿರವನ್ನು ಮೇ 27ರಂದು ಆಯೋಜಿಸಲಾಗಿದೆ ಎಂದು ಜಮಾಅತ್ತಿನ ಅಧ್ಯಕ್ಷ ಎಂ.ಎ.ಸಮೀರ್ ತಿಳಿಸಿದ್ದಾರೆ.<br><br> 'ನಮ್ಮ ನಡೆ ಮಾದಕ ವಸ್ತು ಮುಕ್ತ ಸಮಾಜ ಮತ್ತು ಅರಿವಿನ ಕಡೆ' ಧ್ಯೇಯವಾಕ್ಯದೊಂದಿಗೆ ಕಾರ್ಯಕ್ರಮವು ಕೊಡಗು ಇಂಟರ್ ನ್ಯಾಷನಲ್ ಕಮ್ಯುನಿಟಿ ಸಭಾಂಗಣದಲ್ಲಿ ಜರುಗಲಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಜಮಾಅತ್ತಿನ ಅಧ್ಯಕ್ಷರ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಪಾಲ್ಗೊಳ್ಳಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರಿನ ಉಮೀದ್ ರಿಹೆಬ್ ಸೆಂಟರ್ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ರಫಿಉದ್ದೀನ್ ರಶೀದ್ ಹಾಗೂ ಪುಣೆಯ ಅನೀಶ್ ಕುಟ್ಟಿ ಭಾಗವಹಿಸುವರು ಎಂದರು. ವಿದ್ಯಾರ್ಥಿಗಳು ಅಂದು ಬೆಳಿಗ್ಗೆ 9 ಗಂಟೆಯಿಂದ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.</p>.<p> ಸಂಸ್ಥೆಯ ಕಾರ್ಯದರ್ಶಿ ಟಿ.ಕೆ.ಅಬ್ದುಲ್ ಸಮದ್ ಮಾತನಾಡಿ, ಜಿಲ್ಲೆ ಪೂರ್ಣವಾಗಿ ಮಾದಕ ವ್ಯಸನದಿಂದ ಮುಕ್ತವಾಗಬೇಕು. ವಿದ್ಯಾರ್ಥಿಗಳನ್ನೇ ಹೆಚ್ಚಾಗಿ ಕೇಂದ್ರೀಕರಿಸಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಎಂದರು.<br> ಸಂಸ್ಥೆಯ ಗೌರವಾಧ್ಯಕ್ಷ ಕೆ.ಎಂ. ಅಬ್ದುಲ್ ರಹಿಮಾನ್ (ಬಾಪು), ಸಂಚಾಲಕರಾದ ತನ್ವೀರ್ ಅಹಮದ್, ಕಾರ್ಯಕಾರಿ ಸಮಿತಿ ಸದಸ್ಯ ಅಬ್ದುಲ್ ನಾಸರ್, ನಜೀರ್ ಮೌಲವಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಣಿಕೊಪ್ಪಲು</strong>: ಇಲ್ಲಿನ ಯುನೈಟೆಡ್ ಜಮಾಅತ್ ನಿಂದ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗಾಗಿ ಮಾದಕ ವಸ್ತು ವಿರೋಧಿ ಜಾಗೃತಿ, ವೃತ್ತಿ ಜೀವನ ಮಾರ್ಗದರ್ಶ ಶಿಬಿರವನ್ನು ಮೇ 27ರಂದು ಆಯೋಜಿಸಲಾಗಿದೆ ಎಂದು ಜಮಾಅತ್ತಿನ ಅಧ್ಯಕ್ಷ ಎಂ.ಎ.ಸಮೀರ್ ತಿಳಿಸಿದ್ದಾರೆ.<br><br> 'ನಮ್ಮ ನಡೆ ಮಾದಕ ವಸ್ತು ಮುಕ್ತ ಸಮಾಜ ಮತ್ತು ಅರಿವಿನ ಕಡೆ' ಧ್ಯೇಯವಾಕ್ಯದೊಂದಿಗೆ ಕಾರ್ಯಕ್ರಮವು ಕೊಡಗು ಇಂಟರ್ ನ್ಯಾಷನಲ್ ಕಮ್ಯುನಿಟಿ ಸಭಾಂಗಣದಲ್ಲಿ ಜರುಗಲಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಜಮಾಅತ್ತಿನ ಅಧ್ಯಕ್ಷರ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಪಾಲ್ಗೊಳ್ಳಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರಿನ ಉಮೀದ್ ರಿಹೆಬ್ ಸೆಂಟರ್ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ರಫಿಉದ್ದೀನ್ ರಶೀದ್ ಹಾಗೂ ಪುಣೆಯ ಅನೀಶ್ ಕುಟ್ಟಿ ಭಾಗವಹಿಸುವರು ಎಂದರು. ವಿದ್ಯಾರ್ಥಿಗಳು ಅಂದು ಬೆಳಿಗ್ಗೆ 9 ಗಂಟೆಯಿಂದ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.</p>.<p> ಸಂಸ್ಥೆಯ ಕಾರ್ಯದರ್ಶಿ ಟಿ.ಕೆ.ಅಬ್ದುಲ್ ಸಮದ್ ಮಾತನಾಡಿ, ಜಿಲ್ಲೆ ಪೂರ್ಣವಾಗಿ ಮಾದಕ ವ್ಯಸನದಿಂದ ಮುಕ್ತವಾಗಬೇಕು. ವಿದ್ಯಾರ್ಥಿಗಳನ್ನೇ ಹೆಚ್ಚಾಗಿ ಕೇಂದ್ರೀಕರಿಸಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಎಂದರು.<br> ಸಂಸ್ಥೆಯ ಗೌರವಾಧ್ಯಕ್ಷ ಕೆ.ಎಂ. ಅಬ್ದುಲ್ ರಹಿಮಾನ್ (ಬಾಪು), ಸಂಚಾಲಕರಾದ ತನ್ವೀರ್ ಅಹಮದ್, ಕಾರ್ಯಕಾರಿ ಸಮಿತಿ ಸದಸ್ಯ ಅಬ್ದುಲ್ ನಾಸರ್, ನಜೀರ್ ಮೌಲವಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>