<p><strong>ಗೋಣಿಕೊಪ್ಪಲು</strong>: ಪರಿಸರ ದಿನದಂದು ನೆಟ್ಟ ಗಿಡಗಳನ್ನು ವರ್ಷಪೂರ್ತಿ ಸಂರಕ್ಷಣೆ ಮಾಡಬೇಕು. ಸ್ವಚ್ಛ ಪರಿಸರ ಇದ್ದರೆ ಮಾತ್ರ ಜೀವ ಸಂಕುಲ ಆರೋಗ್ಯವಾಗಿ ಇರಲು ಸಾಧ್ಯ ಎಂದು ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಸಿದ್ಧಾರೂಢ ಸಿಂಗಾಡಿ ಹೇಳಿದರು. </p><p>ಗೋಣಿಕೊಪ್ಪಲು ಕಾವೇರಿ ಕಾಲೇಜು ಎನ್ಎಸ್ಎಸ್ ಘಟಕದಿಂದ ಕಾಲೇಜು ಆವರಣದಲ್ಲಿ ವಿವಿಧ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಗುರುವಾರ ಆಚರಿಸಿದ ವಿಶ್ವ ಪರಿಸರ ದಿನದಲ್ಲಿ ಅವರು ಮಾತನಾಡಿದರು.</p><p>ಉಪ ಪ್ರಾಂಶುಪಾಲರಾದ ಪ್ರೊ. ಎಂ.ಎಸ್.ಭಾರತಿ ಅಧ್ಯಕ್ಷತೆ ವಹಿಸಿದ್ದರು. ಕಚೇರಿ ಅಧೀಕ್ಷಕಿ ಟಿ.ಕೆ.ಲತಾ, ಎನ್. ಎಸ್. ಎಸ್ ಅಧಿಕಾರಿಗಳಾದ ಎಂ.ಎ.ಕುಶಾಲಪ್ಪ, ಕೆ.ಎಸ್.ಪೂಜಾ. ಹಾಗೂ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.</p><p><strong>ಪಾಲಿಬೆಟ್ಟ ಕಾಲೇಜು:</strong> ಮಾನವನ ದುರಾಸೆಯಿಂದಾಗಿ ಜಲಮಾಲಿನ್ಯ, ವಾಯುಮಾಲಿನ್ಯ ಹಾಗೂ ಮಣ್ಣು ಮಾಲಿನ್ಯವಾಗುತ್ತಿದೆ. ಪರಿಸರಸ್ನೇಹಿ ಉತ್ಪನ್ನಗಳನ್ನು ಮಾತ್ರ ಬಳಸಬೇಕೆಂದು ಪಾಲಿಬೆಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನೀಲಕಂಠೇಗೌಡ ಹೇಳಿದರು. ವಿದ್ಯಾರ್ಥಿಗಳು ಕಾಲೇಜು ಆವರಣವನ್ನು ಸ್ವಚ್ಛಗೊಳಿಸಿ ಅರಣ್ಯ ಇಲಾಖೆ ನೀಡಿದ ಗಿಡವನ್ನು ನೆಟ್ಟರು.</p><p>ಕಾಲೇಜಿನಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಿತಿಮತಿ ಆರ್ಎಫ್ಒ ಗಂಗಾಧರ್, ಡಿಆರ್ಎಫ್ಒ ಪ್ರಶಾಂತ್, ರೇಂಜ್ ಆಫೀಸರ್ ಶಶಿ, ಹಿರಿಯ ಉಪನ್ಯಾಸಕಿ ಶ್ರೀಮತಿ ಕೆ.ಕೆ.ಶೈನಾ, ನಿವೃತ್ತ ಯೋಧರಾದ ಸೋಮಯ್ಯ ಹಾಗೂ ಲವ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಣಿಕೊಪ್ಪಲು</strong>: ಪರಿಸರ ದಿನದಂದು ನೆಟ್ಟ ಗಿಡಗಳನ್ನು ವರ್ಷಪೂರ್ತಿ ಸಂರಕ್ಷಣೆ ಮಾಡಬೇಕು. ಸ್ವಚ್ಛ ಪರಿಸರ ಇದ್ದರೆ ಮಾತ್ರ ಜೀವ ಸಂಕುಲ ಆರೋಗ್ಯವಾಗಿ ಇರಲು ಸಾಧ್ಯ ಎಂದು ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಸಿದ್ಧಾರೂಢ ಸಿಂಗಾಡಿ ಹೇಳಿದರು. </p><p>ಗೋಣಿಕೊಪ್ಪಲು ಕಾವೇರಿ ಕಾಲೇಜು ಎನ್ಎಸ್ಎಸ್ ಘಟಕದಿಂದ ಕಾಲೇಜು ಆವರಣದಲ್ಲಿ ವಿವಿಧ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಗುರುವಾರ ಆಚರಿಸಿದ ವಿಶ್ವ ಪರಿಸರ ದಿನದಲ್ಲಿ ಅವರು ಮಾತನಾಡಿದರು.</p><p>ಉಪ ಪ್ರಾಂಶುಪಾಲರಾದ ಪ್ರೊ. ಎಂ.ಎಸ್.ಭಾರತಿ ಅಧ್ಯಕ್ಷತೆ ವಹಿಸಿದ್ದರು. ಕಚೇರಿ ಅಧೀಕ್ಷಕಿ ಟಿ.ಕೆ.ಲತಾ, ಎನ್. ಎಸ್. ಎಸ್ ಅಧಿಕಾರಿಗಳಾದ ಎಂ.ಎ.ಕುಶಾಲಪ್ಪ, ಕೆ.ಎಸ್.ಪೂಜಾ. ಹಾಗೂ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.</p><p><strong>ಪಾಲಿಬೆಟ್ಟ ಕಾಲೇಜು:</strong> ಮಾನವನ ದುರಾಸೆಯಿಂದಾಗಿ ಜಲಮಾಲಿನ್ಯ, ವಾಯುಮಾಲಿನ್ಯ ಹಾಗೂ ಮಣ್ಣು ಮಾಲಿನ್ಯವಾಗುತ್ತಿದೆ. ಪರಿಸರಸ್ನೇಹಿ ಉತ್ಪನ್ನಗಳನ್ನು ಮಾತ್ರ ಬಳಸಬೇಕೆಂದು ಪಾಲಿಬೆಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನೀಲಕಂಠೇಗೌಡ ಹೇಳಿದರು. ವಿದ್ಯಾರ್ಥಿಗಳು ಕಾಲೇಜು ಆವರಣವನ್ನು ಸ್ವಚ್ಛಗೊಳಿಸಿ ಅರಣ್ಯ ಇಲಾಖೆ ನೀಡಿದ ಗಿಡವನ್ನು ನೆಟ್ಟರು.</p><p>ಕಾಲೇಜಿನಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಿತಿಮತಿ ಆರ್ಎಫ್ಒ ಗಂಗಾಧರ್, ಡಿಆರ್ಎಫ್ಒ ಪ್ರಶಾಂತ್, ರೇಂಜ್ ಆಫೀಸರ್ ಶಶಿ, ಹಿರಿಯ ಉಪನ್ಯಾಸಕಿ ಶ್ರೀಮತಿ ಕೆ.ಕೆ.ಶೈನಾ, ನಿವೃತ್ತ ಯೋಧರಾದ ಸೋಮಯ್ಯ ಹಾಗೂ ಲವ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>