<p><strong>ಗೋಣಿಕೊಪ್ಪಲು:</strong> ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಗೋಣಿಕೊಪ್ಪಲು ಪಟ್ಟಣದ ಅನೇಕ ಬಡಾವಣೆಗಳು ಜಲಾವೃತಗೊಂಡಿವೆ. ಮುಖ್ಯರಸ್ತೆಯನ್ನು ಬಿಟ್ಟರೆ ಉಳಿದಂತೆ ಎಲ್ಲ ಮನೆಗಳೂ ನೀರಿನಿಂದ ಆವೃತವಾಗಿವೆ.</p>.<p>ಪಟ್ಟಣದ ನೇತಾಜಿ ಬಡಾವಣೆ, ಅಚ್ಚಪ್ಪ ಲೇಔಟ್, ಪಟೇಲ್ ನಗರ, ಬಸ್ ನಿಲ್ದಾಣದ ಕೆಳಗಿನ ಬೈಪಾಸ್ ರಸ್ತೆಯ ಮನೆಗಳು ಸಂಪೂರ್ಣ ಜಲಾವೃತಗೊಂಡಿವೆ. ನೆಲಮಾಳಿಗೆಯಲ್ಲಿ ವಾಸವಾಗಿದ್ದ ಜನರು ಮಹಡಿ ಮನೆಗಳ ಮೇಲೆ ಏರಿ ಕುಳಿತರು. ವಿಪತ್ತು ನಿರ್ವಹಣಾ ತಂಡ ಜನರನ್ನು ರಕ್ಷಿಸಿತು.</p>.<p>ಮನೆಗಳಲ್ಲಿ ಸಿಲುಕಿದ್ದ ಬೆಕ್ಕು, ನಾಯಿಗಳನ್ನು ಬೋಟ್ ಮೂಲಕ ತೆರಳಿ ರಕ್ಷಿಸಲಾಯಿತು. ಕೆಲವು ಮನೆಗಳ ಮುಂಭಾಗದಲ್ಲಿ ನಿಂತಿದ್ದ ವಾಹನಗಳು ನೀರಿನಲ್ಲಿ ಮುಳುಗಿದ್ದವು.</p>.<p>ಅರುವತ್ತೊಕ್ಕಲು ಕಡೆಗೆ ತೆರಳುವ ಬೈಪಾಸ್ ರಸ್ತೆ ತೋಡಿನ ಸೇತುವೆಯ ತಡೆಗೋಡೆ ಕುಸಿದಿದೆ. ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತೆರೆದಿರುವ ಪರಿಹಾರ ಕೇಂದ್ರದಲ್ಲಿ ನೂರಾರು ಸಂತ್ರಸ್ತರಿಗೆ ಆಶ್ರಯ ಕಲ್ಪಿಸಲಾಗಿದೆ. ಕೆಲವರು ಸಂಬಂಧಿಕರ ಮನೆಗಳಿಗೆ ತೆರಳಿದ್ದಾರೆ.</p>.<p>ಪಾಲಿಬೆಟ್ಟ, ಪೊನ್ನಂಪೇಟೆ, ಅಮ್ಮತ್ತಿ ಮಾರ್ಗದ ಎಲ್ಲ ರಸ್ತೆಗಳೂ ನೀರಿನಲ್ಲಿ ಮುಳುಗಿವೆ. ವಿರಾಜಪೇಟೆ– ಮೈಸೂರು ಮಾರ್ಗದಲ್ಲಿ ಸಾರಿಗೆ ಬಸ್ಗಳ ಸಂಚಾರವಿದೆ.</p>.<p>ಕೈಕೇರಿ ಭಾಗದ 4 ಕೆರೆಗಳು ಒಡೆದಿದ್ದರಿಂದ ಗೋಣಿಕೊಪ್ಪಲಿನ ಬೈಪಾಸ್ ತೋಡಿನ ಪ್ರವಾಹ ಹೆಚ್ಚಲು ಕಾರಣವಾಯಿತು. ಇಲ್ಲಿನ ಕಾಲ್ಸ್ ಶಾಲೆಯ ಒಳಗೂ ನೀರು ನುಗ್ಗಿ ವಸತಿ ನಿಲಯಕ್ಕೆ ಹಾನಿಯಾಗಿದೆ.</p>.<p>ಚೆನ್ನಂಗೊಲ್ಲಿ, ಮಾಯಮುಡಿ, ಬಾಳೆಲೆಯ ಗಂಧದಗುಡಿ ಭಾಗದಲ್ಲಿಯೂ ಹಲವು ಮನೆಗಳಿಗೆ ನೀರು ನುಗ್ಗಿದೆ. ಮಾಯಮುಡಿಯ ಆಪಟ್ಟೀರ ಸುಬ್ಬಯ್ಯ ಬೋಪಣ್ಣ ಅವರಿಗೆ ಸೇರಿದ ಕೆರೆಗಳು ಒಡೆದು ಕಾಫಿ ತೋಟ, ಗದ್ದೆಗಳು ಹಾಳಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಣಿಕೊಪ್ಪಲು:</strong> ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಗೋಣಿಕೊಪ್ಪಲು ಪಟ್ಟಣದ ಅನೇಕ ಬಡಾವಣೆಗಳು ಜಲಾವೃತಗೊಂಡಿವೆ. ಮುಖ್ಯರಸ್ತೆಯನ್ನು ಬಿಟ್ಟರೆ ಉಳಿದಂತೆ ಎಲ್ಲ ಮನೆಗಳೂ ನೀರಿನಿಂದ ಆವೃತವಾಗಿವೆ.</p>.<p>ಪಟ್ಟಣದ ನೇತಾಜಿ ಬಡಾವಣೆ, ಅಚ್ಚಪ್ಪ ಲೇಔಟ್, ಪಟೇಲ್ ನಗರ, ಬಸ್ ನಿಲ್ದಾಣದ ಕೆಳಗಿನ ಬೈಪಾಸ್ ರಸ್ತೆಯ ಮನೆಗಳು ಸಂಪೂರ್ಣ ಜಲಾವೃತಗೊಂಡಿವೆ. ನೆಲಮಾಳಿಗೆಯಲ್ಲಿ ವಾಸವಾಗಿದ್ದ ಜನರು ಮಹಡಿ ಮನೆಗಳ ಮೇಲೆ ಏರಿ ಕುಳಿತರು. ವಿಪತ್ತು ನಿರ್ವಹಣಾ ತಂಡ ಜನರನ್ನು ರಕ್ಷಿಸಿತು.</p>.<p>ಮನೆಗಳಲ್ಲಿ ಸಿಲುಕಿದ್ದ ಬೆಕ್ಕು, ನಾಯಿಗಳನ್ನು ಬೋಟ್ ಮೂಲಕ ತೆರಳಿ ರಕ್ಷಿಸಲಾಯಿತು. ಕೆಲವು ಮನೆಗಳ ಮುಂಭಾಗದಲ್ಲಿ ನಿಂತಿದ್ದ ವಾಹನಗಳು ನೀರಿನಲ್ಲಿ ಮುಳುಗಿದ್ದವು.</p>.<p>ಅರುವತ್ತೊಕ್ಕಲು ಕಡೆಗೆ ತೆರಳುವ ಬೈಪಾಸ್ ರಸ್ತೆ ತೋಡಿನ ಸೇತುವೆಯ ತಡೆಗೋಡೆ ಕುಸಿದಿದೆ. ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತೆರೆದಿರುವ ಪರಿಹಾರ ಕೇಂದ್ರದಲ್ಲಿ ನೂರಾರು ಸಂತ್ರಸ್ತರಿಗೆ ಆಶ್ರಯ ಕಲ್ಪಿಸಲಾಗಿದೆ. ಕೆಲವರು ಸಂಬಂಧಿಕರ ಮನೆಗಳಿಗೆ ತೆರಳಿದ್ದಾರೆ.</p>.<p>ಪಾಲಿಬೆಟ್ಟ, ಪೊನ್ನಂಪೇಟೆ, ಅಮ್ಮತ್ತಿ ಮಾರ್ಗದ ಎಲ್ಲ ರಸ್ತೆಗಳೂ ನೀರಿನಲ್ಲಿ ಮುಳುಗಿವೆ. ವಿರಾಜಪೇಟೆ– ಮೈಸೂರು ಮಾರ್ಗದಲ್ಲಿ ಸಾರಿಗೆ ಬಸ್ಗಳ ಸಂಚಾರವಿದೆ.</p>.<p>ಕೈಕೇರಿ ಭಾಗದ 4 ಕೆರೆಗಳು ಒಡೆದಿದ್ದರಿಂದ ಗೋಣಿಕೊಪ್ಪಲಿನ ಬೈಪಾಸ್ ತೋಡಿನ ಪ್ರವಾಹ ಹೆಚ್ಚಲು ಕಾರಣವಾಯಿತು. ಇಲ್ಲಿನ ಕಾಲ್ಸ್ ಶಾಲೆಯ ಒಳಗೂ ನೀರು ನುಗ್ಗಿ ವಸತಿ ನಿಲಯಕ್ಕೆ ಹಾನಿಯಾಗಿದೆ.</p>.<p>ಚೆನ್ನಂಗೊಲ್ಲಿ, ಮಾಯಮುಡಿ, ಬಾಳೆಲೆಯ ಗಂಧದಗುಡಿ ಭಾಗದಲ್ಲಿಯೂ ಹಲವು ಮನೆಗಳಿಗೆ ನೀರು ನುಗ್ಗಿದೆ. ಮಾಯಮುಡಿಯ ಆಪಟ್ಟೀರ ಸುಬ್ಬಯ್ಯ ಬೋಪಣ್ಣ ಅವರಿಗೆ ಸೇರಿದ ಕೆರೆಗಳು ಒಡೆದು ಕಾಫಿ ತೋಟ, ಗದ್ದೆಗಳು ಹಾಳಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>