<p>ಗೋಣಿಕೊಪ್ಪಲು: ಬಿ.ಶೆಟ್ಟಿಗೇರಿಯಲ್ಲಿ ತಾಲ್ಲೂಕು ಪಂಚಾಯಿತಿ ಇಒ ಅವರ ಹೆಸರಿನಲ್ಲಿರುವ 6 ಎಕರೆ ಸರ್ಕಾರಿ ಭೂಮಿಯನ್ನು ಬಡವರಿಗೆ ಮನೆ ನಿರ್ಮಿಸಿಕೊಳ್ಳಲು ಹಂಚಬೇಕು ಎಂದು ನಿವೇಶನ ರಹಿತ ಕೂಲಿ ಕಾರ್ಮಿಕರು 9 ದಿನಗಳಿಂದ ಬಿ.ಶೆಟ್ಟಿಗೇರಿ ಪೈಸಾರಿಯಲ್ಲಿ ಗುಡಿಸಲು ನಿರ್ಮಿಸಿಕೊಂಡು ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾ ಡಿಎಸ್ಎಸ್ ಸಂಚಾಲಕ ಎಚ್.ಆರ್. ಪರಶುರಾಮ್ ಅವರ ನೇತೃತ್ವದಲ್ಲಿ ಬಾಳೆಲೆ, ದೇವರಪುರ, ತಿತಿಮತಿ, ಕೋಣನಕಟ್ಟೆ ಮೊದಲಾದ ಭಾಗದ ನಿವೇಶನರಹಿತ 130 ಬುಡಕಟ್ಟು ಕುಟುಂಬಗಳ ಸದಸ್ಯರು ಧರಣಿ ನಡೆಸುತ್ತಿದ್ದು, ಈ ಸಂಬಂಧ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿ ಮಾಡಿದ ಎಚ್.ಆರ್. ಪರಶುರಾಮ್ ಮತ್ತು ಬುಡುಕಟ್ಟು ಸಮುದಾಯದ ಮುಖಂಡರು ಖಾಲಿ ಇರುವ ಜಾಗದಲ್ಲಿ ಕನಿಷ್ಠ ಮನೆ ನಿರ್ಮಿಸಿಕೊಳ್ಳಲು ನಿವೇಶನ ನೀಡಬೇಕು’ ಎಂದು ಮನವಿ ಮಾಡಿಕೊಂಡರು.</p>.<p>ಮನವಿ ಆಲಿಸಿದ ಪೊನ್ನಣ್ಣ ಈ ಬಗ್ಗೆ ಪರಿಶೀಲಿಸಲಾಗುವುದು. ಏ.17ರಂದು ಮುಖ್ಯಮಂತ್ರಿ ಜಿಲ್ಲೆಗೆ ಆಗಮಿಸುತ್ತಿದ್ದು, ಅವರದೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಹೇಳಿದರು.</p>.<p>ಪೊನ್ನಂಪೇಟೆ ತಹಶೀಲ್ದಾರ್ ತಾಲ್ಲೂಕು ಪಂಚಾಯಿತಿ ಇಒ ಕೊಣಿಯಂಡ ಅಪ್ಪಣ್ಣ, ಐಟಿಡಿಪಿ ಅಧಿಕಾರಿ ತೇಜಸ್ ಸ್ಥಳಕ್ಕೆ ಭೇಟಿ ನೀಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-51-1042113753</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗೋಣಿಕೊಪ್ಪಲು: ಬಿ.ಶೆಟ್ಟಿಗೇರಿಯಲ್ಲಿ ತಾಲ್ಲೂಕು ಪಂಚಾಯಿತಿ ಇಒ ಅವರ ಹೆಸರಿನಲ್ಲಿರುವ 6 ಎಕರೆ ಸರ್ಕಾರಿ ಭೂಮಿಯನ್ನು ಬಡವರಿಗೆ ಮನೆ ನಿರ್ಮಿಸಿಕೊಳ್ಳಲು ಹಂಚಬೇಕು ಎಂದು ನಿವೇಶನ ರಹಿತ ಕೂಲಿ ಕಾರ್ಮಿಕರು 9 ದಿನಗಳಿಂದ ಬಿ.ಶೆಟ್ಟಿಗೇರಿ ಪೈಸಾರಿಯಲ್ಲಿ ಗುಡಿಸಲು ನಿರ್ಮಿಸಿಕೊಂಡು ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾ ಡಿಎಸ್ಎಸ್ ಸಂಚಾಲಕ ಎಚ್.ಆರ್. ಪರಶುರಾಮ್ ಅವರ ನೇತೃತ್ವದಲ್ಲಿ ಬಾಳೆಲೆ, ದೇವರಪುರ, ತಿತಿಮತಿ, ಕೋಣನಕಟ್ಟೆ ಮೊದಲಾದ ಭಾಗದ ನಿವೇಶನರಹಿತ 130 ಬುಡಕಟ್ಟು ಕುಟುಂಬಗಳ ಸದಸ್ಯರು ಧರಣಿ ನಡೆಸುತ್ತಿದ್ದು, ಈ ಸಂಬಂಧ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿ ಮಾಡಿದ ಎಚ್.ಆರ್. ಪರಶುರಾಮ್ ಮತ್ತು ಬುಡುಕಟ್ಟು ಸಮುದಾಯದ ಮುಖಂಡರು ಖಾಲಿ ಇರುವ ಜಾಗದಲ್ಲಿ ಕನಿಷ್ಠ ಮನೆ ನಿರ್ಮಿಸಿಕೊಳ್ಳಲು ನಿವೇಶನ ನೀಡಬೇಕು’ ಎಂದು ಮನವಿ ಮಾಡಿಕೊಂಡರು.</p>.<p>ಮನವಿ ಆಲಿಸಿದ ಪೊನ್ನಣ್ಣ ಈ ಬಗ್ಗೆ ಪರಿಶೀಲಿಸಲಾಗುವುದು. ಏ.17ರಂದು ಮುಖ್ಯಮಂತ್ರಿ ಜಿಲ್ಲೆಗೆ ಆಗಮಿಸುತ್ತಿದ್ದು, ಅವರದೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಹೇಳಿದರು.</p>.<p>ಪೊನ್ನಂಪೇಟೆ ತಹಶೀಲ್ದಾರ್ ತಾಲ್ಲೂಕು ಪಂಚಾಯಿತಿ ಇಒ ಕೊಣಿಯಂಡ ಅಪ್ಪಣ್ಣ, ಐಟಿಡಿಪಿ ಅಧಿಕಾರಿ ತೇಜಸ್ ಸ್ಥಳಕ್ಕೆ ಭೇಟಿ ನೀಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-51-1042113753</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>