‘ತಾಲ್ಲೂಕಿನಲ್ಲಿ 11,850 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯುವ ಗುರಿ ಹೊಂದಲಾಗಿದೆ. ಈಗಾಗಲೇ 3,150 ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಕೃಷಿ ಪ್ರಾರಂಭಗೊಂಡಿದೆ. 2,480 ಹೆಕ್ಟೇರ್ ಪ್ರದೇಶದಲ್ಲಿ ಜೋಳದ ಕೃಷಿಯ ಗುರಿ ಇದ್ದು, 2,290 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಪೂರ್ಣಗೊಂಡಿದೆ. 150 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬಿತ್ತನೆ ಗುರಿ ಇದ್ದು, 82 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಮುಗಿದಿದೆ. ರೈತರಿಗೆ ಸಹಾಯಧನದಲ್ಲಿ 1,850 ಕೆ.ಜಿ ಭತ್ತದ ಬಿತ್ತನೆ ಬೀಜ ಹಾಗೂ 1,250 ಕೆ.ಜಿ ಜೋಳದ ಬಿತ್ತನೆ ಬೀಜ ವಿತರಿಸಲಾಗಿದೆ’ ಎಂದು ಯಾದವ್ ಬಾಬು ತಿಳಿಸಿದರು.