<p><strong>ಸುಂಟಿಕೊಪ್ಪ:</strong> ಸಮೀಪದ ಚೆಟ್ಟಳ್ಳಿ ಗ್ರಾಮ ಪಂಚಾಯಿತಿಗೆ ಸೇರಿದ ಪೊನ್ನತ್ ಮೊಟ್ಟೆಯ ಆರ್.ಎಸ್. ಚೆಟ್ಟಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಶಿಥಿಲಾವಸ್ಥೆಯಲ್ಲಿರುವುದನ್ನು ಮನಗಂಡ ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ ಅವರು ದುರಸ್ತಿ ಕಾರ್ಯಕ್ಕೆ ₹7 ಲಕ್ಷ ಅನುದಾನ ಬಿಡುಗಡೆಗೊಳಿಸಿದ್ದಾರೆ.</p>.<p>ಜೂ4ರಂದು ‘ಪ್ರಜಾವಾಣಿ’ಯಲ್ಲಿ ಪ್ರಕಟಗೊಂಡ 'ಕುಸಿಯುವ ಚಾವಣಿ, ಅಪಾಯದಲ್ಲಿ ಮಕ್ಕಳು' ಎಂಬ ಸುದ್ದಿ ಪ್ರಕಟಗೊಂಡ ಬೆನ್ನಲ್ಲೇ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಉಂಟಾಗುತ್ತಿರುವ ಸಂಕಷ್ಟವನ್ನು ಕಂಡು ಮರುಗಿದ್ದರು.</p>.<p>ಶಾಲಾ ಮುಖ್ಯೋಪಾಧ್ಯಾಯಿನಿ ಚೈತ್ರ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಶೌಕತ್ ಅವರೊಂದಿಗೆ ಚರ್ಚಿಸಿ ಮಾಹಿತಿ ಪಡೆದು ಈ ಶಾಲೆಯ ಶುಚಿತ್ವವನ್ನು ಕಾಪಾಡುವಂತೆ ಸೂಚಿಸಿದರಲ್ಲದೇ, ಶಾಲಾ ಕಟ್ಟಡದ ದುರಸ್ತಿಗೆ ಅನುದಾನ ಬಿಡುಗಡೆಗೊಳಿಸುವುದಾಗಿ ಭರವಸೆ ನೀಡಿದ್ದರು.</p>.<p>ಅದರಂತೆ, ಕಾಮಗಾರಿ ಆರಂಭಿಸಲು ಶಾಸಕರ ನಿರ್ದೇಶನದಂತೆ ಗುರುವಾರ ಪಂಚಾಯತ್ ರಾಜ್ ಮುಖ್ಯ ಎಂಜಿನಿಯರ್ ನಾರಾಯಣ ಮೂರ್ತಿ ಅವರು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸುವುದಾಗಿ ಮಾಹಿತಿ ನೀಡಿದರು.</p>.<p>1963ರಲ್ಲಿ ಪ್ರಾರಂಭಗೊಂಡ ಈ ಸರ್ಕಾರಿ ಶಾಲೆ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯೆ ನೀಡಿದ ವಿದ್ಯಾಸಂಸ್ಥೆ ಶಿಥಿಲಾವಸ್ಥೆಗೆ ಒಳಗಾಗಿದ್ದು ಇದೀಗ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು ಶಾಸಕರ ಮುಖಾಂತರ ಕಾಯಕಲ್ಪಕ್ಕೆ ಒಳಗಾಗಿರುವುದು ಪ್ರಜ್ಞಾವಂತ ನಾಗರಿಕ ರಲ್ಲಿ ಸಂತಸ ವ್ಯಕ್ತವಾಗಿದೆ.</p>.<p>ಇದೇ ವೇಳೆ ಶಾಲಾ ಮುಖ್ಯೋಪಾಧ್ಯಾಯಿನಿ ಚೈತ್ರ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶೌಕತ್, ವಲಯ ಕಾಂಗ್ರೆಸ್ ಅಧ್ಯಕ್ಷ ಟಿ.ಎಂ.ಮಹಮ್ಮದ್ ರಫಿ, ಸಹಾಯಕ ಎಂಜಿನಿಯರ್ ಸಲೀಂ, ಗ್ರಾಮ ಪಂಚಾಯಿತಿ ಸದಸ್ಯೆ ರಸೀನಾ, ಮಾಜಿ ಅಧ್ಯಕ್ಷೆ ಶಕೀನಾ, ಹಳೆಯ ವಿದ್ಯಾರ್ಥಿ ಅಬ್ಧುಲ್ ಸಕೀರ್, ಸಹಶಿಕ್ಷಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಂಟಿಕೊಪ್ಪ:</strong> ಸಮೀಪದ ಚೆಟ್ಟಳ್ಳಿ ಗ್ರಾಮ ಪಂಚಾಯಿತಿಗೆ ಸೇರಿದ ಪೊನ್ನತ್ ಮೊಟ್ಟೆಯ ಆರ್.ಎಸ್. ಚೆಟ್ಟಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಶಿಥಿಲಾವಸ್ಥೆಯಲ್ಲಿರುವುದನ್ನು ಮನಗಂಡ ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ ಅವರು ದುರಸ್ತಿ ಕಾರ್ಯಕ್ಕೆ ₹7 ಲಕ್ಷ ಅನುದಾನ ಬಿಡುಗಡೆಗೊಳಿಸಿದ್ದಾರೆ.</p>.<p>ಜೂ4ರಂದು ‘ಪ್ರಜಾವಾಣಿ’ಯಲ್ಲಿ ಪ್ರಕಟಗೊಂಡ 'ಕುಸಿಯುವ ಚಾವಣಿ, ಅಪಾಯದಲ್ಲಿ ಮಕ್ಕಳು' ಎಂಬ ಸುದ್ದಿ ಪ್ರಕಟಗೊಂಡ ಬೆನ್ನಲ್ಲೇ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಉಂಟಾಗುತ್ತಿರುವ ಸಂಕಷ್ಟವನ್ನು ಕಂಡು ಮರುಗಿದ್ದರು.</p>.<p>ಶಾಲಾ ಮುಖ್ಯೋಪಾಧ್ಯಾಯಿನಿ ಚೈತ್ರ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಶೌಕತ್ ಅವರೊಂದಿಗೆ ಚರ್ಚಿಸಿ ಮಾಹಿತಿ ಪಡೆದು ಈ ಶಾಲೆಯ ಶುಚಿತ್ವವನ್ನು ಕಾಪಾಡುವಂತೆ ಸೂಚಿಸಿದರಲ್ಲದೇ, ಶಾಲಾ ಕಟ್ಟಡದ ದುರಸ್ತಿಗೆ ಅನುದಾನ ಬಿಡುಗಡೆಗೊಳಿಸುವುದಾಗಿ ಭರವಸೆ ನೀಡಿದ್ದರು.</p>.<p>ಅದರಂತೆ, ಕಾಮಗಾರಿ ಆರಂಭಿಸಲು ಶಾಸಕರ ನಿರ್ದೇಶನದಂತೆ ಗುರುವಾರ ಪಂಚಾಯತ್ ರಾಜ್ ಮುಖ್ಯ ಎಂಜಿನಿಯರ್ ನಾರಾಯಣ ಮೂರ್ತಿ ಅವರು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸುವುದಾಗಿ ಮಾಹಿತಿ ನೀಡಿದರು.</p>.<p>1963ರಲ್ಲಿ ಪ್ರಾರಂಭಗೊಂಡ ಈ ಸರ್ಕಾರಿ ಶಾಲೆ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯೆ ನೀಡಿದ ವಿದ್ಯಾಸಂಸ್ಥೆ ಶಿಥಿಲಾವಸ್ಥೆಗೆ ಒಳಗಾಗಿದ್ದು ಇದೀಗ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು ಶಾಸಕರ ಮುಖಾಂತರ ಕಾಯಕಲ್ಪಕ್ಕೆ ಒಳಗಾಗಿರುವುದು ಪ್ರಜ್ಞಾವಂತ ನಾಗರಿಕ ರಲ್ಲಿ ಸಂತಸ ವ್ಯಕ್ತವಾಗಿದೆ.</p>.<p>ಇದೇ ವೇಳೆ ಶಾಲಾ ಮುಖ್ಯೋಪಾಧ್ಯಾಯಿನಿ ಚೈತ್ರ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶೌಕತ್, ವಲಯ ಕಾಂಗ್ರೆಸ್ ಅಧ್ಯಕ್ಷ ಟಿ.ಎಂ.ಮಹಮ್ಮದ್ ರಫಿ, ಸಹಾಯಕ ಎಂಜಿನಿಯರ್ ಸಲೀಂ, ಗ್ರಾಮ ಪಂಚಾಯಿತಿ ಸದಸ್ಯೆ ರಸೀನಾ, ಮಾಜಿ ಅಧ್ಯಕ್ಷೆ ಶಕೀನಾ, ಹಳೆಯ ವಿದ್ಯಾರ್ಥಿ ಅಬ್ಧುಲ್ ಸಕೀರ್, ಸಹಶಿಕ್ಷಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>