ವಿರಾಜಪೇಟೆ: ‘ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಪಡೆದಿರುವ ಮತದ ಪ್ರಮಾಣ ಶೇ44.6ಕ್ಕೆ ಏರಿಕೆಯಾಗಿದ್ದು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ ಎಂಬುದಕ್ಕೆ ಇದೇ ಸಾಕ್ಷಿ. ಯಾವುದೇ ಕಾರಣಕ್ಕೂ ಯೋಜನೆಗಳು ಸ್ಥಗಿತಗೊಳಿಸುವುದಿಲ್ಲ’ ಎಂದು ಮುಖ್ಯಮಂತ್ರಿ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಭರವಸೆ ನೀಡಿದರು.