ರಕ್ತೇಶ್ವರಿ, ವರ್ಣಾರ ಪಂಜುರ್ಲಿ, ಮಂತ್ರ ಗುಳಿಗದ ಕೋಲ ನಡೆಯಿತು. ನೂರಾರು ಭಕ್ತಾದಿಗಳು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದ ಪ್ರಯುಕ್ತ ದೇವಾಲಯದಲ್ಲಿ ಬೆಳಿಗ್ಗೆಯಿಂದ ಗಣಹೋಮ, ದೈವಗಳ ಶುದ್ಧೀಕರಣ, ಅನ್ನದಾನ ನಡೆಯಿತು.
ಅನೇಕರು ಹರಕೆ ತೀರಿಸಿದರು. ಕೆಲವರು ಇಷ್ಟಾರ್ಥ ಸಿದ್ಧಿಗಾಗಿ ದೈವಗಳಲ್ಲಿ ಹರಕೆ ಹೊತ್ತರು. ಮಂಗಳೂರು ಮೂಲದ ದೈವಗಳ ನೃತ್ಯ ಸೇರಿದ್ದ ಭಕ್ತಾದಿಗಳ ಗಮನ ಸೆಳೆಯಿತು.