ಗ್ರಾಮಸ್ಥ ಸಿ.ಕೆ.ಚಂದ್ರಶೇಖರ್ ಮಾತನಾಡಿ, ‘ಪ್ರತಿ ಬಾರಿಯೂ ನಡೆಯುವ ಗ್ರಾಮಸಭೆಗಳಿಗೆ ವಿರಳ ಸಂಖ್ಯೆಯಲ್ಲಿ ಅಧಿಕಾರಿಗಳು ಭಾಗವಹಿಸುತ್ತಾರೆ. ಗ್ರಾಮಸ್ಥರು, ರೈತರಿಗೆ ಸಾಕಷ್ಟು ಸಮಸ್ಯೆಗಳಿರುತ್ತದೆ. ಅಧಿಕಾರಿಗಳ ಮುಂದೆ ನಾವು ನಮ್ಮ ಸಮಸ್ಯೆಯನ್ನು ಹೇಳಿಕೊಳ್ಳಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಗ್ರಾಮಸಭೆಯನ್ನು ಮುಂದೂಡಬೇಕು’ ಆಗ್ರಹಿಸಿದರು.