<p><strong>ಮಡಿಕೇರಿ:</strong>ಇಲ್ಲಿನ ಪೇಟೆ ಶ್ರೀರಾಮ ಮಂದಿರದಲ್ಲಿ ಸೋಮವಾರ ಪೂಜೆ ಸಲ್ಲಿಸುವ ಮೂಲಕ ನಾಡಹಬ್ಬ ದಸರಾ ಜನೋತ್ಸವ 2022ರ ಕಾರ್ಯಕ್ರಮಗಳ ಸಿದ್ಧತೆಗೆ ಚಾಲನೆ ನೀಡಲಾಯಿತು. ಈ ಮೂಲಕ ಜಿಲ್ಲೆಯಲ್ಲಿ ದಸರಾ ಮಹೋತ್ಸವದ ಚಟುವಟಿಕೆಗಳು ಗರಿಗೆದರಿದವು. ಜತೆಗೆ, ಕಳೆದೆರಡು ವರ್ಷಗಳಿಂದ ಸರಳವಾಗಿ ಆಚರಣೆಯಾಗಿದ್ದ ದಸರೆಯನ್ನು ಈ ಬಾರಿ ವಿಜೃಂಭಣೆಯಿಂದ ಆಚರಿಸಲೂ ನಿರ್ಧರಿಸಲಾಯಿತು.</p>.<p>ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ದಸರಾ ಸಮಿತಿ ಅಧ್ಯಕ್ಷರೂ ಆಗಿರುವ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಅವರು ಪೇಟೆ ಶ್ರೀರಾಮ ಮಂದಿರದಲ್ಲಿ ಪೂಜೆ ಸಲ್ಲಿಸಿ ದಸರಾ ಚಟುವಟಿಕೆಗಳಿಗೆ ವಿದ್ಯುಕ್ತವಾಗಿ ಚಾಲನೆ ನೀಡಿದರು.</p>.<p>ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ‘ಕಳೆದ 2 ವರ್ಷಗಳಿಂದ ಕಳೆಗುಂದಿದ್ದ ಮಡಿಕೇರಿ ದಸರಾವನ್ನು ಈ ಬಾರಿ ಬಹಳ ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ನಡೆಸಲಾಗುವುದು’ ಎಂದು ಹೇಳಿದರು.</p>.<p>ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ಕೆರೆಕಟ್ಟೆಗಳು ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದೆ. ಕೊರೊನಾ ಭೀತಿ ಸ್ವಲ್ಪ ಕಡಿಮೆಯಾಗಿದೆ. ಕಳೆದ ಎರಡು ವರ್ಷದಿಂದ ಕಳೆಗುಂದಿದ ದಸರಾ ಸಂಭ್ರಮವನ್ನೂ ಈ ಬಾರಿ ಸೇರಿಸಿಕೊಂಡು ಬಹಳ ವಿಜೃಂಭಣೆಯಿಂದ ಮಾಡಲಾಗುತ್ತದೆ ಎಂದರು.</p>.<p>ಮಡಿಕೇರಿ ದಸರಾ ಸಮಿತಿ ಕಾರ್ಯಾಧ್ಯಕ್ಷ ಕೆ.ಎಸ್.ರಮೇಶ್ ಮಾತನಾಡಿ, ‘ಮಡಿಕೇರಿ ದಸರಾವನ್ನು ಕಳೆದೆರಡು ವರ್ಷಗಳಿಂದ ಕೊರೊನಾ ಮತ್ತು ಮಳೆಯಿಂದಾಗಿ ಅದ್ದೂರಿಯಾಗಿ ಆಚರಿಸಲು ಸಾಧ್ಯವಾಗಲಿಲ್ಲ. ಆ ದಿಸೆಯಲ್ಲಿ ಈ ಬಾರಿಯ ದಸರಾವನ್ನು ವಿಜೃಂಭಣೆಯಿಂದ ಮಾಡಲಾಗುತ್ತದೆ’ ಎಂದರು.</p>.<p>ಶಾಸಕರ ಪರಿಶ್ರಮದಿಂದ ಈ ಬಾರಿಯ ದಸರಕ್ಕೆ ಸರ್ಕಾರದಿಂದ ₹ 1 ಕೋಟಿ ಹಣ ಬಿಡುಗಡೆಯಾಗಿದೆ. ಸಂಪ್ರದಾಯದಂತೆ ಪೇಟೆ ಶ್ರೀರಾಮ ಮಂದಿರದಲ್ಲಿ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದ್ದೇವೆ. ಮುಂದಿನ ಸಭೆಯಲ್ಲಿ ಪೂರ್ವ ತಯಾರಿಗಳ ಬಗ್ಗೆ ಚರ್ಚಿಸಲಾಗುವುದು ಎಂದರು.</p>.<p>ಉಪಾಧ್ಯಕ್ಷೆ ಸವಿತಾ ರಾಕೇಶ್, ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೇಶ್ ಯಲ್ಲಪ್ಪ, ಖಜಾಂಜಿ ಶ್ವೇತಾ ಪ್ರಶಾಂತ್, ದಶಮಂಟಪ ಸಮಿತಿ ಅಧ್ಯಕ್ಷ ಮನು ಮಂಜುನಾಥ್, ನಗರಸಭೆ ಸದಸ್ಯರು, ದಸರಾ ಸಮಿತಿ ಪ್ರಮುಖರು ಭಾಗಿಯಾಗಿದ್ದರು.</p>.<p class="Subhead"><strong>ವೈಭವದ ದಸರೆಗೆ ತೀರ್ಮಾನ</strong><br />ನಂತರ ನಡೆದ ಸಭೆಯಲ್ಲಿ ವೈಭವದಿಂದ ದಸರೆ ನಡೆಸುವ ತೀರ್ಮಾನವನ್ನು ಒಕ್ಕೊರಲಿನಿಂದ ಕೈಗೊಳ್ಳಲಾಯಿತು.ಸರ್ಕಾರದಿಂದ ಬಂದಿರುವ ₹ 1 ಕೋಟಿ ಅನುದಾನವನ್ನು ಹೇಗೆ ಬಳಕೆ ಮಾಡಬೇಕು ಎನ್ನುವುದರ ಕುರಿತು ವಿಸ್ತೃತ ಚರ್ಚೆ ನಡೆಯಿತು. ದಶಮಂಟಪೋತ್ಸವ ಸಮಿತಿ ಎಷ್ಟು ಮುಖ್ಯವೋ ಅಷ್ಟೇ ಸಾಂಸ್ಕೃತಿಕ ಸಮಿತಿಯೂ ಮುಖ್ಯ ಎಂಬ ಅಭಿಪ್ರಾಯಗಳು ಕೇಳಿ ಬಂದವು.</p>.<p>ಮಹಿಳಾ ದಸರೆ, ಜನಪದ ದಸರೆ, ಯುವ ದಸರೆ ಸೇರಿದಂತೆ ನವರಾತ್ರಿಗಳಂದು ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಗೆ ನಿರ್ಧರಿಸಲಾಯಿತು. ಇದಕ್ಕಾಗಿಯೇ ₹ 13 ಲಕ್ಷ ತೆಗೆದಿರಿಸುವ ಸಲಹೆ ವ್ಯಕ್ತವಾಯಿತು. ದಶಮಂಟಪಗಳಿಗೆ ಹಾಗೂ ಕರಗ ಸಮಿತಿಗಳಿಗೆ ₹ 41 ಲಕ್ಷ, ವೇದಿಕೆ ಮತ್ತು ನಗರ ಅಲಂಕಾರಕ್ಕೆ ₹ 17.50 ಲಕ್ಷ ಮೀಸಲಿಡುವ ಕುರಿತೂ ಚರ್ಚೆಗಳು ನಡೆದವು.</p>.<p>ವಿಶೇಷ ಆಹ್ವಾನಿತರಾಗಿ ಪಾಲ್ಗೊಂಡಿದ್ದ ಟಿ.ಪಿ.ರಮೇಶ್, ‘ಯಾವುದೇ ಲೋಪವಾಗದಂತೆ ದಸರೆ ನಡೆಸಬೇಕು’ ಎಂದು ಸಲಹೆ ನೀಡಿದರು.</p>.<p>ಮತ್ತೊಬ್ಬ ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದ ಪತ್ರಿಕೋದ್ಯಮಿ ಜಿ.ರಾಜೇಂದ್ರ, ‘ಅನುದಾನವನ್ನು ಸಾಕಷ್ಟು ಮುಂಚೆಯೇ ಬಿಡುಗಡೆ ಮಾಡಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong>ಇಲ್ಲಿನ ಪೇಟೆ ಶ್ರೀರಾಮ ಮಂದಿರದಲ್ಲಿ ಸೋಮವಾರ ಪೂಜೆ ಸಲ್ಲಿಸುವ ಮೂಲಕ ನಾಡಹಬ್ಬ ದಸರಾ ಜನೋತ್ಸವ 2022ರ ಕಾರ್ಯಕ್ರಮಗಳ ಸಿದ್ಧತೆಗೆ ಚಾಲನೆ ನೀಡಲಾಯಿತು. ಈ ಮೂಲಕ ಜಿಲ್ಲೆಯಲ್ಲಿ ದಸರಾ ಮಹೋತ್ಸವದ ಚಟುವಟಿಕೆಗಳು ಗರಿಗೆದರಿದವು. ಜತೆಗೆ, ಕಳೆದೆರಡು ವರ್ಷಗಳಿಂದ ಸರಳವಾಗಿ ಆಚರಣೆಯಾಗಿದ್ದ ದಸರೆಯನ್ನು ಈ ಬಾರಿ ವಿಜೃಂಭಣೆಯಿಂದ ಆಚರಿಸಲೂ ನಿರ್ಧರಿಸಲಾಯಿತು.</p>.<p>ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ದಸರಾ ಸಮಿತಿ ಅಧ್ಯಕ್ಷರೂ ಆಗಿರುವ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಅವರು ಪೇಟೆ ಶ್ರೀರಾಮ ಮಂದಿರದಲ್ಲಿ ಪೂಜೆ ಸಲ್ಲಿಸಿ ದಸರಾ ಚಟುವಟಿಕೆಗಳಿಗೆ ವಿದ್ಯುಕ್ತವಾಗಿ ಚಾಲನೆ ನೀಡಿದರು.</p>.<p>ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ‘ಕಳೆದ 2 ವರ್ಷಗಳಿಂದ ಕಳೆಗುಂದಿದ್ದ ಮಡಿಕೇರಿ ದಸರಾವನ್ನು ಈ ಬಾರಿ ಬಹಳ ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ನಡೆಸಲಾಗುವುದು’ ಎಂದು ಹೇಳಿದರು.</p>.<p>ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ಕೆರೆಕಟ್ಟೆಗಳು ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದೆ. ಕೊರೊನಾ ಭೀತಿ ಸ್ವಲ್ಪ ಕಡಿಮೆಯಾಗಿದೆ. ಕಳೆದ ಎರಡು ವರ್ಷದಿಂದ ಕಳೆಗುಂದಿದ ದಸರಾ ಸಂಭ್ರಮವನ್ನೂ ಈ ಬಾರಿ ಸೇರಿಸಿಕೊಂಡು ಬಹಳ ವಿಜೃಂಭಣೆಯಿಂದ ಮಾಡಲಾಗುತ್ತದೆ ಎಂದರು.</p>.<p>ಮಡಿಕೇರಿ ದಸರಾ ಸಮಿತಿ ಕಾರ್ಯಾಧ್ಯಕ್ಷ ಕೆ.ಎಸ್.ರಮೇಶ್ ಮಾತನಾಡಿ, ‘ಮಡಿಕೇರಿ ದಸರಾವನ್ನು ಕಳೆದೆರಡು ವರ್ಷಗಳಿಂದ ಕೊರೊನಾ ಮತ್ತು ಮಳೆಯಿಂದಾಗಿ ಅದ್ದೂರಿಯಾಗಿ ಆಚರಿಸಲು ಸಾಧ್ಯವಾಗಲಿಲ್ಲ. ಆ ದಿಸೆಯಲ್ಲಿ ಈ ಬಾರಿಯ ದಸರಾವನ್ನು ವಿಜೃಂಭಣೆಯಿಂದ ಮಾಡಲಾಗುತ್ತದೆ’ ಎಂದರು.</p>.<p>ಶಾಸಕರ ಪರಿಶ್ರಮದಿಂದ ಈ ಬಾರಿಯ ದಸರಕ್ಕೆ ಸರ್ಕಾರದಿಂದ ₹ 1 ಕೋಟಿ ಹಣ ಬಿಡುಗಡೆಯಾಗಿದೆ. ಸಂಪ್ರದಾಯದಂತೆ ಪೇಟೆ ಶ್ರೀರಾಮ ಮಂದಿರದಲ್ಲಿ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದ್ದೇವೆ. ಮುಂದಿನ ಸಭೆಯಲ್ಲಿ ಪೂರ್ವ ತಯಾರಿಗಳ ಬಗ್ಗೆ ಚರ್ಚಿಸಲಾಗುವುದು ಎಂದರು.</p>.<p>ಉಪಾಧ್ಯಕ್ಷೆ ಸವಿತಾ ರಾಕೇಶ್, ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೇಶ್ ಯಲ್ಲಪ್ಪ, ಖಜಾಂಜಿ ಶ್ವೇತಾ ಪ್ರಶಾಂತ್, ದಶಮಂಟಪ ಸಮಿತಿ ಅಧ್ಯಕ್ಷ ಮನು ಮಂಜುನಾಥ್, ನಗರಸಭೆ ಸದಸ್ಯರು, ದಸರಾ ಸಮಿತಿ ಪ್ರಮುಖರು ಭಾಗಿಯಾಗಿದ್ದರು.</p>.<p class="Subhead"><strong>ವೈಭವದ ದಸರೆಗೆ ತೀರ್ಮಾನ</strong><br />ನಂತರ ನಡೆದ ಸಭೆಯಲ್ಲಿ ವೈಭವದಿಂದ ದಸರೆ ನಡೆಸುವ ತೀರ್ಮಾನವನ್ನು ಒಕ್ಕೊರಲಿನಿಂದ ಕೈಗೊಳ್ಳಲಾಯಿತು.ಸರ್ಕಾರದಿಂದ ಬಂದಿರುವ ₹ 1 ಕೋಟಿ ಅನುದಾನವನ್ನು ಹೇಗೆ ಬಳಕೆ ಮಾಡಬೇಕು ಎನ್ನುವುದರ ಕುರಿತು ವಿಸ್ತೃತ ಚರ್ಚೆ ನಡೆಯಿತು. ದಶಮಂಟಪೋತ್ಸವ ಸಮಿತಿ ಎಷ್ಟು ಮುಖ್ಯವೋ ಅಷ್ಟೇ ಸಾಂಸ್ಕೃತಿಕ ಸಮಿತಿಯೂ ಮುಖ್ಯ ಎಂಬ ಅಭಿಪ್ರಾಯಗಳು ಕೇಳಿ ಬಂದವು.</p>.<p>ಮಹಿಳಾ ದಸರೆ, ಜನಪದ ದಸರೆ, ಯುವ ದಸರೆ ಸೇರಿದಂತೆ ನವರಾತ್ರಿಗಳಂದು ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಗೆ ನಿರ್ಧರಿಸಲಾಯಿತು. ಇದಕ್ಕಾಗಿಯೇ ₹ 13 ಲಕ್ಷ ತೆಗೆದಿರಿಸುವ ಸಲಹೆ ವ್ಯಕ್ತವಾಯಿತು. ದಶಮಂಟಪಗಳಿಗೆ ಹಾಗೂ ಕರಗ ಸಮಿತಿಗಳಿಗೆ ₹ 41 ಲಕ್ಷ, ವೇದಿಕೆ ಮತ್ತು ನಗರ ಅಲಂಕಾರಕ್ಕೆ ₹ 17.50 ಲಕ್ಷ ಮೀಸಲಿಡುವ ಕುರಿತೂ ಚರ್ಚೆಗಳು ನಡೆದವು.</p>.<p>ವಿಶೇಷ ಆಹ್ವಾನಿತರಾಗಿ ಪಾಲ್ಗೊಂಡಿದ್ದ ಟಿ.ಪಿ.ರಮೇಶ್, ‘ಯಾವುದೇ ಲೋಪವಾಗದಂತೆ ದಸರೆ ನಡೆಸಬೇಕು’ ಎಂದು ಸಲಹೆ ನೀಡಿದರು.</p>.<p>ಮತ್ತೊಬ್ಬ ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದ ಪತ್ರಿಕೋದ್ಯಮಿ ಜಿ.ರಾಜೇಂದ್ರ, ‘ಅನುದಾನವನ್ನು ಸಾಕಷ್ಟು ಮುಂಚೆಯೇ ಬಿಡುಗಡೆ ಮಾಡಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>