<p><strong>ಗೋಣಿಕೊಪ್ಪಲು</strong>: ಸರ್ಕಾರ ಹೊಸದಾಗಿ ರಚನೆ ಮಾಡಿರುವ ಮಹಿಳೆಯರ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಪೊನ್ನಂಪೇಟೆ ತಾಲ್ಲೂಕಿನಲ್ಲಿ ಫಲಾನುಭವಿಗಳನ್ನು ಈಗಾಗಲೇ ಆಯ್ಕೆ ಮಾಡಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಅಪ್ಪಣ್ಣ ಹೇಳಿದರು.</p>.<p>ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಬುಧವಾರ ನಡೆದ ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ‘ಗೃಹಲಕ್ಷ್ಮಿ ಯೋಜನೆಯಲ್ಲಿ 117 ಫಲಾನುಭವಿಗಳಿಗೆ ಸೆಪ್ಟಂಬರ್ವರೆಗೆ ಹಣ ಪಾವತಿಯಾಗಿದೆ. ಇನ್ನುಳಿದ ಐದು ತಿಂಗಳ ಹಣ ಕೂಡಲೆ ಬಿಡುಗಡೆಯಾಗಲಿದೆ’ ಎಂದು ತಿಳಿಸಿದರು.</p>.<p>‘ಸೆಪ್ಟೆಂಬರ್ವರೆಗೆ ಹೊಸದಾಗಿ 720 ಫಲಾನುಭವಿಗಳು ಹೆಸರು ನೋಂದಾಯಿಸಿಕೊಂಡಿದ್ದು, ಐಟಿ ಮತ್ತು ಜಿಎಸ್ಟಿ ಪಾವತಿಸುತ್ತಿರುವ ಫಲಾನುಭವಿಗಳಿಗೆ ಕೆಲವು ತಾಂತ್ರಿಕ ಅಡಚಣೆಯಾಗಿದೆ’ ಎಂದು ಹೇಳಿದರು.</p>.<p>‘ಅನ್ನಭಾಗ್ಯ’ ಯೋಜನೆಯಡಿಯಲ್ಲಿ ಪಡಿತರ ಪಡೆಯುತ್ತಿದ್ದ ಕೆಲವರ ಬಿಪಿಎಲ್ ಕಾರ್ಡ್ ರದ್ದಾಗಿದೆ. ಇದರ ಬಗ್ಗೆ ಗಂಭೀರವಾಗಿ ಗಮನಹರಿಸಿ ಪರಿಶೀಲಿಸಲಾಗುವುದು’ ಎಂದು ತಿಳಿಸಿದರು.</p>.<p>‘ಗೃಹಜ್ಯೋತಿ’, ‘ಯುವನಿಧಿ’ ಯೋಜನೆಗಳ ಬಗ್ಗೆ ಚರ್ಚೆ ನಡೆಯಿತು. </p>.<p>ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಶಾಂತ್ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಅಧಿಕಾರಿಗಳು ಸರ್ಕಾರದ ಎಲ್ಲ ಯೋಜನೆಗಳು ಫಲಾನುಭವಿಗಳಿಗೆ ದೊರಕುವಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಣಿಕೊಪ್ಪಲು</strong>: ಸರ್ಕಾರ ಹೊಸದಾಗಿ ರಚನೆ ಮಾಡಿರುವ ಮಹಿಳೆಯರ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಪೊನ್ನಂಪೇಟೆ ತಾಲ್ಲೂಕಿನಲ್ಲಿ ಫಲಾನುಭವಿಗಳನ್ನು ಈಗಾಗಲೇ ಆಯ್ಕೆ ಮಾಡಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಅಪ್ಪಣ್ಣ ಹೇಳಿದರು.</p>.<p>ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಬುಧವಾರ ನಡೆದ ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ‘ಗೃಹಲಕ್ಷ್ಮಿ ಯೋಜನೆಯಲ್ಲಿ 117 ಫಲಾನುಭವಿಗಳಿಗೆ ಸೆಪ್ಟಂಬರ್ವರೆಗೆ ಹಣ ಪಾವತಿಯಾಗಿದೆ. ಇನ್ನುಳಿದ ಐದು ತಿಂಗಳ ಹಣ ಕೂಡಲೆ ಬಿಡುಗಡೆಯಾಗಲಿದೆ’ ಎಂದು ತಿಳಿಸಿದರು.</p>.<p>‘ಸೆಪ್ಟೆಂಬರ್ವರೆಗೆ ಹೊಸದಾಗಿ 720 ಫಲಾನುಭವಿಗಳು ಹೆಸರು ನೋಂದಾಯಿಸಿಕೊಂಡಿದ್ದು, ಐಟಿ ಮತ್ತು ಜಿಎಸ್ಟಿ ಪಾವತಿಸುತ್ತಿರುವ ಫಲಾನುಭವಿಗಳಿಗೆ ಕೆಲವು ತಾಂತ್ರಿಕ ಅಡಚಣೆಯಾಗಿದೆ’ ಎಂದು ಹೇಳಿದರು.</p>.<p>‘ಅನ್ನಭಾಗ್ಯ’ ಯೋಜನೆಯಡಿಯಲ್ಲಿ ಪಡಿತರ ಪಡೆಯುತ್ತಿದ್ದ ಕೆಲವರ ಬಿಪಿಎಲ್ ಕಾರ್ಡ್ ರದ್ದಾಗಿದೆ. ಇದರ ಬಗ್ಗೆ ಗಂಭೀರವಾಗಿ ಗಮನಹರಿಸಿ ಪರಿಶೀಲಿಸಲಾಗುವುದು’ ಎಂದು ತಿಳಿಸಿದರು.</p>.<p>‘ಗೃಹಜ್ಯೋತಿ’, ‘ಯುವನಿಧಿ’ ಯೋಜನೆಗಳ ಬಗ್ಗೆ ಚರ್ಚೆ ನಡೆಯಿತು. </p>.<p>ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಶಾಂತ್ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಅಧಿಕಾರಿಗಳು ಸರ್ಕಾರದ ಎಲ್ಲ ಯೋಜನೆಗಳು ಫಲಾನುಭವಿಗಳಿಗೆ ದೊರಕುವಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>