<p><strong>ಶನಿವಾರಸಂತೆ:</strong> ‘ಜಾತ್ರಾ ಮಹೋತ್ಸವ ಗ್ರಾಮೀಣ ಪ್ರದೇಶದ ಸಂಸ್ಕೃತಿಯ ಸೊಗಡಾಗಿದ್ದು ಸಂಸ್ಕೃತಿ, ಸಂಪ್ರದಾಯ, ಕಲೆಯನ್ನು ಪ್ರತಿಬಿಂಬಿಸುವಲ್ಲಿ ಯಶಸ್ವಿಯಾಗಿದೆ’ ಎಂದು ತಾಲ್ಲೂಕು ಪಂಚಾಯಿತಿ ಸದಸ್ಯ ಎಂ.ಬಿ.ಅಭಿಮನ್ಯುಕುಮಾರ್ ಅಭಿಪ್ರಾಯಪಟ್ಟರು.</p>.<p>ಸಮೀಪದ ಗುಡುಗಳಲೆ ಜಯದೇವ ಜಾನುವಾರು ಜಾತ್ರಾ ಮಹೋತ್ಸವದ ಮುಕ್ತಾಯ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಗತವೈಭವ ಇಂದಿಲ್ಲ. ರಾಸುಗಳ ಸಂಖ್ಯೆ ಕುಸಿದಿದ್ದರೂ ಜಾತ್ರೆ ಜನಾಕರ್ಷಣೆಯ ಕೇಂದ್ರವಾಗಿ ಉಳಿದಿದೆ. ದೇಸಿ ತಳಿಗಳು ಪವಿತ್ರವೆನಿಸಿದ್ದರೂ ಪಶುಪಾಲನೆ ಕಡಿಮೆಯಾಗಿದೆ. ಸಂಸ್ಕೃತಿಯ ಪ್ರತೀಕವಾದ ಜಾತ್ರಾ ಪರಂಪರೆಯನ್ನು ಯುವಜನಾಂಗ ಉಳಿಸಿ ಬೆಳೆಸಬೇಕು’ ಎಂದು ಸಲಹೆ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಸದಸ್ಯ ಪುಟ್ಟರಾಜ್ ಮಾತನಾಡಿ, ‘ಗುಡುಗಳಲೆ ಜಯದೇವ ಜಾನುವಾರು ಜಾತ್ರೆ ಜಿಲ್ಲೆಯಲ್ಲೇ ದೊಡ್ಡದು. ಈ ಪರಂಪರೆ ಮುಂದುವರಿಯಬೇಕು. ವಸ್ತುಪ್ರದರ್ಶನ ಹಳೆಯ ಕಟ್ಟಡ ಕುಸಿಯುವ ಹಂತ ತಲುಪಿದ್ದು ಅದನ್ನು ನೆಲಸಮ ಮಾಡಿ ಹೊಸ ಕಟ್ಟಡ ನಿರ್ಮಿಸಲು ಶ್ರಮಿಸುವುದಾಗಿ’ ಭರವಸೆ ನೀಡಿದರು.</p>.<p>ಕಿರಿಕೊಡ್ಲಿಮಠದ ಸದಾಶಿವ ಸ್ವಾಮೀಜಿ, ಕಲ್ಲುಮಠದ ಮಹಾಂತ ಸ್ವಾಮೀಜಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಸರೋಜಮ್ಮ, ಮಾಜಿ ಸದಸ್ಯ ಡಿ.ಬಿ.ಧರ್ಮಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯ ಕುಶಾಲಪ್ಪ, ಬಿ.ಎಸ್.ಅನಂತಕುಮಾರ್ ಮಾತನಾಡಿದರು.</p>.<p>ಜಾತ್ರೆಯಲ್ಲಿ ಪ್ರದರ್ಶನ ಹಾಗೂ ಉತ್ತಮ ರಾಸುಗಳ ಸ್ಪರ್ಧೆಗೆ ಬಂದಿದ್ದ ರಾಸುಗಳಿಗೆ ಹಾಗೂ ವಸ್ತುಪ್ರದರ್ಶನದಲ್ಲಿ ಮೊದಲ ಮೂರು ಸ್ಥಾನ ಗಳಿಸಿದವರಿಗೆ ಬಹುಮಾನ ವಿತರಿಸಲಾಯಿತು.</p>.<p>ಅಧ್ಯಕ್ಷತೆ ವಹಿಸಿದ್ದ ಜಾತ್ರಾ ಸಮಿತಿ ಅಧ್ಯಕ್ಷ ಶಿವಕುಮಾರ್ ಮಾತನಾಡಿದರು.ಕಾರ್ಯದರ್ಶಿ ಸುಮಂತ್, ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂದೀಪ್, ಉಪಾಧ್ಯಕ್ಷೆ ರೂಪಾ, ಸದಸ್ಯರು, ಪಿಡಿಒ ಸ್ಮಿತಾ, ಶಿಕ್ಷಕ ಗುರುಬಸಪ್ಪ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶನಿವಾರಸಂತೆ:</strong> ‘ಜಾತ್ರಾ ಮಹೋತ್ಸವ ಗ್ರಾಮೀಣ ಪ್ರದೇಶದ ಸಂಸ್ಕೃತಿಯ ಸೊಗಡಾಗಿದ್ದು ಸಂಸ್ಕೃತಿ, ಸಂಪ್ರದಾಯ, ಕಲೆಯನ್ನು ಪ್ರತಿಬಿಂಬಿಸುವಲ್ಲಿ ಯಶಸ್ವಿಯಾಗಿದೆ’ ಎಂದು ತಾಲ್ಲೂಕು ಪಂಚಾಯಿತಿ ಸದಸ್ಯ ಎಂ.ಬಿ.ಅಭಿಮನ್ಯುಕುಮಾರ್ ಅಭಿಪ್ರಾಯಪಟ್ಟರು.</p>.<p>ಸಮೀಪದ ಗುಡುಗಳಲೆ ಜಯದೇವ ಜಾನುವಾರು ಜಾತ್ರಾ ಮಹೋತ್ಸವದ ಮುಕ್ತಾಯ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಗತವೈಭವ ಇಂದಿಲ್ಲ. ರಾಸುಗಳ ಸಂಖ್ಯೆ ಕುಸಿದಿದ್ದರೂ ಜಾತ್ರೆ ಜನಾಕರ್ಷಣೆಯ ಕೇಂದ್ರವಾಗಿ ಉಳಿದಿದೆ. ದೇಸಿ ತಳಿಗಳು ಪವಿತ್ರವೆನಿಸಿದ್ದರೂ ಪಶುಪಾಲನೆ ಕಡಿಮೆಯಾಗಿದೆ. ಸಂಸ್ಕೃತಿಯ ಪ್ರತೀಕವಾದ ಜಾತ್ರಾ ಪರಂಪರೆಯನ್ನು ಯುವಜನಾಂಗ ಉಳಿಸಿ ಬೆಳೆಸಬೇಕು’ ಎಂದು ಸಲಹೆ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಸದಸ್ಯ ಪುಟ್ಟರಾಜ್ ಮಾತನಾಡಿ, ‘ಗುಡುಗಳಲೆ ಜಯದೇವ ಜಾನುವಾರು ಜಾತ್ರೆ ಜಿಲ್ಲೆಯಲ್ಲೇ ದೊಡ್ಡದು. ಈ ಪರಂಪರೆ ಮುಂದುವರಿಯಬೇಕು. ವಸ್ತುಪ್ರದರ್ಶನ ಹಳೆಯ ಕಟ್ಟಡ ಕುಸಿಯುವ ಹಂತ ತಲುಪಿದ್ದು ಅದನ್ನು ನೆಲಸಮ ಮಾಡಿ ಹೊಸ ಕಟ್ಟಡ ನಿರ್ಮಿಸಲು ಶ್ರಮಿಸುವುದಾಗಿ’ ಭರವಸೆ ನೀಡಿದರು.</p>.<p>ಕಿರಿಕೊಡ್ಲಿಮಠದ ಸದಾಶಿವ ಸ್ವಾಮೀಜಿ, ಕಲ್ಲುಮಠದ ಮಹಾಂತ ಸ್ವಾಮೀಜಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಸರೋಜಮ್ಮ, ಮಾಜಿ ಸದಸ್ಯ ಡಿ.ಬಿ.ಧರ್ಮಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯ ಕುಶಾಲಪ್ಪ, ಬಿ.ಎಸ್.ಅನಂತಕುಮಾರ್ ಮಾತನಾಡಿದರು.</p>.<p>ಜಾತ್ರೆಯಲ್ಲಿ ಪ್ರದರ್ಶನ ಹಾಗೂ ಉತ್ತಮ ರಾಸುಗಳ ಸ್ಪರ್ಧೆಗೆ ಬಂದಿದ್ದ ರಾಸುಗಳಿಗೆ ಹಾಗೂ ವಸ್ತುಪ್ರದರ್ಶನದಲ್ಲಿ ಮೊದಲ ಮೂರು ಸ್ಥಾನ ಗಳಿಸಿದವರಿಗೆ ಬಹುಮಾನ ವಿತರಿಸಲಾಯಿತು.</p>.<p>ಅಧ್ಯಕ್ಷತೆ ವಹಿಸಿದ್ದ ಜಾತ್ರಾ ಸಮಿತಿ ಅಧ್ಯಕ್ಷ ಶಿವಕುಮಾರ್ ಮಾತನಾಡಿದರು.ಕಾರ್ಯದರ್ಶಿ ಸುಮಂತ್, ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂದೀಪ್, ಉಪಾಧ್ಯಕ್ಷೆ ರೂಪಾ, ಸದಸ್ಯರು, ಪಿಡಿಒ ಸ್ಮಿತಾ, ಶಿಕ್ಷಕ ಗುರುಬಸಪ್ಪ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>