ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಗೆದ್ದರೆ ಇದೇ ಕೊನೆಯ ಚುನಾವಣೆ; ಡಾ.ಎಚ್.ಸಿ.ಮಹದೇವಪ್ಪ

Published 23 ಏಪ್ರಿಲ್ 2024, 8:23 IST
Last Updated 23 ಏಪ್ರಿಲ್ 2024, 8:23 IST
ಅಕ್ಷರ ಗಾತ್ರ

ಮಡಿಕೇರಿ: ಪ್ರಜಾಪ್ರಭುತ್ವ ನಾಶದ ಅಂಚಿಗೆ ಹೋಗುತ್ತಿದೆ. ಬಿಜೆಪಿ ಗೆದ್ದರೆ ಇದೆ ಕೊನೆಯ ಚುನಾವಣೆಯಾಗಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಖಾತೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.

ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಪರಿಶಿಷ್ಟ ಜಾತಿ ಸಮಾವೇಶದಲ್ಲಿ ಅವರು ಮಾತನಾಡಿದರು.

ಇದು ಅತ್ಯಂತ ಮಹತ್ವದ ಚುನಾವಣೆ. ಪ್ರಜಾಪ್ರಭುತ್ವದ ಅಳಿವು ಉಳಿವಿನ ಚುನಾವಣೆ. ಸಂವಿಧಾನ ಉಳಿಸುವ ಚುನಾವಣೆ ಎಂದು ಅವರು ಹೇಳಿದರು.

ಅಟಲ್ ಬಿಹಾರಿ ವಾಜಪೇಯಿ ಅವರು ಸಂವಿಧಾನ ಪರಾಮರ್ಶೆ ಮಾಡಬೇಕು ಎಂದು ಹೇಳಿದಾಗ ನಾನು, ದೇವನೂರ ಮಹಾದೇವ, ಪ.ಮಲ್ಲೇಶ್ ಹೋರಾಟ ಮಾಡಿ ತಡೆದೆವು. ನಂತರವೂ ಸಂವಿಧಾನದ ಬದಲಾವಣೆ ಮಾತುಗಳನ್ನು ಬಿಜೆಪಿ ನಾಯಕರು ಹೇಳುತ್ತಿದ್ದರು. ಆದರೆ ನಮ್ಮ ಸರ್ಕಾರ ಸಂವಿಧಾನ ಜಾಗೃತಿ ಜಾಥಾ ಮಾಡಿದ ಮೇಲೆ ಆ ಮಾತುಗಳು ಕಡಿಮೆಯಾಗಿವೆ. ಅಷ್ಟರಮಟ್ಟಿಗೆ ನಮ್ಮ‌ ಕಾರ್ಯಕ್ರಮ ಜಾಗೃತಿ ಮೂಡಿಸಿದೆ ಎಂದರು.

ಆದರೆ, ಹಿಂದೂ ರಾಷ್ಟ್ರ ನಿರ್ಮಾಣ ಮಾಡುತ್ತೇವೆ ಎನ್ನುವುದೇ ಸಂವಿಧಾನ ಬದಲಾವಣೆ ಮಾಡುವ ಇಂಗಿತವನ್ನು ವ್ಯಕ್ತಪಡಿಸುತ್ತದೆ. ಸಂವಿಧಾನ ಉಳಿಯದೇ ಹೋದರೆ ನಾವು ಯಾರೂ ಉಳಿಯುವುದಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT