ಚಿತ್ರಗಳಲ್ಲಿ ನೋಡಿ: ಕೊಡಗಿನಲ್ಲಿ ಸುರಿದ ರಾಶಿ ರಾಶಿ ಆಲಿಕಲ್ಲು
ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಶುಕ್ರವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಮಳೆಯಾಗಿದೆ. ಬಿರುಗಾಳಿಗೆ ಬೆಳೆಗಳು ನೆಲಕಚ್ಚಿವೆ. ಶನಿವಾರಸಂತೆ ಹೋಬಳಿ ವ್ಯಾಪ್ತಿಯ ಮುಳ್ಳೂರು, ನಿಡ್ತ, ಅಂಕನಹಳ್ಳಿ, ಗುಡುಗಳಲೆಯಲ್ಲಿ ರಾಶಿ ರಾಶಿ ಆಲಿಕಲ್ಲು ಸುರಿದಿದೆ. ದೊಡ್ಡವರು, ಮಕ್ಕಳು ಎಲ್ಲರು ಬೊಗಸೆಯಲ್ಲಿ ಆಲಿಕಲ್ಲು ಎತ್ತಿ ಸಂಭ್ರಮಿಸಿದರು. ಕಾಫಿ ತೋಟ, ರಸ್ತೆ, ಮನೆಯ ಚಾವಣಿ, ತೆಂಗಿನ ತೋಟ, ಅಡಿಕೆ ತೋಟ ಹಾಗೂ ಬಾಳೆ ತೋಟಗಳಲ್ಲಿ ಅಪಾರ ಪ್ರಮಾಣ ಆಲಿಕಲ್ಲು ಸುರಿದಿದೆ. ಆಲಿಕಲ್ಲು ಮಳೆಯಾಗುತ್ತಿರುವುದು ರೈತರ ಆತಂಕ ಹೆಚ್ಚಿಸಿದೆ.