ಮಂಗಳವಾರ ಬೆಳಿಗ್ಗೆಯಿಂದಲೇ ವಿಶೇಷ ಪೂಜೆಗಳು ನಡೆದವು. ಮಧ್ಯಾಹ್ನ 12ಕ್ಕೆ ಮಹಾಪೂಜೆ ನಡೆದು ಬಳಿಕ ಪ್ರಸಾದ ವಿತರಣೆ ನಡೆಯಿತು. ದೇವಾಲಯದಿಂದ ಮಧ್ಯಾಹ್ನ ಅನ್ನಸಂತರ್ಪಣೆ ಆಯೋಜಿಸಲಾಗಿತ್ತು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿ ಪದಾಧಿಕಾರಿ ಸೇರಿ ಸದಸ್ಯರು, ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದ ಭಕ್ತರು ಉಪಸ್ಥಿತರಿದ್ದರು. ಈ ಸಂದರ್ಭ ವಿನಾಯಕ ಭಜನಾ ಮಂಡಳಿ ಸದಸ್ಯರು ದೇವರ ನಾಮ ಕೀರ್ತನೆಯನ್ನು ಹಾಡಿದರು.