ಕೊಡಗು ಪ್ಯಾಕೇಜ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು₹ 536 ಕೋಟಿ ಘೋಷಿಸಿದ್ದು, ಮೊದಲ ಹಂತದಲ್ಲಿ ₹ 100 ಕೋಟಿ ಬಿಡುಗಡೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
‘ತೋರದಲ್ಲಿ ನಾಲ್ವರ ಮೃತದೇಹ ಪತ್ತೆಯಾಗಿಲ್ಲ. ಅವರ ಕುಟುಂಬಕ್ಕೆ ತಲಾ ₹ 1 ಲಕ್ಷ ವಿತರಿಸಲಾಗಿದೆ. ವಿಶೇಷ ಪ್ರಕರಣವೆಂದು ಪರಿಗಣಿಸಿ ಇನ್ನೂ ಹೆಚ್ಚಿನ ಪರಿಹಾರ ನೀಡಲಾಗುವುದು. ಸದ್ಯದಲ್ಲೇ ಆ ಬಗ್ಗೆ ತೀರ್ಮಾನಿಸಲಾಗುವುದು’ ಎಂದು ಮಾಹಿತಿ ನೀಡಿದರು.