<p><strong>ಮಡಿಕೇರಿ:</strong> ಕಾವೇರಿ ಕಣಿವೆಯ ಪ್ರಮುಖ ಜಲಾಶಯವಾದ ಹಾರಂಗಿಯು ಭರ್ತಿಯಾಗಿದ್ದು, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಶುಕ್ರವಾರ ಬಾಗಿನ ಅರ್ಪಿಸಿದರು.</p>.<p>ಬಳಿಕ ಮಾತನಾಡಿದ ಸೋಮಣ್ಣ, ಪ್ರಕೃತಿಯ ಆಶೀರ್ವಾದದಿಂದ ಎರಡು ವರ್ಷದಿಂದ ಎಲ್ಲ ಜಲಾಶಯಗಳು ಭರ್ತಿಯಾಗುತ್ತಿವೆ. ಎಲ್ಲಿಯೂ ಬರ ಪರಿಸ್ಥಿತಿ ಕಾಣಿಸಿಕೊಂಡಿಲ್ಲ. ಈ ವರ್ಷವೂ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಆದರೆ, ಅತಿವೃಷ್ಟಿಯಿಂದ ಕೆಲವು ಕಡೆ ಜನರಿಗೆ ತೊಂದರೆಯಾಗಿದೆ. ಅದನ್ನು ಸಮರ್ಥವಾಗಿ ನಿಭಾಯಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.</p>.<p>ಸಂಸದ ಪ್ರತಾಪ ಸಿಂಹ, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಎ.ಟಿ.ರಾಮಸ್ವಾಮಿ, ಮಹದೇವ್ ಹಾಗೂ ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹಾಜರಿದ್ದರು.</p>.<p><a href="https://www.prajavani.net/india-news/madhya-pradesh-vidisha-ganj-basoda-insident-village-people-fall-in-to-water-while-rescue-process-of-848609.html" itemprop="url">ಬಾವಿಗೆ ಬಿದ್ದವನ ರಕ್ಷಣಾ ಕಾರ್ಯ ನೋಡುತ್ತಿದ್ದ 30 ಮಂದಿಯೂ ಅದರೊಳಗೆ, ಮೂವರ ಸಾವು! </a></p>.<p>ಜಲಾಶಯದ ಗರಿಷ್ಠ ಮಟ್ಟವು 2,859 ಅಡಿಗಳಾಗಿದ್ದು ಶುಕ್ರವಾರ ಬೆಳಿಗ್ಗೆ 11 ಗಂಟೆಯ ವೇಳೆಗೆ 2,857.07 ಅಡಿಯಷ್ಟು ನೀರು ಸಂಗ್ರಹವಿದೆ. ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರಿದಿದ್ದು ಹಾರಂಗಿಯಿಂದ ನದಿಗೆ 8,000 ಕ್ಯುಸೆಕ್ ನೀರು ಹರಿಸಲಾಗುತ್ತಿದೆ.</p>.<p><a href="https://www.prajavani.net/district/bengaluru-city/kurubarahalli-youth-thrown-stones-on-cars-due-to-his-love-failure-848612.html" itemprop="url">ಬೆಂಗಳೂರು: ಪ್ರೀತಿಸಲ್ಲ ಎಂದ ಯುವತಿ - ಸಿಟ್ಟಾದ ಯುವಕ 7 ಕಾರುಗಳ ಮೇಲೆ ದಾಳಿ! </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಕಾವೇರಿ ಕಣಿವೆಯ ಪ್ರಮುಖ ಜಲಾಶಯವಾದ ಹಾರಂಗಿಯು ಭರ್ತಿಯಾಗಿದ್ದು, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಶುಕ್ರವಾರ ಬಾಗಿನ ಅರ್ಪಿಸಿದರು.</p>.<p>ಬಳಿಕ ಮಾತನಾಡಿದ ಸೋಮಣ್ಣ, ಪ್ರಕೃತಿಯ ಆಶೀರ್ವಾದದಿಂದ ಎರಡು ವರ್ಷದಿಂದ ಎಲ್ಲ ಜಲಾಶಯಗಳು ಭರ್ತಿಯಾಗುತ್ತಿವೆ. ಎಲ್ಲಿಯೂ ಬರ ಪರಿಸ್ಥಿತಿ ಕಾಣಿಸಿಕೊಂಡಿಲ್ಲ. ಈ ವರ್ಷವೂ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಆದರೆ, ಅತಿವೃಷ್ಟಿಯಿಂದ ಕೆಲವು ಕಡೆ ಜನರಿಗೆ ತೊಂದರೆಯಾಗಿದೆ. ಅದನ್ನು ಸಮರ್ಥವಾಗಿ ನಿಭಾಯಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.</p>.<p>ಸಂಸದ ಪ್ರತಾಪ ಸಿಂಹ, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಎ.ಟಿ.ರಾಮಸ್ವಾಮಿ, ಮಹದೇವ್ ಹಾಗೂ ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹಾಜರಿದ್ದರು.</p>.<p><a href="https://www.prajavani.net/india-news/madhya-pradesh-vidisha-ganj-basoda-insident-village-people-fall-in-to-water-while-rescue-process-of-848609.html" itemprop="url">ಬಾವಿಗೆ ಬಿದ್ದವನ ರಕ್ಷಣಾ ಕಾರ್ಯ ನೋಡುತ್ತಿದ್ದ 30 ಮಂದಿಯೂ ಅದರೊಳಗೆ, ಮೂವರ ಸಾವು! </a></p>.<p>ಜಲಾಶಯದ ಗರಿಷ್ಠ ಮಟ್ಟವು 2,859 ಅಡಿಗಳಾಗಿದ್ದು ಶುಕ್ರವಾರ ಬೆಳಿಗ್ಗೆ 11 ಗಂಟೆಯ ವೇಳೆಗೆ 2,857.07 ಅಡಿಯಷ್ಟು ನೀರು ಸಂಗ್ರಹವಿದೆ. ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರಿದಿದ್ದು ಹಾರಂಗಿಯಿಂದ ನದಿಗೆ 8,000 ಕ್ಯುಸೆಕ್ ನೀರು ಹರಿಸಲಾಗುತ್ತಿದೆ.</p>.<p><a href="https://www.prajavani.net/district/bengaluru-city/kurubarahalli-youth-thrown-stones-on-cars-due-to-his-love-failure-848612.html" itemprop="url">ಬೆಂಗಳೂರು: ಪ್ರೀತಿಸಲ್ಲ ಎಂದ ಯುವತಿ - ಸಿಟ್ಟಾದ ಯುವಕ 7 ಕಾರುಗಳ ಮೇಲೆ ದಾಳಿ! </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>