ನಗರದಲ್ಲಿ ಮೊಬೈಲ್ ಹಾಗೂ ಕರೆನ್ಸಿ ಅಂಗಡಿ ನಡೆಸುತ್ತಿದ್ದ ಮಹಮ್ಮದ್ ಮುದಾಸಿರ್ ಎಂಬಾತ ತಮ್ಮ ಮೊಬೈಲ್ಗಳಿಗೆ ಕರೆನ್ಸಿ ಹಾಕಿಸುವ ಯುವತಿಯರ ಹಾಗೂ ಮಹಿಳೆಯ ಮೊಬೈಲ್ ಸಂಖ್ಯೆ ಬರೆದುಕೊಂಡು ಅದಕ್ಕೆ ಅಶ್ಲೀಲ ಸಂದೇಶ ಕಳುಹಿಸಿ, ಕಿರುಕುಳು ನೀಡುತ್ತಿದ್ದ ಎನ್ನಲಾಗಿದೆ. ಎರಡು ದಿನಗಳಿಂದ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ ಎಂದು ಮಹಿಳೆಯೊಬ್ಬರು ಕೊಡಗು ರಕ್ಷಣಾ ವೇದಿಕೆಯ ಸದಸ್ಯರಿಗೆ ಬಳಿ ಅಳಲು ತೋಡಿಕೊಂಡಿದ್ದರು.