<p><strong>ಸುಂಟಿಕೊಪ್ಪ</strong>: ವಿಎಸ್ಎಸ್ಎನ್ ಮುಂಭಾಗದ ರಸ್ತೆಯಲ್ಲಿ ಗುರುವಾರ ಸಿಕ್ಕಿದ ₹ 16 ಸಾವಿರವನ್ನು ವಾರಸುದಾರರಿಗೆ ಹಸ್ತಾಂತರಿಸಿ ಆಶಾ ಕಾರ್ಯಕರ್ತೆ ಮತ್ತು ಕಾಫಿ ಬೆಳೆಗಾರರೊಬ್ಬರು ಪ್ರಾಮಾಣಿಕತೆ ಹಾಗೂ ಮಾನವೀಯತೆಯನ್ನು ಮೆರೆದಿದ್ದಾರೆ.</p>.<p>ಗುರುವಾರ ಬೆಳಿಗ್ಗೆ ₹ 500 ಮುಖಬೆಲೆಯ ಒಟ್ಟು ₹ 16,000 ಕಂಬಿಬಾಣೆಯ ಆಶಾ ಕಾರ್ಯಕರ್ತೆ ವೀಣಾ ಮತ್ತು ಕಾಫಿ ಬೆಳೆಗಾರ ಸತೀಶ್ ಅವರಿಗೆ ಸಿಕ್ಕಿದೆ. ಕೂಡಲೇ ಅವರು ಅದನ್ನು ಸುಂಟಿಕೊಪ್ಪ ಪೊಲೀಸ್ ಠಾಣೆಗೆ ನೀಡಿ ವಾರಸುದಾರರಿಗೆ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.</p>.<p>ಆ ವೇಳೆಗಾಗಲಿ ಸಾಮಾಜಿಕ ಜಾಲ ತಾಣದಲ್ಲಿ ನಗದು ಕಂತು ಬಿದ್ದು ಸಿಕ್ಕಿರುವ ಬಗ್ಗೆ ಪ್ರಚಾರವಾಗಿತ್ತು.</p>.<p>ಸುಂಟಿಕೊಪ್ಪದ ಗಿರಿಯಪ್ಪ ಮನೆ ನಿವಾಸಿ ಯಂಕನ ಕೌಶಿಕ್ ಹಣ ಕಳೆದುಕೊಂಡಿದ್ದರು. ತಮ್ಮ ಹಣದ ಲೆಕ್ಕಾಚಾರ ಮತ್ತು ಸೂಕ್ತ ದಾಖಲಾತಿಯನ್ನು ಪಿಎಸ್ಐ ಎಂ.ಸಿ.ಶ್ರೀಧರ್ ಅವರ ಮುಂದೆ ಹಾಜರುಪಡಿಸಿ ಹಣವನ್ನು ಮರಳಿ ಪಡೆದು ಹಣ ನೀಡಿ ಪ್ರಾಮಾಣಿಕತೆ ಮತ್ತು ಮಾನವೀಯತೆಗೆ ಕೃತಜ್ಞತೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಂಟಿಕೊಪ್ಪ</strong>: ವಿಎಸ್ಎಸ್ಎನ್ ಮುಂಭಾಗದ ರಸ್ತೆಯಲ್ಲಿ ಗುರುವಾರ ಸಿಕ್ಕಿದ ₹ 16 ಸಾವಿರವನ್ನು ವಾರಸುದಾರರಿಗೆ ಹಸ್ತಾಂತರಿಸಿ ಆಶಾ ಕಾರ್ಯಕರ್ತೆ ಮತ್ತು ಕಾಫಿ ಬೆಳೆಗಾರರೊಬ್ಬರು ಪ್ರಾಮಾಣಿಕತೆ ಹಾಗೂ ಮಾನವೀಯತೆಯನ್ನು ಮೆರೆದಿದ್ದಾರೆ.</p>.<p>ಗುರುವಾರ ಬೆಳಿಗ್ಗೆ ₹ 500 ಮುಖಬೆಲೆಯ ಒಟ್ಟು ₹ 16,000 ಕಂಬಿಬಾಣೆಯ ಆಶಾ ಕಾರ್ಯಕರ್ತೆ ವೀಣಾ ಮತ್ತು ಕಾಫಿ ಬೆಳೆಗಾರ ಸತೀಶ್ ಅವರಿಗೆ ಸಿಕ್ಕಿದೆ. ಕೂಡಲೇ ಅವರು ಅದನ್ನು ಸುಂಟಿಕೊಪ್ಪ ಪೊಲೀಸ್ ಠಾಣೆಗೆ ನೀಡಿ ವಾರಸುದಾರರಿಗೆ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.</p>.<p>ಆ ವೇಳೆಗಾಗಲಿ ಸಾಮಾಜಿಕ ಜಾಲ ತಾಣದಲ್ಲಿ ನಗದು ಕಂತು ಬಿದ್ದು ಸಿಕ್ಕಿರುವ ಬಗ್ಗೆ ಪ್ರಚಾರವಾಗಿತ್ತು.</p>.<p>ಸುಂಟಿಕೊಪ್ಪದ ಗಿರಿಯಪ್ಪ ಮನೆ ನಿವಾಸಿ ಯಂಕನ ಕೌಶಿಕ್ ಹಣ ಕಳೆದುಕೊಂಡಿದ್ದರು. ತಮ್ಮ ಹಣದ ಲೆಕ್ಕಾಚಾರ ಮತ್ತು ಸೂಕ್ತ ದಾಖಲಾತಿಯನ್ನು ಪಿಎಸ್ಐ ಎಂ.ಸಿ.ಶ್ರೀಧರ್ ಅವರ ಮುಂದೆ ಹಾಜರುಪಡಿಸಿ ಹಣವನ್ನು ಮರಳಿ ಪಡೆದು ಹಣ ನೀಡಿ ಪ್ರಾಮಾಣಿಕತೆ ಮತ್ತು ಮಾನವೀಯತೆಗೆ ಕೃತಜ್ಞತೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>