<p><strong>ಮಡಿಕೇರಿ:</strong> ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸಾ ಕೇಂದ್ರವು ಸದ್ಯದಲ್ಲೇ ಕಾರ್ಯಾರಂಭ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ ತಿಳಿಸಿದರು.</p>.<p>ಈ ಕುರಿತು ಅವರು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಶುಕ್ರವಾರ ನಡೆಸಿದ ಸಭೆಯಲ್ಲಿ ಖಾಸಗಿ – ಸಾರ್ವಜನಿಕರ ಸಹಭಾಗಿತ್ವದಲ್ಲಿ ಆದಷ್ಟು ಬೇಗ ಈ ಕೇಂದ್ರ ತೆರೆಯುವಂತೆ ಸೂಚಿಸಿದರು.</p>.<p>300 ಹಾಸಿಗೆ ಆಸ್ಪತ್ರೆ ಅರ್ಧಕ್ಕೆ ನಿಂತಿದೆ. ಈಗ 2 ಅಂತಸ್ತುಗಳು ಪೂರ್ಣಗೊಂಡಿವೆ. ಉಳಿದೆರಡು ಅಂತಸ್ತುಗಳು ಪೂರ್ಣಗೊಳ್ಳಲು ಇನ್ನೂ ₹ 55ರಿಂದ 56 ಕೋಟಿ ರೂಪಾಯಿ ಬೇಕಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಇನ್ನೊಮ್ಮೆ ಪರಿಶೀಲಿಸಿ ಪ್ರಸ್ತಾವ ನೀಡಿ. ಹಣಕಾಸು ಇಲಾಖೆಗೆ ಕಳುಹಿಸಿಕೊಡಲಾಗುವುದು ಎಂದರು.</p>.<p>ಇನ್ನು 45 ದಿನಗಳಲ್ಲಿ ಎಂಆರ್ಐ ಸ್ಕ್ಯಾನಿಂಗ್ ಯಂತ್ರ ಕಾರ್ಯನಿರ್ವಹಿಸಬೇಕು. ಅದರ ಉದ್ಘಾಟನೆಗೆ ಬರುತ್ತೇನೆ. ಅಷ್ಟರಲ್ಲಿ ವಿದ್ಯಾರ್ಥಿಗಳು ಪ್ರಸ್ತಾಪಿಸಿದ ಸಮಸ್ಯೆಗಳು ನಿವಾರಣೆಯಾಗಿರಬೇಕು ಎಂದು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸಾ ಕೇಂದ್ರವು ಸದ್ಯದಲ್ಲೇ ಕಾರ್ಯಾರಂಭ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ ತಿಳಿಸಿದರು.</p>.<p>ಈ ಕುರಿತು ಅವರು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಶುಕ್ರವಾರ ನಡೆಸಿದ ಸಭೆಯಲ್ಲಿ ಖಾಸಗಿ – ಸಾರ್ವಜನಿಕರ ಸಹಭಾಗಿತ್ವದಲ್ಲಿ ಆದಷ್ಟು ಬೇಗ ಈ ಕೇಂದ್ರ ತೆರೆಯುವಂತೆ ಸೂಚಿಸಿದರು.</p>.<p>300 ಹಾಸಿಗೆ ಆಸ್ಪತ್ರೆ ಅರ್ಧಕ್ಕೆ ನಿಂತಿದೆ. ಈಗ 2 ಅಂತಸ್ತುಗಳು ಪೂರ್ಣಗೊಂಡಿವೆ. ಉಳಿದೆರಡು ಅಂತಸ್ತುಗಳು ಪೂರ್ಣಗೊಳ್ಳಲು ಇನ್ನೂ ₹ 55ರಿಂದ 56 ಕೋಟಿ ರೂಪಾಯಿ ಬೇಕಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಇನ್ನೊಮ್ಮೆ ಪರಿಶೀಲಿಸಿ ಪ್ರಸ್ತಾವ ನೀಡಿ. ಹಣಕಾಸು ಇಲಾಖೆಗೆ ಕಳುಹಿಸಿಕೊಡಲಾಗುವುದು ಎಂದರು.</p>.<p>ಇನ್ನು 45 ದಿನಗಳಲ್ಲಿ ಎಂಆರ್ಐ ಸ್ಕ್ಯಾನಿಂಗ್ ಯಂತ್ರ ಕಾರ್ಯನಿರ್ವಹಿಸಬೇಕು. ಅದರ ಉದ್ಘಾಟನೆಗೆ ಬರುತ್ತೇನೆ. ಅಷ್ಟರಲ್ಲಿ ವಿದ್ಯಾರ್ಥಿಗಳು ಪ್ರಸ್ತಾಪಿಸಿದ ಸಮಸ್ಯೆಗಳು ನಿವಾರಣೆಯಾಗಿರಬೇಕು ಎಂದು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>