ಮಡಿಕೇರಿ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಕೊಡಗು ಜಿಲ್ಲೆಯ ಗಡಿಗ್ರಾಮ, ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ಕರಿಕೆ ಸಮೀಪ ಗ್ರಾಮಸ್ಥರೇ ನಿರ್ಮಿಸಿಕೊಂಡಿದ್ದ ತೂಗು ಸೇತುವೆಯೊಂದು ಕೊಚ್ಚಿ ಹೋಗುವ ಹಂತ ತಲುಪಿದೆ. ಮಳೆಯು ಬಿರುಸುಗೊಂಡಿದ್ದು ಚಂದ್ರಗಿರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಇದರಿಂದ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಆತಂಕಗೊಂಡಿದ್ದಾರೆ.