ಗಾಳಿಗೆ ಧರೆಗುರುಳಿದ ಕಂಬ: ಗುಹ್ಯ ಗ್ರಾಮದ ಗುಹ್ಯ ಅಗಸ್ತ್ಯೇಶ್ವರ ದೇವಾಲಯದ ಬಳಿ ಗಾಳಿಗೆ ಮರದ ಕೊಂಬೆ ವಿದ್ಯುತ್ ತಂತಿಯ ಮೇಲೆ ಬಿದ್ದ ಪರಿಣಾಮ ಮೂರು ವಿದ್ಯುತ್ ಕಂಬ ತುಂಡಾಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಭಾನುವಾರ ಬೆಳಗ್ಗಿನಿಂದಲೇ ಸೆಸ್ಕ್ ಸಿಬ್ಬಂದಿ ಗ್ರಾಮಸ್ಥರ ಸಹಕಾರದೊಂದಿಗೆ ಕಂಬವನ್ನು ಬದಲಾಯಿಸಿದ್ದಾರೆ. ಕರಡಿಗೋಡು ವ್ಯಾಪ್ತಿಯಲ್ಲೂ ಖಾಸಗಿ ತೋಟದ ಒಳಭಾಗದಲ್ಲಿ ಮರದ ಕೊಂಬೆ ಬಿದ್ದು, ತಂತಿ ತುಂಡಾಗಿದ್ದು, ಮಳೆಯನ್ನೂ ಲೆಕ್ಕಿಸದೇ ಸೆಸ್ಕ್ ಸಿಬ್ಬಂದಿ ವಿದ್ಯುತ್ ಮರು ಸಂಪರ್ಕ ಕಲ್ಪಿಸಿದ್ದಾರೆ.