<p><strong>ಗೋಣಿಕೊಪ್ಪಲು:</strong> ನಾಗರಹೊಳೆ ರಾಷ್ಟ್ರೀಯ ಉದ್ಯಾನ ಸೇರಿದಂತೆ ಬಾಳೆಲೆ, ಕಾರ್ಮಾಡು, ಪೊನ್ನಪ್ಪಸಂತೆ, ಗೋಣಿಕೊಪ್ಪಲು, ಮಾಯಮುಡಿ ಭಾಗಕ್ಕೆ ಭಾನುವಾರ ಬೆಳಗಿನಿಂದಲೇ ಧಾರಾಕಾರ ಮಳೆ ಸುರಿಯಿತು.</p>.<p>ದಟ್ಟ ಮೋಡ ಕವಿದ ವಾತಾವರಣದಲ್ಲಿ ಬೆಳಿಗ್ಗೆ 10 ಗಂಟೆ ವೇಳೆಗೆ ಜಿನುಗು ಮಳೆ ಸುರುವಾಯಿತು. ಬಳಿಕ 11 ಗಂಟೆ ಯಿಂದ 1.30 ರ ತನಕ ಒಂದೇ ಸಮನೆ ರಭಸದ ಮಳೆ ಸುರಿಯಿತು. ಬಾಳೆಲೆ ಭಾಗಗಕ್ಕೆ ಬಿದ್ದ ರಭಸದ ಮಳೆಗೆ ಅಲ್ಲಿನ ವಿಜಯಲಕ್ಷ್ಮಿ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ನಡೆಯುತ್ತಿರುವ ಅರಮಣಮಾಡ ಕೊಡವ ಕೌಟುಂಬಿಕ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯಕ್ಕೆ ಅಡ್ಡಿಯಾಯಿತು.</p>.<p>ಮೈದಾನದ ತುಂಬ ನೀರು ತುಂಬಿ ಹೊಳೆಯಂತೆ ಕಂಡು ಬಂದಿತು. ಫೈನಲ್ ಪಂದ್ಯದ ಉದ್ಘಾಟನಾ ಸಮಾರಂಭ ಮುಗಿದು ಪಂದ್ಯ ಆರಂಭಗೊಳ್ಳಬೇಕು ಎನ್ನುವಷ್ಟರಲ್ಲಿ ಮಳೆ ಶುರುವಾಗಿ ಆಟಗಾರರು ಮೈದಾನಕ್ಕೆ ಇಳಿಯದಂತೆ ಮಾಡಿತು. 2 ಗಂಟೆಗೂ ಹೆಚ್ಚು ಸಮಯ ಒಂದೇ ಸಮನೆ ಬಿದ್ದ ಮಳೆಗೆ ಮೈದಾನದಲ್ಲಿ ನೀರು ತುಂಬಿ ಹರಿಯಿತು. ಇದರಿಂದ ಫೈನಲ್ ಪಂದ್ಯಕ್ಕೆ ಮಾಡಿದ್ದ ಸಿದ್ಧತೆಗಳೆಲ್ಲವೂ ನೀರಿನಲ್ಲಿ ಕೊಚ್ಚಿ ಹೋಯಿತು. ಅದ್ದೂರಿಯಾಗಿ ಸಮಾರೋಪ ಸಮಾರಂಭ ಮಾಡಬೇಕು ಎಂದು ಆಸೆಯಿಟ್ಟುಕೊಂಡಿದ್ದ ಆಯೋಜಕರಿಗೆ ನಿರಾಶೆಯಾಯಿತು.</p>.<p>ಮಧ್ಯಾಹ್ನ 3 ಗಂಟೆ ವೇಳೆಗೆ ಮಳೆ ಸ್ವಲ್ಪ ಬಿಡುವು ನೀಡಿದಾಗ ಮೈದಾನದ ನೀರನ್ನು ಹೊರ ಚೆಲ್ಲಿ ಓವರ್ ಗಳ ಸಂಖ್ಯೆಯನ್ನು ಕಡಿತಗೊಳಿಸಿ ಪಂದ್ಯ ನಡೆಸಲಾಯಿತು.</p>.<p>ನಾಗರಹೊಳೆ ವನ್ಯಜೀವಿ ವಿಭಾಗದ ಆನೆಚೌಕೂರು, ಮತ್ತಿಗೋಡು, ಮಾವಕಲ್, ದೇವಮಚ್ಚಿ ಅರಣ್ಯಭಾಗಕ್ಕೂ ಉತ್ತಮ ಮಳೆ ಬಿದ್ದಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಣಿಕೊಪ್ಪಲು:</strong> ನಾಗರಹೊಳೆ ರಾಷ್ಟ್ರೀಯ ಉದ್ಯಾನ ಸೇರಿದಂತೆ ಬಾಳೆಲೆ, ಕಾರ್ಮಾಡು, ಪೊನ್ನಪ್ಪಸಂತೆ, ಗೋಣಿಕೊಪ್ಪಲು, ಮಾಯಮುಡಿ ಭಾಗಕ್ಕೆ ಭಾನುವಾರ ಬೆಳಗಿನಿಂದಲೇ ಧಾರಾಕಾರ ಮಳೆ ಸುರಿಯಿತು.</p>.<p>ದಟ್ಟ ಮೋಡ ಕವಿದ ವಾತಾವರಣದಲ್ಲಿ ಬೆಳಿಗ್ಗೆ 10 ಗಂಟೆ ವೇಳೆಗೆ ಜಿನುಗು ಮಳೆ ಸುರುವಾಯಿತು. ಬಳಿಕ 11 ಗಂಟೆ ಯಿಂದ 1.30 ರ ತನಕ ಒಂದೇ ಸಮನೆ ರಭಸದ ಮಳೆ ಸುರಿಯಿತು. ಬಾಳೆಲೆ ಭಾಗಗಕ್ಕೆ ಬಿದ್ದ ರಭಸದ ಮಳೆಗೆ ಅಲ್ಲಿನ ವಿಜಯಲಕ್ಷ್ಮಿ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ನಡೆಯುತ್ತಿರುವ ಅರಮಣಮಾಡ ಕೊಡವ ಕೌಟುಂಬಿಕ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯಕ್ಕೆ ಅಡ್ಡಿಯಾಯಿತು.</p>.<p>ಮೈದಾನದ ತುಂಬ ನೀರು ತುಂಬಿ ಹೊಳೆಯಂತೆ ಕಂಡು ಬಂದಿತು. ಫೈನಲ್ ಪಂದ್ಯದ ಉದ್ಘಾಟನಾ ಸಮಾರಂಭ ಮುಗಿದು ಪಂದ್ಯ ಆರಂಭಗೊಳ್ಳಬೇಕು ಎನ್ನುವಷ್ಟರಲ್ಲಿ ಮಳೆ ಶುರುವಾಗಿ ಆಟಗಾರರು ಮೈದಾನಕ್ಕೆ ಇಳಿಯದಂತೆ ಮಾಡಿತು. 2 ಗಂಟೆಗೂ ಹೆಚ್ಚು ಸಮಯ ಒಂದೇ ಸಮನೆ ಬಿದ್ದ ಮಳೆಗೆ ಮೈದಾನದಲ್ಲಿ ನೀರು ತುಂಬಿ ಹರಿಯಿತು. ಇದರಿಂದ ಫೈನಲ್ ಪಂದ್ಯಕ್ಕೆ ಮಾಡಿದ್ದ ಸಿದ್ಧತೆಗಳೆಲ್ಲವೂ ನೀರಿನಲ್ಲಿ ಕೊಚ್ಚಿ ಹೋಯಿತು. ಅದ್ದೂರಿಯಾಗಿ ಸಮಾರೋಪ ಸಮಾರಂಭ ಮಾಡಬೇಕು ಎಂದು ಆಸೆಯಿಟ್ಟುಕೊಂಡಿದ್ದ ಆಯೋಜಕರಿಗೆ ನಿರಾಶೆಯಾಯಿತು.</p>.<p>ಮಧ್ಯಾಹ್ನ 3 ಗಂಟೆ ವೇಳೆಗೆ ಮಳೆ ಸ್ವಲ್ಪ ಬಿಡುವು ನೀಡಿದಾಗ ಮೈದಾನದ ನೀರನ್ನು ಹೊರ ಚೆಲ್ಲಿ ಓವರ್ ಗಳ ಸಂಖ್ಯೆಯನ್ನು ಕಡಿತಗೊಳಿಸಿ ಪಂದ್ಯ ನಡೆಸಲಾಯಿತು.</p>.<p>ನಾಗರಹೊಳೆ ವನ್ಯಜೀವಿ ವಿಭಾಗದ ಆನೆಚೌಕೂರು, ಮತ್ತಿಗೋಡು, ಮಾವಕಲ್, ದೇವಮಚ್ಚಿ ಅರಣ್ಯಭಾಗಕ್ಕೂ ಉತ್ತಮ ಮಳೆ ಬಿದ್ದಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>