ಕುಶಾಲನಗರದ ಕುವೆಂಪು, ಸಾಯಿ ಬಡಾವಣೆ ಜನರನ್ನು ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚಿಸಲಾಗಿದೆ. ಮಡಿಕೇರಿ– ನಾಪೋಕ್ಲು ರಸ್ತೆ ಸಂಪರ್ಕ ಕಡಿತವಾಗಿದೆ. ಭಾಗಮಂಡಲ ಜಲಾವೃತವಾಗಿದ್ದು, ಭಾಗಮಂಡಲ– ಅಯ್ಯಂಗೇರಿ ರಸ್ತೆ ಸಂಚಾರವೂ ಬಂದ್ ಆಗಿದೆ.
ಗಾಳಿಯ ಅಬ್ಬರಕ್ಕೆ ಕಾಫಿ ತೋಟ, ಹೆದ್ದಾರಿ, ಗ್ರಾಮೀಣ ರಸ್ತೆಯಲ್ಲಿ ಎಲ್ಲೆಂದರಲ್ಲಿ ಮರಗಳು ಉರುಳಿವೆ. ವಿದ್ಯುತ್ ಕಂಬಗಳು ಬಿದ್ದಿದ್ದು ಹಲವು ಗ್ರಾಮಗಳಿಗೆ ವಿದ್ಯುತ್ ಪೂರೈಕೆ ಸ್ಥಗಿತವಾಗಿದ್ದು ಕತ್ತಲೆಯಲ್ಲಿ ಮುಳುಗಿವೆ.