<p><strong>ಮೈಸೂರು</strong>: ಮೈಸೂರು ಭಾಗದ ಕೊಡಗು ಹಾಗೂ ಹಾಸನ ಜಿಲ್ಲೆಯಲ್ಲಿ ಶನಿವಾರ ಭಾರಿ ಮಳೆ ಸುರಿದಿದೆ. ಮೈಸೂರು, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಿದೆ.</p>.<p>ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ವಾಲ್ನೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 7 ಸೆಂ.ಮೀ, ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ 6.8 ಸೆಂ.ಮೀ, ಹೊಳೆನರಸೀಪುರದಲ್ಲಿ 6.1 ಸೆಂ.ಮೀ, ನುಗ್ಗೇಹಳ್ಳಿಯಲ್ಲಿ 5.2 ಸೆಂ.ಮೀ, ಶ್ರವಣಬೆಳಗೊಳದಲ್ಲಿ 5 ಸೆಂ.ಮೀ ಹಾಗೂ ಕೇರಳ ಗಡಿ ಭಾಗ ಕುಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 4 ಸೆಂ.ಮೀ ಮಳೆಯಾಗಿದೆ.</p>.<p>ಮಡಿಕೇರಿ ನಗರದಲ್ಲಿ ಎರಡೂವರೆ ಗಂಟೆ ನಿರಂತರವಾಗಿ ಮಳೆ ಸುರಿಯಿತು. ಪೊನ್ನಂಪೇಟೆ ಸೇರಿದಂತೆ ತಾಲ್ಲೂಕಿನ ಕಿರುಗೂರು, ಮತ್ತೂರು, ನಲ್ಲೂರು ಕುಂದ ಭಾಗಗಳಲ್ಲೂ ಮಳೆ ಬಿರುಸಿನಿಂದ ಸುರಿದಿದೆ.</p>.<p>ಹಾಸನ ಜಿಲ್ಲೆಯ ವಿವಿಧೆಡೆ ಶನಿವಾರ ಮಧ್ಯಾಹ್ನ ಉತ್ತಮ ಮಳೆಯಾಗಿದ್ದು, ಹಾಸನ ನಗರ, ಅರಸೀಕೆರೆ, ಚನ್ನರಾಯಪಟ್ಟಣ, ಸಕಲೇಶಪುರ, ಬೇಲೂರಿನಲ್ಲಿ ಶುಕ್ರವಾರ ಸಂಜೆಯೂ ಮಳೆಯಾಗಿದ್ದು, ಕೃಷಿ ಚಟುವಟಿಕೆಗೆ ಪೂರಕ ವಾತಾವರಣ ನಿರ್ಮಾಣವಾಗಿದೆ.</p>.<p>ಚಾಮರಾಜನಗರ ಜಿಲ್ಲಾ ಕೇಂದ್ರ, ಆಲೂರು, ಕೂಡ್ಲೂರು, ಮಾದಾಪುರ, ಹರದನಹಳ್ಳಿ, ಸಂತೇಮರಹಳ್ಳಿ ಹೋಬಳಿ, ಯಳಂದೂರು ತಾಲ್ಲೂಕು ಹಾಗೂ ಮೈಸೂರು ಸುತ್ತಮುತ್ತ ಸಾಧಾರಣ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಮೈಸೂರು ಭಾಗದ ಕೊಡಗು ಹಾಗೂ ಹಾಸನ ಜಿಲ್ಲೆಯಲ್ಲಿ ಶನಿವಾರ ಭಾರಿ ಮಳೆ ಸುರಿದಿದೆ. ಮೈಸೂರು, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಿದೆ.</p>.<p>ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ವಾಲ್ನೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 7 ಸೆಂ.ಮೀ, ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ 6.8 ಸೆಂ.ಮೀ, ಹೊಳೆನರಸೀಪುರದಲ್ಲಿ 6.1 ಸೆಂ.ಮೀ, ನುಗ್ಗೇಹಳ್ಳಿಯಲ್ಲಿ 5.2 ಸೆಂ.ಮೀ, ಶ್ರವಣಬೆಳಗೊಳದಲ್ಲಿ 5 ಸೆಂ.ಮೀ ಹಾಗೂ ಕೇರಳ ಗಡಿ ಭಾಗ ಕುಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 4 ಸೆಂ.ಮೀ ಮಳೆಯಾಗಿದೆ.</p>.<p>ಮಡಿಕೇರಿ ನಗರದಲ್ಲಿ ಎರಡೂವರೆ ಗಂಟೆ ನಿರಂತರವಾಗಿ ಮಳೆ ಸುರಿಯಿತು. ಪೊನ್ನಂಪೇಟೆ ಸೇರಿದಂತೆ ತಾಲ್ಲೂಕಿನ ಕಿರುಗೂರು, ಮತ್ತೂರು, ನಲ್ಲೂರು ಕುಂದ ಭಾಗಗಳಲ್ಲೂ ಮಳೆ ಬಿರುಸಿನಿಂದ ಸುರಿದಿದೆ.</p>.<p>ಹಾಸನ ಜಿಲ್ಲೆಯ ವಿವಿಧೆಡೆ ಶನಿವಾರ ಮಧ್ಯಾಹ್ನ ಉತ್ತಮ ಮಳೆಯಾಗಿದ್ದು, ಹಾಸನ ನಗರ, ಅರಸೀಕೆರೆ, ಚನ್ನರಾಯಪಟ್ಟಣ, ಸಕಲೇಶಪುರ, ಬೇಲೂರಿನಲ್ಲಿ ಶುಕ್ರವಾರ ಸಂಜೆಯೂ ಮಳೆಯಾಗಿದ್ದು, ಕೃಷಿ ಚಟುವಟಿಕೆಗೆ ಪೂರಕ ವಾತಾವರಣ ನಿರ್ಮಾಣವಾಗಿದೆ.</p>.<p>ಚಾಮರಾಜನಗರ ಜಿಲ್ಲಾ ಕೇಂದ್ರ, ಆಲೂರು, ಕೂಡ್ಲೂರು, ಮಾದಾಪುರ, ಹರದನಹಳ್ಳಿ, ಸಂತೇಮರಹಳ್ಳಿ ಹೋಬಳಿ, ಯಳಂದೂರು ತಾಲ್ಲೂಕು ಹಾಗೂ ಮೈಸೂರು ಸುತ್ತಮುತ್ತ ಸಾಧಾರಣ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>