<p><strong>ನಾಪೋಕ್ಲು</strong>: ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ಗ್ರಾಮೀಣ ಜನರನ್ನು ಹೈರಾಣಾಗಿಸಿದೆ. ತಲಕಾವೇರಿ ವ್ಯಾಪ್ತಿಯಲ್ಲಿ ಬಿರುಸಿನ ಮಳೆಯಾಗಿದೆ. 24 ಗಂಟೆಗಳಲ್ಲಿ 125 ಸೆ.ಮೀ ದಾಖಲೆ ಮಳೆಯಾಗಿದೆ.</p>.<p>ಬಿರುಸಿನ ಮಳೆಯಿಂದಾಗಿ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಮಳೆಯೊಂದಿಗೆ ಗಾಳಿಯು ಬೀಸುತ್ತಿದೆ. ಚಳಿಯೂ ಕಾಡುತ್ತಿದ್ದು ಜನಜೀವನ ಅಸ್ತವ್ಯಸ್ತ ಗೊಂಡಿದೆ. ಗಾಳಿಯಿಂದಾಗಿ ಅಲ್ಲಲ್ಲಿ ಮರದ ರೆಂಬೆಗಳು ಮುರಿದುಬಿದ್ದಿದ್ದು ಎರಡು ದಿನಗಳಿಂದ ಭಾಗಮಂಡಲ ಮತ್ತುನಾಪೋಕ್ಲು ಹೋಬಳಿಯಲ್ಲಿ ವಿದ್ಯುತ್ ಸಮಸ್ಯೆ ಎದುರಾಗಿದೆ..</p>.<p>ಇದೇ ರೀತಿ ಮಳೆ ಮುಂದುವರಿದರೆ, ಭಾಗಮಂಡಲ, ನಾಪೋಕ್ಲು ಭಾಗದಲ್ಲಿ, ಜಿಲ್ಲೆಯ ಇತರಡೆ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗುವ ಸಂಭವವಿದೆ.</p>.<p>ಮಳೆ-ಗಾಳಿಯಿಂದಾಗಿ ಕಾಫಿಯ ತೋಟಗಳಲ್ಲಿ ಕೆಲಸ ಮಾಡಲು ಕಾರ್ಮಿಕರು ಹಿಂದೇಟು ಹಾಕುತಿದ್ದು ಕೃಷಿಚಟುವಟಿಕೆಗಳು ಸ್ಥಗಿತಗೊಂಡಿವೆ. ನದಿ ತೊರೆಗಳಲ್ಲಿ ಹೆಚ್ಚಿನ ಪ್ರಮಾಣದ ನೀರು ಹರಿಯುತ್ತಿದೆ. ತಲಕಾವೇರಿಯಲ್ಲಿ ಇದುವರೆಗೆ 52.5 ಸೆ.ಮೀ ಮಳೆಯಾಗಿದೆ. ಭಾಗಮಂಡಲ ವ್ಯಾಪ್ತಿಯಲ್ಲಿ 44.8 ಸೆ.ಮೀ ಮಳೆಯಾಗಿದೆ. </p>.<p>ವರ್ಷ ತಾಪಮಾನ ಏರಿಕೆಯಿಂದಾಗಿ ಕಾಫಿ ಇಳುವರಿಯಲ್ಲಿ ಕುಸಿತ ಕಂಡಿದ್ದು ಈ ಬಾರಿ ಬೇಸಿಗೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು ಕಾಫಿ ಮಿಡಿ ಕಚ್ಚುವ ಈ ಹಂತದಲ್ಲಿ ಕೊಳೆ ರೋಗ ಕಾಣಿಸಿಕೊಂಡಿದೆ ಎಂದು ಬೆಳೆಗಾರರು ಆತಂಕ ವ್ಯಕ್ತಪಡಿಸಿದ್ದಾರೆ.ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಭಾನುವಾರವೂ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಪೋಕ್ಲು</strong>: ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ಗ್ರಾಮೀಣ ಜನರನ್ನು ಹೈರಾಣಾಗಿಸಿದೆ. ತಲಕಾವೇರಿ ವ್ಯಾಪ್ತಿಯಲ್ಲಿ ಬಿರುಸಿನ ಮಳೆಯಾಗಿದೆ. 24 ಗಂಟೆಗಳಲ್ಲಿ 125 ಸೆ.ಮೀ ದಾಖಲೆ ಮಳೆಯಾಗಿದೆ.</p>.<p>ಬಿರುಸಿನ ಮಳೆಯಿಂದಾಗಿ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಮಳೆಯೊಂದಿಗೆ ಗಾಳಿಯು ಬೀಸುತ್ತಿದೆ. ಚಳಿಯೂ ಕಾಡುತ್ತಿದ್ದು ಜನಜೀವನ ಅಸ್ತವ್ಯಸ್ತ ಗೊಂಡಿದೆ. ಗಾಳಿಯಿಂದಾಗಿ ಅಲ್ಲಲ್ಲಿ ಮರದ ರೆಂಬೆಗಳು ಮುರಿದುಬಿದ್ದಿದ್ದು ಎರಡು ದಿನಗಳಿಂದ ಭಾಗಮಂಡಲ ಮತ್ತುನಾಪೋಕ್ಲು ಹೋಬಳಿಯಲ್ಲಿ ವಿದ್ಯುತ್ ಸಮಸ್ಯೆ ಎದುರಾಗಿದೆ..</p>.<p>ಇದೇ ರೀತಿ ಮಳೆ ಮುಂದುವರಿದರೆ, ಭಾಗಮಂಡಲ, ನಾಪೋಕ್ಲು ಭಾಗದಲ್ಲಿ, ಜಿಲ್ಲೆಯ ಇತರಡೆ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗುವ ಸಂಭವವಿದೆ.</p>.<p>ಮಳೆ-ಗಾಳಿಯಿಂದಾಗಿ ಕಾಫಿಯ ತೋಟಗಳಲ್ಲಿ ಕೆಲಸ ಮಾಡಲು ಕಾರ್ಮಿಕರು ಹಿಂದೇಟು ಹಾಕುತಿದ್ದು ಕೃಷಿಚಟುವಟಿಕೆಗಳು ಸ್ಥಗಿತಗೊಂಡಿವೆ. ನದಿ ತೊರೆಗಳಲ್ಲಿ ಹೆಚ್ಚಿನ ಪ್ರಮಾಣದ ನೀರು ಹರಿಯುತ್ತಿದೆ. ತಲಕಾವೇರಿಯಲ್ಲಿ ಇದುವರೆಗೆ 52.5 ಸೆ.ಮೀ ಮಳೆಯಾಗಿದೆ. ಭಾಗಮಂಡಲ ವ್ಯಾಪ್ತಿಯಲ್ಲಿ 44.8 ಸೆ.ಮೀ ಮಳೆಯಾಗಿದೆ. </p>.<p>ವರ್ಷ ತಾಪಮಾನ ಏರಿಕೆಯಿಂದಾಗಿ ಕಾಫಿ ಇಳುವರಿಯಲ್ಲಿ ಕುಸಿತ ಕಂಡಿದ್ದು ಈ ಬಾರಿ ಬೇಸಿಗೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು ಕಾಫಿ ಮಿಡಿ ಕಚ್ಚುವ ಈ ಹಂತದಲ್ಲಿ ಕೊಳೆ ರೋಗ ಕಾಣಿಸಿಕೊಂಡಿದೆ ಎಂದು ಬೆಳೆಗಾರರು ಆತಂಕ ವ್ಯಕ್ತಪಡಿಸಿದ್ದಾರೆ.ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಭಾನುವಾರವೂ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>