<p><strong>ಮಡಿಕೇರಿ/ ಉಡುಪಿ:</strong> ರಾಜ್ಯದ ವಿವಿಧೆಡೆ ಮಂಗಳವಾರ ಮಳೆಯಾಗಿದೆ. ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಸುತ್ತಲಿನ ನೆಲಜಿ, ಎಮ್ಮೆಮಾಡು, ಬಲ್ಲಮಾವಟಿ ಗ್ರಾಮಗಳಲ್ಲಿ ಮಂಗಳವಾರ ಮಧ್ಯಾಹ್ನ ಒಂದು ಗಂಟೆ ಕಾಲ ಗುಡುಗು ಸಹಿತ ಸತತ ಮಳೆಯಾಯಿತು. ಮಡಿಕೇರಿ ನಗರದಲ್ಲಿ ಮೋಡ ಕವಿದ ವಾತಾವರಣವಿತ್ತು.</p>.<p>ಉಡುಪಿ ಜಿಲ್ಲೆಯ ವಿವಿಧೆಡೆ ಮಂಗಳವಾರ ಸಂಜೆ ಮಳೆ ಸುರಿದಿದ್ದು, ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಅಲ್ಪ ನೆಮ್ಮದಿ ನೀಡಿತು.</p>.<p>ಕಾರ್ಕಳ, ಹೆಬ್ರಿ, ಬ್ರಹ್ಮಾವರ ಮೊದಲಾದೆಡೆ ಗಾಳಿ ಸಹಿತ ಮಳೆ ಸುರಿಯಿತು. ಬ್ರಹ್ಮಾವರ ತಾಲ್ಲೂಕಿನ ಬಾರ್ಕೂರು, ಹಂದಾಡಿ, ಮಂದಾರ್ತಿ, ಪರಿಸರದಲ್ಲಿ ಅರ್ಧ ಗಂಟೆ ಗಾಳಿ, ಸಿಡಿಲಿನೊಂದಿಗೆ ಬೇಸಿಗೆಯ ಮೊದಲ ಧಾರಾಕಾರ ಮಳೆ ಸುರಿಯಿತು.</p>.<p>ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಹಲವೆಡೆ ಧಾರಾಕಾರ ಮಳೆಯಾಗಿದೆ. ಮೂಡಿಗೆರೆ ತಾಲ್ಲೂಕಿನ ವಿವಿಧೆಡೆ ಮಧ್ಯಾಹ್ನ 2 ಗಂಟೆಗೆ ಪ್ರಾರಂಭವಾದ ಮಳೆ, ಗುಡುಗು ಸಿಡಿಲಿನೊಂದಿಗೆ ಒಂದು ಗಂಟೆಗೂ ಹೆಚ್ಚು ಕಾಲ ಆರ್ಭಟಿಸಿತು. ಕೊಪ್ಪ ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಮಳೆಯಾಗಿದೆ. ಶೃಂಗೇರಿ ಪಟ್ಟಣ ಮತ್ತು ಸುತ್ತಮುತ್ತ ಗುಡುಗು, ಸಿಡಿಲು ಮತ್ತು ಆಲಿಕಲ್ಲಿನೊಂದಿಗೆ ಉತ್ತಮವಾಗಿ ಮಳೆ ಸುರಿಯಿತು.</p>.<p>ಹುಬ್ಬಳ್ಳಿ ವರದಿ: ಉತ್ತರ ಕನ್ನಡ, ವಿಜಯನಗರ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆ ಸೇರಿದಂತೆ ಹಲವೆಡೆ ಮಳೆಯಾಯಿತು.</p>.<p>ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಮಳಲಗಾಂವದಲ್ಲಿ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದು ನಾಲ್ಕಕ್ಕೂ ಹೆಚ್ಚು ಕಂಬಗಳು ಧರೆಗುರುಳಿದ್ದವು. ಯಲ್ಲಾಪುರ, ಸಿದ್ದಾಪುರ, ದಾಂಡೇಲಿ, ಹಳಿಯಾಳ ಭಾಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಯಿತು.</p>.<p>ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಹಿರೇಹಡಗಲಿ ಸುತ್ತಮುತ್ತಲ ಗ್ರಾಮಗಳಲ್ಲಿ ಮಧ್ಯಾಹ್ನ ಅರ್ಧ ಗಂಟೆ ಗುಡುಗು ಸಹಿತ ಮಳೆಯಾಯಿತು. ಕತ್ತೆಬೆನ್ನೂರು, ಗಿರಿಯಾಪುರ ಮಠ, ದಾಸನಹಳ್ಳಿ, ಬೂದನೂರು ಸುತ್ತಮುತ್ತ ಮಳೆ ಸುರಿಯಿತು. </p>.<p>ಧಾರವಾಡ ಜಿಲ್ಲೆಯ ವಿವಿಧೆಡೆ ಗುಡುಗು, ಮಿಂಚಿನ ಆರ್ಭಟದೊಂದಿಗೆ ಮಳೆಯಾಗಿದ್ದು ಗಾಳಿ ರಭಸಕ್ಕೆ ನಗರದಲ್ಲಿ ಎರಡು ಮರಗಳು ಉರುಳಿ ಬಿದ್ದಿವೆ. ಅಳ್ನಾವರ, ಕುಂದಗೋಳ, ಅಣ್ಣಿಗೇರಿ, ಕಲಘಟಗಿ ಭಾಗದಲ್ಲಿಯೂ ಮಳೆಯಾಗಿದೆ. </p>.<p>ಗದಗ ನಗರ ಸೇರಿ ಜಿಲ್ಲೆಯ ಬೆಟಗೇರಿ, ಲಕ್ಷ್ಮೇಶ್ವರ ಮತ್ತು ವಿವಿಧೆಡೆ ರಭಸದ ಮಳೆ ಸುರಿಯಿತು. ಲಕ್ಷ್ಮೇಶ್ವರದ ಎಪಿಎಂಸಿಗೆ ಮಾರಲು ತಂದಿದ್ದ ಶೇಂಗಾ ಚೀಲಗಳನ್ನು ಮುಚ್ಚಲು ರೈತರು ಪರದಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ/ ಉಡುಪಿ:</strong> ರಾಜ್ಯದ ವಿವಿಧೆಡೆ ಮಂಗಳವಾರ ಮಳೆಯಾಗಿದೆ. ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಸುತ್ತಲಿನ ನೆಲಜಿ, ಎಮ್ಮೆಮಾಡು, ಬಲ್ಲಮಾವಟಿ ಗ್ರಾಮಗಳಲ್ಲಿ ಮಂಗಳವಾರ ಮಧ್ಯಾಹ್ನ ಒಂದು ಗಂಟೆ ಕಾಲ ಗುಡುಗು ಸಹಿತ ಸತತ ಮಳೆಯಾಯಿತು. ಮಡಿಕೇರಿ ನಗರದಲ್ಲಿ ಮೋಡ ಕವಿದ ವಾತಾವರಣವಿತ್ತು.</p>.<p>ಉಡುಪಿ ಜಿಲ್ಲೆಯ ವಿವಿಧೆಡೆ ಮಂಗಳವಾರ ಸಂಜೆ ಮಳೆ ಸುರಿದಿದ್ದು, ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಅಲ್ಪ ನೆಮ್ಮದಿ ನೀಡಿತು.</p>.<p>ಕಾರ್ಕಳ, ಹೆಬ್ರಿ, ಬ್ರಹ್ಮಾವರ ಮೊದಲಾದೆಡೆ ಗಾಳಿ ಸಹಿತ ಮಳೆ ಸುರಿಯಿತು. ಬ್ರಹ್ಮಾವರ ತಾಲ್ಲೂಕಿನ ಬಾರ್ಕೂರು, ಹಂದಾಡಿ, ಮಂದಾರ್ತಿ, ಪರಿಸರದಲ್ಲಿ ಅರ್ಧ ಗಂಟೆ ಗಾಳಿ, ಸಿಡಿಲಿನೊಂದಿಗೆ ಬೇಸಿಗೆಯ ಮೊದಲ ಧಾರಾಕಾರ ಮಳೆ ಸುರಿಯಿತು.</p>.<p>ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಹಲವೆಡೆ ಧಾರಾಕಾರ ಮಳೆಯಾಗಿದೆ. ಮೂಡಿಗೆರೆ ತಾಲ್ಲೂಕಿನ ವಿವಿಧೆಡೆ ಮಧ್ಯಾಹ್ನ 2 ಗಂಟೆಗೆ ಪ್ರಾರಂಭವಾದ ಮಳೆ, ಗುಡುಗು ಸಿಡಿಲಿನೊಂದಿಗೆ ಒಂದು ಗಂಟೆಗೂ ಹೆಚ್ಚು ಕಾಲ ಆರ್ಭಟಿಸಿತು. ಕೊಪ್ಪ ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಮಳೆಯಾಗಿದೆ. ಶೃಂಗೇರಿ ಪಟ್ಟಣ ಮತ್ತು ಸುತ್ತಮುತ್ತ ಗುಡುಗು, ಸಿಡಿಲು ಮತ್ತು ಆಲಿಕಲ್ಲಿನೊಂದಿಗೆ ಉತ್ತಮವಾಗಿ ಮಳೆ ಸುರಿಯಿತು.</p>.<p>ಹುಬ್ಬಳ್ಳಿ ವರದಿ: ಉತ್ತರ ಕನ್ನಡ, ವಿಜಯನಗರ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆ ಸೇರಿದಂತೆ ಹಲವೆಡೆ ಮಳೆಯಾಯಿತು.</p>.<p>ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಮಳಲಗಾಂವದಲ್ಲಿ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದು ನಾಲ್ಕಕ್ಕೂ ಹೆಚ್ಚು ಕಂಬಗಳು ಧರೆಗುರುಳಿದ್ದವು. ಯಲ್ಲಾಪುರ, ಸಿದ್ದಾಪುರ, ದಾಂಡೇಲಿ, ಹಳಿಯಾಳ ಭಾಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಯಿತು.</p>.<p>ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಹಿರೇಹಡಗಲಿ ಸುತ್ತಮುತ್ತಲ ಗ್ರಾಮಗಳಲ್ಲಿ ಮಧ್ಯಾಹ್ನ ಅರ್ಧ ಗಂಟೆ ಗುಡುಗು ಸಹಿತ ಮಳೆಯಾಯಿತು. ಕತ್ತೆಬೆನ್ನೂರು, ಗಿರಿಯಾಪುರ ಮಠ, ದಾಸನಹಳ್ಳಿ, ಬೂದನೂರು ಸುತ್ತಮುತ್ತ ಮಳೆ ಸುರಿಯಿತು. </p>.<p>ಧಾರವಾಡ ಜಿಲ್ಲೆಯ ವಿವಿಧೆಡೆ ಗುಡುಗು, ಮಿಂಚಿನ ಆರ್ಭಟದೊಂದಿಗೆ ಮಳೆಯಾಗಿದ್ದು ಗಾಳಿ ರಭಸಕ್ಕೆ ನಗರದಲ್ಲಿ ಎರಡು ಮರಗಳು ಉರುಳಿ ಬಿದ್ದಿವೆ. ಅಳ್ನಾವರ, ಕುಂದಗೋಳ, ಅಣ್ಣಿಗೇರಿ, ಕಲಘಟಗಿ ಭಾಗದಲ್ಲಿಯೂ ಮಳೆಯಾಗಿದೆ. </p>.<p>ಗದಗ ನಗರ ಸೇರಿ ಜಿಲ್ಲೆಯ ಬೆಟಗೇರಿ, ಲಕ್ಷ್ಮೇಶ್ವರ ಮತ್ತು ವಿವಿಧೆಡೆ ರಭಸದ ಮಳೆ ಸುರಿಯಿತು. ಲಕ್ಷ್ಮೇಶ್ವರದ ಎಪಿಎಂಸಿಗೆ ಮಾರಲು ತಂದಿದ್ದ ಶೇಂಗಾ ಚೀಲಗಳನ್ನು ಮುಚ್ಚಲು ರೈತರು ಪರದಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>