ಬುಧವಾರ ಸಂಜೆ ಇಲ್ಲಿಗೆ ಬಂದ ಅವರು, ಹಾರಂಗಿ ಜಲಾಶಯದಿಂದ ನೀರು ಬಿಡುಗಡೆ ಮಾಡುತ್ತಿರುವ ಪ್ರಮಾಣ, ಒಳಹರಿವುಗಳ ಅಂಕಿಅಂಶಗಳನ್ನು ಜಲಾಶಯದ ಕಾರ್ಯಪಾಲಕ ಎಂಜಿನಿಯರ್ ಪುಟ್ಟಸ್ವಾಮಿ ಅವರಿಂದ ಪಡೆದರು. ಒಂದು ವೇಳೆ ನೀರಿನ ಹರಿವು ಇನ್ನಷ್ಟು ಹೆಚ್ಚಾದರೆ ಉದ್ಭವಿಸಬಹುದಾದ ಪರಿಸ್ಥಿತಿ ಕುರಿತು ಅಧಿಕಾರಿಗಳ ಜತೆ ಚರ್ಚಿಸಿದರು. ಬಳಿಕ ಅವರು ಇಲ್ಲಿ ಜಿಲ್ಲಾಡಳಿತ ತೆಗೆದುಕೊಂಡಿರುವ ಕ್ರಮಗಳ ಕುರಿತು ಸಭೆ ನಡೆಸಲಿದ್ದಾರೆ.