<p><strong>ಸೋಮವಾರಪೇಟೆ:</strong> ಪಟ್ಟಣ ಸೇರಿದಂತೆ ತಾಲ್ಲೂಕಿನ ಹಲವೆಡೆ ಮಂಗಳವಾರ ಮಧ್ಯಾಹ್ನ ಭಾರಿ ಮಳೆಯಾಯಿತು.</p>.<p>ಬೆಳಿಗ್ಗೆಯಿಂದಲೂ ಬಿಸಿಲಿನ ವಾತಾವರಣ ಇದ್ದು, ಮಧ್ಯಾಹ್ನದ ನಂತರ ಏಕಾಏಕಿ ಪ್ರಾರಂಭವಾದ ಒಂದು ಗಂಟೆಗೂ ಹೆಚ್ಚಿನ ಸಮಯ ಸುರಿಯಿತು. ರಸ್ತೆಯ ಮೇಲೆ ನೀರಿನ ಹರಿವು ಹೆಚ್ಚಾಗಿದ್ದರೆ, ಪಟ್ಟಣದ ಕೆಲವು ಚರಂಡಿಗಳು ತುಂಬಿ ಹರಿಯುತ್ತಿದ್ದದ್ದು ಕಂಡುಬಂದಿತು. ಭಾರಿ ಮಳೆಗೆ ಜನರು ಪರದಾಡಿದರು.</p>.<p>ಇಂದಿಗೂ ಪಟ್ಟಣದಲ್ಲಿ ಚರಂಡಿ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಿಕೊಳ್ಳದ ಕಾರಣ ಸಮಸ್ಯೆಯಾಗಿದೆ. ಇಲ್ಲಿನ ತಾಲ್ಲೂಕು ಕಚೇರಿ ಎದುರು ಮಳೆ ನೀರು ಹರಿಯಲು ಸರಿಯಾದ ವ್ಯವಸ್ಥೆ ಇಲ್ಲದಿರುವುದರಿಂದ ಭಾರಿ ಮಳೆಗೆ ತಾಲ್ಲೂಕು ಕಚೇರಿ ಎದುರು ಕೆರೆಯಾಂತಾಗಿತ್ತು.</p>.<p>ಆಲೆಕಟ್ಟೆ ರಸ್ತೆಯ ಚಂಗಪ್ಪ ಎಂಬುವವರ ಮನೆಯಲ್ಲಿ ಬಾಡಿಗೆ ಇರುವ ನಿಂಗರಾಜು ಎಂಬುವವರ ಮನೆಗೆ ಮಳೆಯ ನೀರು ನುಗ್ಗಿ ಹಾನಿಯಾಗಿದೆ. ಇಲ್ಲಿನ ಚರಂಡಿ ವ್ಯವಸ್ಥೆ ಸರಿ ಇಲ್ಲದ ಕಾರಣ ಭಾರಿ ಮಳೆಯಿಂದ ಪಟ್ಟಣದಿಂದ ಈ ಭಾಗದಲ್ಲಿ ಹರಿಯುವ ನೀರು ಮನೆಗೆ ನುಗ್ಗಿರುವುದಾಗಿ ದೂರಿದ್ದಾರೆ. ಮಳೆಯ ನೀರಿನಿಂದ ಮನೆಯೊಳಗೆ ಇರಿಸಿದ್ದ ದಿನಸಿ ಸಾಮಾಗ್ರಿಗಳು ಸೇರಿದಂತೆ ನಷ್ಟವಾಗಿದೆ ಎಂದು ಮನೆಯ ನಿವಾಸಿ ನಿಂಗರಾಜು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ:</strong> ಪಟ್ಟಣ ಸೇರಿದಂತೆ ತಾಲ್ಲೂಕಿನ ಹಲವೆಡೆ ಮಂಗಳವಾರ ಮಧ್ಯಾಹ್ನ ಭಾರಿ ಮಳೆಯಾಯಿತು.</p>.<p>ಬೆಳಿಗ್ಗೆಯಿಂದಲೂ ಬಿಸಿಲಿನ ವಾತಾವರಣ ಇದ್ದು, ಮಧ್ಯಾಹ್ನದ ನಂತರ ಏಕಾಏಕಿ ಪ್ರಾರಂಭವಾದ ಒಂದು ಗಂಟೆಗೂ ಹೆಚ್ಚಿನ ಸಮಯ ಸುರಿಯಿತು. ರಸ್ತೆಯ ಮೇಲೆ ನೀರಿನ ಹರಿವು ಹೆಚ್ಚಾಗಿದ್ದರೆ, ಪಟ್ಟಣದ ಕೆಲವು ಚರಂಡಿಗಳು ತುಂಬಿ ಹರಿಯುತ್ತಿದ್ದದ್ದು ಕಂಡುಬಂದಿತು. ಭಾರಿ ಮಳೆಗೆ ಜನರು ಪರದಾಡಿದರು.</p>.<p>ಇಂದಿಗೂ ಪಟ್ಟಣದಲ್ಲಿ ಚರಂಡಿ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಿಕೊಳ್ಳದ ಕಾರಣ ಸಮಸ್ಯೆಯಾಗಿದೆ. ಇಲ್ಲಿನ ತಾಲ್ಲೂಕು ಕಚೇರಿ ಎದುರು ಮಳೆ ನೀರು ಹರಿಯಲು ಸರಿಯಾದ ವ್ಯವಸ್ಥೆ ಇಲ್ಲದಿರುವುದರಿಂದ ಭಾರಿ ಮಳೆಗೆ ತಾಲ್ಲೂಕು ಕಚೇರಿ ಎದುರು ಕೆರೆಯಾಂತಾಗಿತ್ತು.</p>.<p>ಆಲೆಕಟ್ಟೆ ರಸ್ತೆಯ ಚಂಗಪ್ಪ ಎಂಬುವವರ ಮನೆಯಲ್ಲಿ ಬಾಡಿಗೆ ಇರುವ ನಿಂಗರಾಜು ಎಂಬುವವರ ಮನೆಗೆ ಮಳೆಯ ನೀರು ನುಗ್ಗಿ ಹಾನಿಯಾಗಿದೆ. ಇಲ್ಲಿನ ಚರಂಡಿ ವ್ಯವಸ್ಥೆ ಸರಿ ಇಲ್ಲದ ಕಾರಣ ಭಾರಿ ಮಳೆಯಿಂದ ಪಟ್ಟಣದಿಂದ ಈ ಭಾಗದಲ್ಲಿ ಹರಿಯುವ ನೀರು ಮನೆಗೆ ನುಗ್ಗಿರುವುದಾಗಿ ದೂರಿದ್ದಾರೆ. ಮಳೆಯ ನೀರಿನಿಂದ ಮನೆಯೊಳಗೆ ಇರಿಸಿದ್ದ ದಿನಸಿ ಸಾಮಾಗ್ರಿಗಳು ಸೇರಿದಂತೆ ನಷ್ಟವಾಗಿದೆ ಎಂದು ಮನೆಯ ನಿವಾಸಿ ನಿಂಗರಾಜು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>