ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಮಳೆ ಕಡಿಮೆಯಾಗಿದೆ. ಆದರೆ ಗುರುವಾರ ರಾತ್ರಿ ಬಿದ್ದ ಧಾರಾಕಾರ ಮಳೆಗೆ ನಗರದ ಹಾಕಿ ಮೈದಾನದ ಎದುರು ಮಣ್ಣು ಕುಸಿತವಾಗಿದೆ.
ಮಡಿಕೇರಿ-ಮಂಗಳೂರು ರಸ್ತೆಯಲ್ಲಿ ಮದೆನಾಡು ಸಮೀಪ ನಿರಂತರವಾಗಿ ಮಣ್ಣು ರಸ್ತೆಗೆ ಕುಸಿಯುತ್ತಿದೆ. ಹೀಗಾಗಿ, ತೆರವು ಕಾರ್ಯಾಚರಣೆಯೂ ನಿರಂತರ ನಡೆಯುತ್ತಿದೆ. ರಸ್ತೆಯ ಒಂದು ಭಾಗದಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.
ಸಂಸದ ಪ್ರತಾಪಸಿಂಹ ಶುಕ್ರವಾರ ತೆರವು ಕಾರ್ಯಾಚರಣೆ ಪರಿಶೀಲಿಸಿದರು.