ವಿರಾಜಪೇಟೆ: ಪಟ್ಟಣದಲ್ಲಿ ಮಂಗಳವಾರ ಸುರಿದ ಭಾರಿ ಗಾಳಿ, ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.
ಇಲ್ಲಿನ ಸುಂಕದ ಕಟ್ಟೆ ಬಳಿ ವಿದ್ಯುತ್ ಕಂಬಗಳು ಧರೆಗುರುಳಿವೆ. ಇದರಲ್ಲಿ ಒಂದು ಕಂಬವು ಆಟೊವೊಂದರ ಮೇಲೆ ಬಿದ್ದಿದೆ. ಪ್ರಯಾಣಿಕರು ಸ್ವಲ್ಪದರಲ್ಲೆ ಪಾರಾಗಿದ್ದಾರೆ. ಇದರಿಂದ ವಿರಾಜಪೇಟೆ-ಸಿದ್ದಾಪುರ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ.