<p><strong>ಕುಶಾಲನಗರ</strong>: ಪಟ್ಟಣದ ಕಾವೇರಿ ಬಡಾವಣೆಯಲ್ಲಿ ಹತ್ತು ಸೇಂಟ್ ಜಾಗದಲ್ಲಿ ₹1 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಹಾಗೂ ಹೈಟೆಕ್ ಮಾದರಿಯ ಹಸಿ ಮೀನು ಮಾರುಕಟ್ಟೆ ನಿರ್ಮಾಣ ಮಾಡಲು ಮಂಗಳವಾರ ನಡೆದ ಪುರಸಭೆ ಸಾಮಾನ್ಯ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಯಿತು.</p>.<p>ಇಲ್ಲಿನ ನೂತನ ಪುರಸಭೆ ಕಚೇರಿ ಸಭಾಂಗಣದಲ್ಲಿ ಅಧ್ಯಕ್ಷೆ ಜಯಲಕ್ಷ್ಮಿಚಂದ್ರು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಾಲ್ಲೂಕು ಮೀನುಗಾರಿಕಾ ಇಲಾಖೆ ಸಹಾಯಕ ನಿರ್ದೇಶಕಿ ಮಿಲನಾ ಭರತ್ ಮಾತನಾಡಿ, ‘ಕುಶಾಲನಗರ, ಸೋಮವಾರಪೇಟೆಗಳಲ್ಲಿ ಸುಸಜ್ಜಿತ, ಹೈಟೆಕ್ ಎರಡು ಮೀನುಗಾರಿಕೆ ಮಾರುಕಟ್ಟೆ ನಿರ್ಮಾಣಕ್ಕೆ ಡಿಪಿಆರ್ ಸಲ್ಲಿಸಿದ್ದು, ₹2 ಕೋಟಿ ಅನುದಾನಕ್ಕೆ ಪ್ರಸ್ತಾಪ ಸಲ್ಲಿಸಲಾಗಿದೆ’ ಎಂದು ಹೇಳಿದರು.</p>.<p>ಸದಸ್ಯ ತಿಮ್ಮಪ್ಪ ಮಾತನಾಡಿ, ‘ಜಾಗದ ದಾಖಲೆಗಳು ಯಾರ ಹೆಸರಿನಲ್ಲಿವೆ ಎಂಬುದನ್ನು ಮೊದಲು ಗುರುತಿಸಿ ಎಲ್ಲಾ ದಾಖಲೆಗಳನ್ನು ಸಂಗ್ರಹಿಸಿ ಮೀನುಗಾರಿಕೆ ಇಲಾಖೆಗೆ ವರ್ಗಾಯಿಸಲು ಕ್ರಮ ಕೈಗೊಳ್ಳಬೇಕು’ ಎಂದರು.</p>.<p>ಪಟ್ಟಣದಲ್ಲಿ ಯೋಜನೆ ಅನುಷ್ಠಾನಕ್ಕೆ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಯಿತು.</p>.<p>ಸೆಸ್ಕ್ ಅಧಿಕಾರಿ ಸುಮೇಶ್ ಮಾತನಾಡಿ, ‘ಪಟ್ಟಣದ ಎಲ್ಲಾ ಹಳೆಯ ವಿದ್ಯುತ್ ಕಂಬಗಳ ಬದಲಾವಣೆ ಹಾಗೂ ಹೊಸದಾಗಿ ಕೇಬಲ್ ಅಳವಡಿಕೆ, ಹೊಸ ಬಡಾವಣೆಗಳಿಗೆ ಟಿಸಿ ಅಳವಡಿಕೆ ಸೇರಿದಂತೆ ಇನ್ನಿತರ ಕಾಮಗಾರಿಗಳಿಗೆ ₹10 ಕೋಟಿ ಡಿಪಿಆರ್ ಸಿದ್ದಪಡಿಸಲಾಗಿದೆ. ಶೀಘ್ರ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ. ಜೊತೆಗೆ ಅಪಾಯಕಾರಿ ವಿದ್ಯುತ್ ಕಂಬಗಳನ್ನು ತ್ವರಿತವಾಗಿ ಬದಲಾವಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.</p>.<p>‘ಯುಜಿಡಿಗೆ ಬಿಡುಗಡೆಯಾದ ಅನುದಾನ ಹಾಗೂ ಕಾಮಗಾರಿ ಬಗ್ಗೆ ತನಿಖೆ ನಡೆಸಬೇಕು ಎಂದು ಕೈಗೊಂಡ ನಿರ್ಣಯದ ಬಗ್ಗೆ ಏನು ಕ್ರಮ ಕೈಗೊಂಡಿದ್ದಿರಿ’ ಎಂದು ಸದಸ್ಯ ಆನಂದ್ ಕುಮಾರ್, ಪ್ರಕಾಶ್ ಅಧ್ಯಕ್ಷರನ್ನು ಪ್ರಶ್ನಿಸಿದರು.</p>.<p>‘ಸರ್ಕಾರದ ಹಣ ಪೋಲಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕು’ ಎಂದು ಸದಸ್ಯ ತಿಮ್ಮಪ್ಪ ಆಗ್ರಹಿಸಿದರು.</p>.<p>ಜಲಮಂಡಳಿ ಕಾರ್ಯಪಾಲಕ ಎಂಜಿನಿಯರ್ ಉಮೇಶ್ಚಂದ್ರ ಮಾತನಾಡಿ, ‘ಯುಜಿಡಿ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಈಗ ಎಲ್ಲಾ ಮನೆಗಳಿಗೆ ಸಂಪರ್ಕ ನೀಡಿ ನಿರ್ವಹಣೆ ಮಾಡಬೇಕಾಗಿದೆ. ಅದಕ್ಕಾಗಿ ₹12.5 ಲಕ್ಷವನ್ನು ಪುರಸಭೆಯಿಂದ ನೀಡಬೇಕು’ ಎಂದು ಹೇಳಿದರು.</p>.<p>ಯುಜಿಡಿ ಕಾಮಗಾರಿ ಸರಿಯಾಗಿ ನಡೆದಿಲ್ಲ ಎಂದು ಸದಸ್ಯರು ದೂರಿದರು. ಯುಜಿಡಿ ಯಶಸ್ವಿಯಾಗಿರುವ ಪಟ್ಟಣಗಳಿಗೆ ಪುರಸಭೆಯಿಂದ ನಿಯೋಗ ತೆರಳಿ ಪರಿಶೀಲಿಸಿದ ಬಳಿಕ ಮುಂದಿನ ಕ್ರಮ ಕೈಗೊಳ್ಳೋಣ’ ಎಂದು ಹೇಳಿದರು.</p>.<p>ಹಳೆ ಮನೆಗಳಿಗೆ ಎನ್.ಒ.ಸಿ ನೀಡುತ್ತಿಲ್ಲ ಎಂದು ಸದಸ್ಯ ಜಗದೀಶ್ ದೂರಿದರು.</p>.<p>‘ಲೈಸೆನ್ಸ್ ಪಡೆಯದ ಮನೆಗಳಿಗೆ ಎನ್.ಒ.ಸಿ. ನೀಡದಂತೆ ಸುಪ್ರೀಂ ಕೋರ್ಟ್ ಆದೇಶವಿದೆ’ ಎಂದು ಮುಖ್ಯಾಧಿಕಾರಿ ಗಿರೀಶ್ ಹೇಳಿದರು.</p>.<p>ಸದಸ್ಯ ಜೈವರ್ಧನ್, ಆನಂದ್ ಕುಮಾರ್, ಅಮೃತ್ ರಾಜ್, ನವೀನ್, ಹರೀಶ್, ಪ್ರಕಾಶ್ ಮಾತನಾಡಿ, ಜನಸಾಮಾನ್ಯರಿಗೆ ತೊಂದರೆ ಆಗದಂತೆ ಹಳೆಯ ಮನೆಗಳಿಗೆ ಎನ್ಒಸಿ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>‘ಗೊಂದಿಬಸವನಹಳ್ಳಿಯಲ್ಲಿ ಒಣಗಿ ನಿಂತಿರುವ ಮರ ಬಿದ್ದರೆ ವಿದ್ಯುತ್ ಕಂಬಗಳಿಗೆ ಹಾನಿಯಾಗುತ್ತದೆ. ಇದರಿಂದ ಸಮಸ್ಯೆ ಎದುರಾಗಲಿದೆ. ಕೂಡಲೇ ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು’ ಜಗದೀಶ್ ಹಾಗೂ ಪ್ರಕಾಶ್ ಒತ್ತಾಯಿಸಿದರು.</p>.<p>‘ಬೆಂಡೆ ಬೆಟ್ಟದಿಂದ ಕಾಡಾನೆಗಳು ಗೊಂದಿಬಸವನಹಳ್ಳಿ ಕಡೆಗೆ ಬರುತ್ತಿದ್ದು, ಇವುಗಳ ನಿಯಂತ್ರಣಕ್ಕೆ ಕಂದಕ ನಿರ್ಮಿಸಬೇಕು. ಮಂಗಗಳ ಹಾವಳಿ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು’ ಸದಸ್ಯರಾದ ಪ್ರಕಾಶ್, ರೇಣುಕಾ ಒತ್ತಾಯಿಸಿದರು.</p>.<p>‘ದಂಡಿನಪೇಟೆ ಬಡಾವಣೆಯಲ್ಲಿ ವಿದ್ಯುತ್ ಕಂಬಗಳು ಹಾನಿಯಾಗಿ ಅಪಾಯವನ್ನು ಆಹ್ವಾನಿಸುತ್ತಿದ್ದರೂ ಅವುಗಳ ಬದಲಾವಣೆ ಮಾಡಿಲ್ಲ’ ಎಂದು ಸದಸ್ಯ ಆನಂದ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಸದಸ್ಯರಾದ ಶಿವಕುಮಾರ್, ಜಯಲಕ್ಷ್ಮಮ್ಮ, ನವೀನ, ಹರೀಶ್, ರೂಪಾ ಮಾತನಾಡಿ, ‘ತಮ್ಮ ವಾರ್ಡ್ಗಳಲ್ಲಿನ ಹಳೆಯ ವಿದ್ಯುತ್ ಕಂಬಗಳನ್ನು ಬದಲಿಸಬೇಕು’ ಎಂದು ಒತ್ತಾಯಿಸಿದರು.</p>.<p>ಪುರಸಭೆ ಉಪಾಧ್ಯಕ್ಷೆ ಪುಟ್ಟಲಕ್ಷ್ಮಿ, ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್, ಕಂದಾಯ ಅಧಿಕಾರಿ ರಾಮು, ಆರೋಗ್ಯ ಅಧಿಕಾರಿ ಉದಯಕುಮಾರ್ ಪಾಲ್ಗೊಂಡಿದ್ದರು.</p>.<p><strong>ಪುರಸಭೆಯಲ್ಲಿ ಅನುಮೋದನೆಯಾದ ವಿಷಯಗಳು</strong></p><p>*ಪುರಸಭೆ ವಾಣಿಜ್ಯ ಸಂಕೀರ್ಣಗಳ ಹರಾಜಿಗೆ ಟೆಂಡರ್ ಕರೆಯಲು ಒಪ್ಪಿಗೆ ಸೂಚಿಸಲಾಯಿತು.</p><p>*ಅಪರಾಧ ತಡೆಗೆ ಪೊಲೀಸ್ ಇಲಾಖೆ ಮನವಿ ಮೇರೆಗೆ ವಿವಿಧೆಡೆ ಸಿಸಿಟಿವಿ ಕ್ಯಾಮರಾ ಅಳವಡಿಕೆ ಗುಂಡೂರಾವ್ ಬಡಾವಣೆಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮಂಜೂರಾಗಿರುವ 25 ಸೆಂಟ್ ಜಾಗದ ಜೊತೆಗೆ ಹೆಚ್ಚುವರಿಯಾಗಿ 25 ಸೆಂಟ್ ಜಾಗ ನೀಡಲು ಸಮ್ಮತಿ </p><p>*ಪುರಸಭೆ ವ್ಯಾಪ್ತಿಯ ರಸ್ತೆಗಳ ಗುಂಡಿ ಮುಚ್ಚುವ ಕಾಮಗಾರಿಗೆ ಅನುಮೋದನೆ </p>.<p><strong>‘ನಾಲ್ಕು ತಿಂಗಳಲ್ಲಿ ₹88 ಲಕ್ಷ ವ್ಯತ್ಯಾಸ’</strong> </p><p>ಸಭೆ ಆರಂಭದಲ್ಲಿ ಕಳೆದ ಫೆಬ್ರುವರಿಯಿಂದ– ಮೇವರೆಗಿನ ಮಾಹೆಯ ಜಮಾ ಖರ್ಚಿನ ವರದಿಯಲ್ಲಿ ₹88 ಲಕ್ಷ ವ್ಯತ್ಯಾಸ ಕಂಡುಬಂದಿರುವ ಬಗ್ಗೆ ಸದಸ್ಯ ಡಿ.ಕೆ.ತಿಮ್ಮಪ್ಪ ಪ್ರಸ್ತಾಪಿಸಿ ಸ್ಪಷ್ಟೀಕರಣ ನೀಡುವಂತೆ ಒತ್ತಾಯಿಸಿದರು. ಈ ಬಗ್ಗೆ ಧ್ವನಿಗೂಡಿಸಿದ ಸದಸ್ಯರಾದ ಬಿ.ಜೈವರ್ಧನ್ ಹಾಗೂ ಅಮೃತ್ ರಾಜ್ ವರದಿಯ ಲೋಪದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.</p><p>ಜೊತೆಗೆ ಜಮಾ ಖರ್ಚಿನ ವರದಿಯನ್ನು ಸರಿಪಡಿಸಿ ಮುಂದಿನ ಸಭೆಗೆ ಮಂಡಿಸಿದ ನಂತರವೇ ಜಮಾ ಖರ್ಚಿನ ವರದಿಗೆ ಅನುಮೋದನೆ ನೀಡುವುದಾಗಿ ವಿರೋಧ ಪಕ್ಷದ ಸದಸ್ಯರು ಹೇಳಿದರು.</p><p> ‘ಲೆಕ್ಕಪತ್ರದಲ್ಲಿ ಆಗಿರುವ ತಾಂತ್ರಿಕ ಲೋಪದೋಷವನ್ನು ಸರಿಪಡಿಸಿ ಸಭೆಗೆ ಮಂಡಿಸಲಾಗುವುದು’ ಎಂದು ಮುಖ್ಯಾಧಿಕಾರಿ ಗಿರೀಶ್ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ</strong>: ಪಟ್ಟಣದ ಕಾವೇರಿ ಬಡಾವಣೆಯಲ್ಲಿ ಹತ್ತು ಸೇಂಟ್ ಜಾಗದಲ್ಲಿ ₹1 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಹಾಗೂ ಹೈಟೆಕ್ ಮಾದರಿಯ ಹಸಿ ಮೀನು ಮಾರುಕಟ್ಟೆ ನಿರ್ಮಾಣ ಮಾಡಲು ಮಂಗಳವಾರ ನಡೆದ ಪುರಸಭೆ ಸಾಮಾನ್ಯ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಯಿತು.</p>.<p>ಇಲ್ಲಿನ ನೂತನ ಪುರಸಭೆ ಕಚೇರಿ ಸಭಾಂಗಣದಲ್ಲಿ ಅಧ್ಯಕ್ಷೆ ಜಯಲಕ್ಷ್ಮಿಚಂದ್ರು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಾಲ್ಲೂಕು ಮೀನುಗಾರಿಕಾ ಇಲಾಖೆ ಸಹಾಯಕ ನಿರ್ದೇಶಕಿ ಮಿಲನಾ ಭರತ್ ಮಾತನಾಡಿ, ‘ಕುಶಾಲನಗರ, ಸೋಮವಾರಪೇಟೆಗಳಲ್ಲಿ ಸುಸಜ್ಜಿತ, ಹೈಟೆಕ್ ಎರಡು ಮೀನುಗಾರಿಕೆ ಮಾರುಕಟ್ಟೆ ನಿರ್ಮಾಣಕ್ಕೆ ಡಿಪಿಆರ್ ಸಲ್ಲಿಸಿದ್ದು, ₹2 ಕೋಟಿ ಅನುದಾನಕ್ಕೆ ಪ್ರಸ್ತಾಪ ಸಲ್ಲಿಸಲಾಗಿದೆ’ ಎಂದು ಹೇಳಿದರು.</p>.<p>ಸದಸ್ಯ ತಿಮ್ಮಪ್ಪ ಮಾತನಾಡಿ, ‘ಜಾಗದ ದಾಖಲೆಗಳು ಯಾರ ಹೆಸರಿನಲ್ಲಿವೆ ಎಂಬುದನ್ನು ಮೊದಲು ಗುರುತಿಸಿ ಎಲ್ಲಾ ದಾಖಲೆಗಳನ್ನು ಸಂಗ್ರಹಿಸಿ ಮೀನುಗಾರಿಕೆ ಇಲಾಖೆಗೆ ವರ್ಗಾಯಿಸಲು ಕ್ರಮ ಕೈಗೊಳ್ಳಬೇಕು’ ಎಂದರು.</p>.<p>ಪಟ್ಟಣದಲ್ಲಿ ಯೋಜನೆ ಅನುಷ್ಠಾನಕ್ಕೆ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಯಿತು.</p>.<p>ಸೆಸ್ಕ್ ಅಧಿಕಾರಿ ಸುಮೇಶ್ ಮಾತನಾಡಿ, ‘ಪಟ್ಟಣದ ಎಲ್ಲಾ ಹಳೆಯ ವಿದ್ಯುತ್ ಕಂಬಗಳ ಬದಲಾವಣೆ ಹಾಗೂ ಹೊಸದಾಗಿ ಕೇಬಲ್ ಅಳವಡಿಕೆ, ಹೊಸ ಬಡಾವಣೆಗಳಿಗೆ ಟಿಸಿ ಅಳವಡಿಕೆ ಸೇರಿದಂತೆ ಇನ್ನಿತರ ಕಾಮಗಾರಿಗಳಿಗೆ ₹10 ಕೋಟಿ ಡಿಪಿಆರ್ ಸಿದ್ದಪಡಿಸಲಾಗಿದೆ. ಶೀಘ್ರ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ. ಜೊತೆಗೆ ಅಪಾಯಕಾರಿ ವಿದ್ಯುತ್ ಕಂಬಗಳನ್ನು ತ್ವರಿತವಾಗಿ ಬದಲಾವಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.</p>.<p>‘ಯುಜಿಡಿಗೆ ಬಿಡುಗಡೆಯಾದ ಅನುದಾನ ಹಾಗೂ ಕಾಮಗಾರಿ ಬಗ್ಗೆ ತನಿಖೆ ನಡೆಸಬೇಕು ಎಂದು ಕೈಗೊಂಡ ನಿರ್ಣಯದ ಬಗ್ಗೆ ಏನು ಕ್ರಮ ಕೈಗೊಂಡಿದ್ದಿರಿ’ ಎಂದು ಸದಸ್ಯ ಆನಂದ್ ಕುಮಾರ್, ಪ್ರಕಾಶ್ ಅಧ್ಯಕ್ಷರನ್ನು ಪ್ರಶ್ನಿಸಿದರು.</p>.<p>‘ಸರ್ಕಾರದ ಹಣ ಪೋಲಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕು’ ಎಂದು ಸದಸ್ಯ ತಿಮ್ಮಪ್ಪ ಆಗ್ರಹಿಸಿದರು.</p>.<p>ಜಲಮಂಡಳಿ ಕಾರ್ಯಪಾಲಕ ಎಂಜಿನಿಯರ್ ಉಮೇಶ್ಚಂದ್ರ ಮಾತನಾಡಿ, ‘ಯುಜಿಡಿ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಈಗ ಎಲ್ಲಾ ಮನೆಗಳಿಗೆ ಸಂಪರ್ಕ ನೀಡಿ ನಿರ್ವಹಣೆ ಮಾಡಬೇಕಾಗಿದೆ. ಅದಕ್ಕಾಗಿ ₹12.5 ಲಕ್ಷವನ್ನು ಪುರಸಭೆಯಿಂದ ನೀಡಬೇಕು’ ಎಂದು ಹೇಳಿದರು.</p>.<p>ಯುಜಿಡಿ ಕಾಮಗಾರಿ ಸರಿಯಾಗಿ ನಡೆದಿಲ್ಲ ಎಂದು ಸದಸ್ಯರು ದೂರಿದರು. ಯುಜಿಡಿ ಯಶಸ್ವಿಯಾಗಿರುವ ಪಟ್ಟಣಗಳಿಗೆ ಪುರಸಭೆಯಿಂದ ನಿಯೋಗ ತೆರಳಿ ಪರಿಶೀಲಿಸಿದ ಬಳಿಕ ಮುಂದಿನ ಕ್ರಮ ಕೈಗೊಳ್ಳೋಣ’ ಎಂದು ಹೇಳಿದರು.</p>.<p>ಹಳೆ ಮನೆಗಳಿಗೆ ಎನ್.ಒ.ಸಿ ನೀಡುತ್ತಿಲ್ಲ ಎಂದು ಸದಸ್ಯ ಜಗದೀಶ್ ದೂರಿದರು.</p>.<p>‘ಲೈಸೆನ್ಸ್ ಪಡೆಯದ ಮನೆಗಳಿಗೆ ಎನ್.ಒ.ಸಿ. ನೀಡದಂತೆ ಸುಪ್ರೀಂ ಕೋರ್ಟ್ ಆದೇಶವಿದೆ’ ಎಂದು ಮುಖ್ಯಾಧಿಕಾರಿ ಗಿರೀಶ್ ಹೇಳಿದರು.</p>.<p>ಸದಸ್ಯ ಜೈವರ್ಧನ್, ಆನಂದ್ ಕುಮಾರ್, ಅಮೃತ್ ರಾಜ್, ನವೀನ್, ಹರೀಶ್, ಪ್ರಕಾಶ್ ಮಾತನಾಡಿ, ಜನಸಾಮಾನ್ಯರಿಗೆ ತೊಂದರೆ ಆಗದಂತೆ ಹಳೆಯ ಮನೆಗಳಿಗೆ ಎನ್ಒಸಿ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>‘ಗೊಂದಿಬಸವನಹಳ್ಳಿಯಲ್ಲಿ ಒಣಗಿ ನಿಂತಿರುವ ಮರ ಬಿದ್ದರೆ ವಿದ್ಯುತ್ ಕಂಬಗಳಿಗೆ ಹಾನಿಯಾಗುತ್ತದೆ. ಇದರಿಂದ ಸಮಸ್ಯೆ ಎದುರಾಗಲಿದೆ. ಕೂಡಲೇ ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು’ ಜಗದೀಶ್ ಹಾಗೂ ಪ್ರಕಾಶ್ ಒತ್ತಾಯಿಸಿದರು.</p>.<p>‘ಬೆಂಡೆ ಬೆಟ್ಟದಿಂದ ಕಾಡಾನೆಗಳು ಗೊಂದಿಬಸವನಹಳ್ಳಿ ಕಡೆಗೆ ಬರುತ್ತಿದ್ದು, ಇವುಗಳ ನಿಯಂತ್ರಣಕ್ಕೆ ಕಂದಕ ನಿರ್ಮಿಸಬೇಕು. ಮಂಗಗಳ ಹಾವಳಿ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು’ ಸದಸ್ಯರಾದ ಪ್ರಕಾಶ್, ರೇಣುಕಾ ಒತ್ತಾಯಿಸಿದರು.</p>.<p>‘ದಂಡಿನಪೇಟೆ ಬಡಾವಣೆಯಲ್ಲಿ ವಿದ್ಯುತ್ ಕಂಬಗಳು ಹಾನಿಯಾಗಿ ಅಪಾಯವನ್ನು ಆಹ್ವಾನಿಸುತ್ತಿದ್ದರೂ ಅವುಗಳ ಬದಲಾವಣೆ ಮಾಡಿಲ್ಲ’ ಎಂದು ಸದಸ್ಯ ಆನಂದ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಸದಸ್ಯರಾದ ಶಿವಕುಮಾರ್, ಜಯಲಕ್ಷ್ಮಮ್ಮ, ನವೀನ, ಹರೀಶ್, ರೂಪಾ ಮಾತನಾಡಿ, ‘ತಮ್ಮ ವಾರ್ಡ್ಗಳಲ್ಲಿನ ಹಳೆಯ ವಿದ್ಯುತ್ ಕಂಬಗಳನ್ನು ಬದಲಿಸಬೇಕು’ ಎಂದು ಒತ್ತಾಯಿಸಿದರು.</p>.<p>ಪುರಸಭೆ ಉಪಾಧ್ಯಕ್ಷೆ ಪುಟ್ಟಲಕ್ಷ್ಮಿ, ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್, ಕಂದಾಯ ಅಧಿಕಾರಿ ರಾಮು, ಆರೋಗ್ಯ ಅಧಿಕಾರಿ ಉದಯಕುಮಾರ್ ಪಾಲ್ಗೊಂಡಿದ್ದರು.</p>.<p><strong>ಪುರಸಭೆಯಲ್ಲಿ ಅನುಮೋದನೆಯಾದ ವಿಷಯಗಳು</strong></p><p>*ಪುರಸಭೆ ವಾಣಿಜ್ಯ ಸಂಕೀರ್ಣಗಳ ಹರಾಜಿಗೆ ಟೆಂಡರ್ ಕರೆಯಲು ಒಪ್ಪಿಗೆ ಸೂಚಿಸಲಾಯಿತು.</p><p>*ಅಪರಾಧ ತಡೆಗೆ ಪೊಲೀಸ್ ಇಲಾಖೆ ಮನವಿ ಮೇರೆಗೆ ವಿವಿಧೆಡೆ ಸಿಸಿಟಿವಿ ಕ್ಯಾಮರಾ ಅಳವಡಿಕೆ ಗುಂಡೂರಾವ್ ಬಡಾವಣೆಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮಂಜೂರಾಗಿರುವ 25 ಸೆಂಟ್ ಜಾಗದ ಜೊತೆಗೆ ಹೆಚ್ಚುವರಿಯಾಗಿ 25 ಸೆಂಟ್ ಜಾಗ ನೀಡಲು ಸಮ್ಮತಿ </p><p>*ಪುರಸಭೆ ವ್ಯಾಪ್ತಿಯ ರಸ್ತೆಗಳ ಗುಂಡಿ ಮುಚ್ಚುವ ಕಾಮಗಾರಿಗೆ ಅನುಮೋದನೆ </p>.<p><strong>‘ನಾಲ್ಕು ತಿಂಗಳಲ್ಲಿ ₹88 ಲಕ್ಷ ವ್ಯತ್ಯಾಸ’</strong> </p><p>ಸಭೆ ಆರಂಭದಲ್ಲಿ ಕಳೆದ ಫೆಬ್ರುವರಿಯಿಂದ– ಮೇವರೆಗಿನ ಮಾಹೆಯ ಜಮಾ ಖರ್ಚಿನ ವರದಿಯಲ್ಲಿ ₹88 ಲಕ್ಷ ವ್ಯತ್ಯಾಸ ಕಂಡುಬಂದಿರುವ ಬಗ್ಗೆ ಸದಸ್ಯ ಡಿ.ಕೆ.ತಿಮ್ಮಪ್ಪ ಪ್ರಸ್ತಾಪಿಸಿ ಸ್ಪಷ್ಟೀಕರಣ ನೀಡುವಂತೆ ಒತ್ತಾಯಿಸಿದರು. ಈ ಬಗ್ಗೆ ಧ್ವನಿಗೂಡಿಸಿದ ಸದಸ್ಯರಾದ ಬಿ.ಜೈವರ್ಧನ್ ಹಾಗೂ ಅಮೃತ್ ರಾಜ್ ವರದಿಯ ಲೋಪದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.</p><p>ಜೊತೆಗೆ ಜಮಾ ಖರ್ಚಿನ ವರದಿಯನ್ನು ಸರಿಪಡಿಸಿ ಮುಂದಿನ ಸಭೆಗೆ ಮಂಡಿಸಿದ ನಂತರವೇ ಜಮಾ ಖರ್ಚಿನ ವರದಿಗೆ ಅನುಮೋದನೆ ನೀಡುವುದಾಗಿ ವಿರೋಧ ಪಕ್ಷದ ಸದಸ್ಯರು ಹೇಳಿದರು.</p><p> ‘ಲೆಕ್ಕಪತ್ರದಲ್ಲಿ ಆಗಿರುವ ತಾಂತ್ರಿಕ ಲೋಪದೋಷವನ್ನು ಸರಿಪಡಿಸಿ ಸಭೆಗೆ ಮಂಡಿಸಲಾಗುವುದು’ ಎಂದು ಮುಖ್ಯಾಧಿಕಾರಿ ಗಿರೀಶ್ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>