ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಮನರಂಜನೆ ದೃಷ್ಟಿಯಿಂದ ಮಕ್ಕಳು ಬುರ್ಖಾ ಮತ್ತು ಹಿಜಾಬ್ ಧರಿಸಿ ನೃತ್ಯ ಮಾಡಿದ್ದರು. ವಜ್ರಮಹೋತ್ಸವ ಮೇ 28, 29ರಂದು ನಡೆದಿತ್ತು. ಮೊದಲ ದಿನದಂದು ಬೆಳಿಗ್ಗೆ ನಡೆದಿದ್ದ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಹಾಜರಿದ್ದು, ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ತೆರಳಿದ್ದರು. ಮಧ್ಯಾಹ್ನ 3 ಗಂಟೆಯ ಬಳಿಕ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವೀಣಾ ಹಾಜರಿರಲಿಲ್ಲ. ಆಗ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿವೆ. ಮಕ್ಕಳು ಛದ್ಮವೇಷದ ಸಲುವಾಗಿ ಮುಖ ಕಾಣಬಾರದೆನ್ನುವ ಉದ್ದೇಶದಿಂದ ಬುರ್ಖಾ ಮತ್ತು ಹಿಜಾಬ್ ಧರಿಸಿ ಕೊಡವ ವಾಲಗಕ್ಕೆ ಹೆಜ್ಜೆ ಹಾಕಿದ್ದಾರೆ’ ಎಂದು ತಿಳಿಸಿದರು.