ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗಿನಲ್ಲಿ ಮುಸ್ಲಿಂ ವರ್ತಕರ ಅಂಗಡಿ ತೆರವುಗೊಳಿಸಿದ ಬಜರಂಗದಳದ ಕಾರ್ಯಕರ್ತರು

Last Updated 25 ಮಾರ್ಚ್ 2022, 12:57 IST
ಅಕ್ಷರ ಗಾತ್ರ

ಶನಿವಾರಸಂತೆ (ಕೊಡಗು): ಸಮೀಪದ ತಪೋವನ ಕ್ಷೇತ್ರದ ಮನೇಹಳ್ಳಿ ಮಠದ ಬಿಲ್ವ ಗೋಶಾಲೆಯ ದಶಮಾನೋತ್ಸವದ ಅಂಗವಾಗಿ ಆಯೋಜಿಸಿದ್ದ ‘ಕುಲ ಗೋವು ಸಮ್ಮೇಳನ’ದಲ್ಲಿ ಮುಸ್ಲಿಂ ಸಮುದಾಯದವರಿಗೆ ವ್ಯಾಪಾರ ನಡೆಸಲು ಬಜರಂಗದಳದ ಕಾರ್ಯಕರ್ತರು ಅವಕಾಶ ನೀಡಲಿಲ್ಲ. ರಸ್ತೆ ಬದಿ ಹಾಗೂ ಮೈದಾನದಲ್ಲಿ ಹಾಕಿದ್ದ ಅಂಗಡಿಗಳನ್ನು ಕಾರ್ಯಕರ್ತರು ಶುಕ್ರವಾರ ತೆರವುಗೊಳಿಸಿದರು.

ಮಕ್ಕಳ ಆಟಿಕೆ ವಸ್ತು, ಕಬ್ಬಿನ ಜ್ಯೂಸ್, ತಿಂಡಿ ತಿನಿಸುಗಳ ಮಳಿಗೆಯನ್ನು ಮುಸ್ಲಿಂ ಸಮುದಾಯದ ವರ್ತಕರು ಹಾಕಿದ್ದರು.
‘ಗೋವು ಹತ್ಯೆ ಮಾಡುವರು, ಗೋವು ಸಮ್ಮೇಳನಕ್ಕೆ ಏಕೆ ಬರಬೇಕು. ಅವರಿಗೆ ಅವಕಾಶ ನೀಡುವುದಿಲ್ಲ’ ಎಂದು ಕಾರ್ಯಕತರು ಆಕ್ರೋಶ ಹೊರಹಾಕಿದರು.

‘ಹಿಂದೂಗಳು ನಡೆಸುವ ಜಾತ್ರೆಯ ವೇಳೆ ಮುಸ್ಲಿಂ ವರ್ತಕರಿಗೆ ಅವಕಾಶ ನೀಡುವುದಿಲ್ಲ. ಬೇಕಿದ್ದರೆ ಅವರ ಧಾರ್ಮಿಕ ಸ್ಥಳಗಳ ಬಳಿ ವ್ಯಾಪಾರ ಮಾಡಿಕೊಳ್ಳಲಿ’ ಎಂದು ಸೋಮವಾರಪೇಟೆ ತಾಲ್ಲೂಕು ಸಂಚಾಲಕ ಜೀವನ್‌ ಆಗ್ರಹಿಸಿದರು.

ಬಜರಂಗದಳ ಪ್ರಖಂಡರಾದ ಜೀವನ್ ನೇಗಳ್ಳೆ, ಮಧು ಕಿಬ್ಬೆಟ್ಟ, ಪ್ರದೀಪ್, ಪಿ.ಕೆ.ರವಿ, ತನ್ಮಯ್, ಸತ್ಯ, ವಿಶ್ವ, ನಿಶ್ಚಿತ್, ಯಶು, ಮಂಜೇಶ, ದರ್ಶನ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT