<p><strong>ಮಡಿಕೇರಿ:</strong> ಇಂದಿನ ಮಕ್ಕಳು ಹೆಚ್ಚಿನ ಆಸಕ್ತಿಯಿಂದ ಅಧ್ಯಯನ ಮಾಡಿದರೆ, ಭವಿಷ್ಯದಲ್ಲಿ ಪ್ರತಿಯೊಬ್ಬರೂ ಹೊಸ ಇತಿಹಾಸವನ್ನು ದಾಖಲಿಸಲು ಸಾಧ್ಯವಿದೆ ಎಂದು ಲೇಖಕಿ ಸರಿತಾ ಮಂದಣ್ಣ ಹೇಳಿದರು.</p>.<p>ಅವರು ಈಚೆಗೆ ಇಲ್ಲಿನ ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದರು.</p>.<p>ಇತಿಹಾಸ ಎಂದರೆ ಕೇವಲ ವರ್ಷಗಳು ಮತ್ತು ದಿನಾಂಕಗಳು ಮಾತ್ರವಲ್ಲ. ಆಗಿನ ಕಾಲಘಟ್ಟವನ್ನು ಮನಗಂಡು ಅದರ ಪ್ರಭಾವವನ್ನು ಅರಿಯುವುದೇ ನಿಜವಾದ ಇತಿಹಾಸ ಅಧ್ಯಯನ ಎಂದು ಪ್ರತಿಪಾದಿಸಿದರು.</p>.<p>ಇತಿಹಾಸವನ್ನು ತಿಳಿದುಕೊಂಡು ಅದನ್ನು ಸರಳವಾಗಿ ಕಥೆಯ ರೂಪದಲ್ಲಿ ಹೇಗೆ ಬರೆಯಬೇಕು ಎಂಬ ಕುರಿತು ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.</p>.<p>ಕೊಡಗು ವಿದ್ಯಾಲಯದ ಆಡಳಿತ ಮಂಡಳಿ ನಿರ್ದೇಶಕಿ ನಿಯತಾ ದೇವಯ್ಯ ಸೋಮಣ್ಣ, ಪ್ರಾಂಶುಪಾಲರಾದ ಕೆ.ಎಸ್.ಸುಮಿತ್ರಾ, ಆಡಳಿತಾಧಿಕಾರಿ ಪಿ.ರವಿ ಹಾಗೂ ಶಿಕ್ಷಕ ವೃಂದದವರು ಭಾಗವಹಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಇಂದಿನ ಮಕ್ಕಳು ಹೆಚ್ಚಿನ ಆಸಕ್ತಿಯಿಂದ ಅಧ್ಯಯನ ಮಾಡಿದರೆ, ಭವಿಷ್ಯದಲ್ಲಿ ಪ್ರತಿಯೊಬ್ಬರೂ ಹೊಸ ಇತಿಹಾಸವನ್ನು ದಾಖಲಿಸಲು ಸಾಧ್ಯವಿದೆ ಎಂದು ಲೇಖಕಿ ಸರಿತಾ ಮಂದಣ್ಣ ಹೇಳಿದರು.</p>.<p>ಅವರು ಈಚೆಗೆ ಇಲ್ಲಿನ ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದರು.</p>.<p>ಇತಿಹಾಸ ಎಂದರೆ ಕೇವಲ ವರ್ಷಗಳು ಮತ್ತು ದಿನಾಂಕಗಳು ಮಾತ್ರವಲ್ಲ. ಆಗಿನ ಕಾಲಘಟ್ಟವನ್ನು ಮನಗಂಡು ಅದರ ಪ್ರಭಾವವನ್ನು ಅರಿಯುವುದೇ ನಿಜವಾದ ಇತಿಹಾಸ ಅಧ್ಯಯನ ಎಂದು ಪ್ರತಿಪಾದಿಸಿದರು.</p>.<p>ಇತಿಹಾಸವನ್ನು ತಿಳಿದುಕೊಂಡು ಅದನ್ನು ಸರಳವಾಗಿ ಕಥೆಯ ರೂಪದಲ್ಲಿ ಹೇಗೆ ಬರೆಯಬೇಕು ಎಂಬ ಕುರಿತು ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.</p>.<p>ಕೊಡಗು ವಿದ್ಯಾಲಯದ ಆಡಳಿತ ಮಂಡಳಿ ನಿರ್ದೇಶಕಿ ನಿಯತಾ ದೇವಯ್ಯ ಸೋಮಣ್ಣ, ಪ್ರಾಂಶುಪಾಲರಾದ ಕೆ.ಎಸ್.ಸುಮಿತ್ರಾ, ಆಡಳಿತಾಧಿಕಾರಿ ಪಿ.ರವಿ ಹಾಗೂ ಶಿಕ್ಷಕ ವೃಂದದವರು ಭಾಗವಹಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>